ಸಿಂಗಾಪುರದಲ್ಲಿ ಮಂಡ್ಯರಮೇಶ್ ತಂಡದಿಂದ ನಾಟಕ ಪ್ರದರ್ಶನ
ಸಿಂಗಾಪುರದ ಕನ್ನಡ ಸಂಘವು ಪ್ರತೀ ವರ್ಷ ಅದ್ಧೂರಿಯಾಗಿ ಆಯೋಜಿಸುವ 'ಸಿಂಗಾರ ಕನ್ನಡ ಸಂಸ್ಕೃತಿ ಸಮ್ಮೇಳನ'ದಲ್ಲಿ ಮಂಡ್ಯರಮೇಶ್ ನೇತೃತ್ವದ ನಟನ ರಂಗಶಾಲೆಯ ಎರಡು ನಾಟಕಗಳು ಪ್ರದರ್ಶನಗೊಳ್ಳಲಿವೆ. ಸಿಂಗಾಪುರ ಪಾಲಿಟೆಕ್ನಿಕ್ ಕನ್ವೆನ್ಷನ್ ಸೆಂಟರ್ ನಲ್ಲಿ ಅಕ್ಟೋಬರ್ 29 ಮತ್ತು 30ರಂದು ನಟನದ ನಾಟಕಗಳು ಪ್ರದರ್ಶನಗೊಳ್ಳಲಿವೆ.
ಅಕ್ಟೋಬರ್ 29ರಂದು ಡಾ.ಸುಜಾತಾ ಅಕ್ಕಿ ಅವರ ಜಾನಪದ ಸೊಗಡಿನ ನಾಟಕ 'ಚಾಮಚಲುವೆ' ಪ್ರದರ್ಶನಗೊಳ್ಳಲಿದ್ದು, ಅಕ್ಟೋಬರ್ 30ರಂದು ಜ್ಞಾನಪೀಠ ಪುರಸ್ಕೃತ ವರಕವಿ ದ.ರಾ.ಬೇಂದ್ರೆ ಅವರ ಪ್ರಖ್ಯಾತ ವಿಡಂಬನೆಯಾದ 'ಸಾಯೋ ಆಟ' ಪ್ರದರ್ಶನಗೊಳ್ಳಲಿದೆ.

ಈ ಎರಡೂ ನಾಟಕಗಳನ್ನು ಮಂಡ್ಯ ರಮೇಶ್ ಅವರು ನಿರ್ದೇಶಿಸಿದ್ದು, ಅವರೊಂದಿಗೆ ಕಲಾವಿದರಾದ ಮೇಘ ಸಮೀರ, ರಾಮು ನಟನ, ರಾಗ್ ಅರಸ್, ದಿಶಾ ರಮೇಶ್, ಕಾವ್ಯಾ ರಾಜೇಂದ್ರ, ಛಾಯಾಶ್ರೀ ಮೈಸೂರು, ದೇವಾನಂದ ವರಪ್ರಸಾದ್ ಮತ್ತು ಸಿರೀಶ್ ಚಂದ್ರಶೇಖರ್ ಅವರು ಕೈಜೋಡಿಸಿದ್ದು, ಸಿಂಗಾಪುರಕ್ಕೆ ತೆರಳಲಿದ್ದಾರೆ.
ಕಳೆದ ಮೂವತ್ತು ವರ್ಷಗಳಲ್ಲಿ ರಂಗಾಯಣದ ನಂತರ ವಿದೇಶದಲ್ಲಿ ನಾಟಕ ಪ್ರದರ್ಶನ ನೀಡುತ್ತಿರುವ ಮೈಸೂರಿನ ಏಕೈಕ ತಂಡ ಎನ್ನುವ ಅಗ್ಗಳಿಕೆ ನಟನ ರಂಗಶಾಲೆಯದಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications