ಸಿಂಗಾಪುರದಲ್ಲಿ ಮಂಡ್ಯರಮೇಶ್ ತಂಡದಿಂದ ನಾಟಕ ಪ್ರದರ್ಶನ
ಸಿಂಗಾಪುರದ ಕನ್ನಡ ಸಂಘವು ಪ್ರತೀ ವರ್ಷ ಅದ್ಧೂರಿಯಾಗಿ ಆಯೋಜಿಸುವ 'ಸಿಂಗಾರ ಕನ್ನಡ ಸಂಸ್ಕೃತಿ ಸಮ್ಮೇಳನ'ದಲ್ಲಿ ಮಂಡ್ಯರಮೇಶ್ ನೇತೃತ್ವದ ನಟನ ರಂಗಶಾಲೆಯ ಎರಡು ನಾಟಕಗಳು ಪ್ರದರ್ಶನಗೊಳ್ಳಲಿವೆ. ಸಿಂಗಾಪುರ ಪಾಲಿಟೆಕ್ನಿಕ್ ಕನ್ವೆನ್ಷನ್ ಸೆಂಟರ್ ನಲ್ಲಿ ಅಕ್ಟೋಬರ್ 29 ಮತ್ತು 30ರಂದು ನಟನದ ನಾಟಕಗಳು ಪ್ರದರ್ಶನಗೊಳ್ಳಲಿವೆ.
ಅಕ್ಟೋಬರ್ 29ರಂದು ಡಾ.ಸುಜಾತಾ ಅಕ್ಕಿ ಅವರ ಜಾನಪದ ಸೊಗಡಿನ ನಾಟಕ 'ಚಾಮಚಲುವೆ' ಪ್ರದರ್ಶನಗೊಳ್ಳಲಿದ್ದು, ಅಕ್ಟೋಬರ್ 30ರಂದು ಜ್ಞಾನಪೀಠ ಪುರಸ್ಕೃತ ವರಕವಿ ದ.ರಾ.ಬೇಂದ್ರೆ ಅವರ ಪ್ರಖ್ಯಾತ ವಿಡಂಬನೆಯಾದ 'ಸಾಯೋ ಆಟ' ಪ್ರದರ್ಶನಗೊಳ್ಳಲಿದೆ.

ಈ ಎರಡೂ ನಾಟಕಗಳನ್ನು ಮಂಡ್ಯ ರಮೇಶ್ ಅವರು ನಿರ್ದೇಶಿಸಿದ್ದು, ಅವರೊಂದಿಗೆ ಕಲಾವಿದರಾದ ಮೇಘ ಸಮೀರ, ರಾಮು ನಟನ, ರಾಗ್ ಅರಸ್, ದಿಶಾ ರಮೇಶ್, ಕಾವ್ಯಾ ರಾಜೇಂದ್ರ, ಛಾಯಾಶ್ರೀ ಮೈಸೂರು, ದೇವಾನಂದ ವರಪ್ರಸಾದ್ ಮತ್ತು ಸಿರೀಶ್ ಚಂದ್ರಶೇಖರ್ ಅವರು ಕೈಜೋಡಿಸಿದ್ದು, ಸಿಂಗಾಪುರಕ್ಕೆ ತೆರಳಲಿದ್ದಾರೆ.
ಕಳೆದ ಮೂವತ್ತು ವರ್ಷಗಳಲ್ಲಿ ರಂಗಾಯಣದ ನಂತರ ವಿದೇಶದಲ್ಲಿ ನಾಟಕ ಪ್ರದರ್ಶನ ನೀಡುತ್ತಿರುವ ಮೈಸೂರಿನ ಏಕೈಕ ತಂಡ ಎನ್ನುವ ಅಗ್ಗಳಿಕೆ ನಟನ ರಂಗಶಾಲೆಯದಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications