ದುಬೈನ 'ಧ್ವನಿ' ರಂಗಸಿರಿ ಉತ್ಸವದಲ್ಲಿ 'ಮೃಚ್ಛಕಟಿಕ' ನಾಟಕ
ಭಾರತೀಯ ರಂಗಭೂಮಿಯ ಶ್ರೇಷ್ಠ ಹಾಗು ಪ್ರಖ್ಯಾತ ಕನ್ನಡ ನಾಟಕಗಳನ್ನು ದುಬೈಯಲ್ಲಿ ಸತತವಾಗಿ ರಂಗವೇರಿಸುತ್ತಿರುವ ಏಕೈಕ ಕನ್ನಡ ವೇದಿಕೆ, 'ಧ್ವನಿ ಪ್ರತಿಷ್ಠಾನ'ದ 33ನೇ ವಾರ್ಷಿಕೋತ್ಸವದ ಅಂಗವಾಗಿ "ಧ್ವನಿ" ರಂಗ ಸಿರಿ ಉತ್ಸವವನ್ನು 2019ರ ಫೆಬ್ರವರಿ 8ರಂದು ಆಯೋಜಿಸಲಾಗಿದೆ.
ಪ್ರೆಶಿಯಸ್ ಪಾರ್ಟೀಸ್ ಮತ್ತು ಎಂಟರ್ಟೈನ್ಮೆಂಟ್ ಅವರ ಪ್ರಸ್ತುತಿಯಲ್ಲಿ ನಡೆಸಲಾಗುತ್ತಿರುವ ಈ ಉತ್ಸವವನ್ನು ಫೆಬ್ರವರಿ 8ರಂದು ಸಂಜೆ 5-15ರಿಂದ ಎಮಿರೇಟ್ಸ್ ಥಿಯೇಟರ್ ಜುಮೇರಾ, ದುಬೈಯಲ್ಲಿ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾಗಿ 'ಮೃಚ್ಛಕಟಿಕ' ಎಂಬ ಕನ್ನಡ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ.
ಮೃಚ್ಛಕಟಿಕ - ಸಂಸ್ಕೃತ ಮಹಾಕವಿ ಶೂದ್ರಕನಿಂದ ಸುಮಾರು 3-4ನೇ ಶತಮಾನದಲ್ಲಿ ರಚನೆಗೊಂಡ ಭಾರತದ ಮೊಟ್ಟ ಮೊದಲ ಸಾಮಾಜಿಕ ನಾಟಕ. ಇದರಲ್ಲಿ ಕವಿ ಬಳಸಿಕೊಂಡ ಘಟನೆಗಳು ಹಾಗು ವಿಚಾರಗಳು ಇಂದಿಗೂ ಪ್ರಸುತ ಮತ್ತು ಸರ್ವಕಾಲಿಕ. ಈ ನಾಟಕ ಭಾರತದ ಬಹುತೇಕ ಎಲ್ಲಾ ಭಾಷೆಗಳ ಜೊತೆಗೆ ಇಂಗ್ಲಿಷ್ ಭಾಷೆಗೂ ತರ್ಜಿಮೆಗೊಂಡಿದೆ. 18ನೆಯ ಶತಮಾನದಲ್ಲಿಯೇ ಇದರ ಇಂಗ್ಲಿಷ್ ರೂಪ Toy cart ನಂತರ ಪುನಃ ಭಾಷಾಂತರಗೊಂಡು The Little Clay Cart ಅಮೆರಿಕ ಹಾಗು ಯುರೋಪಿನಾದ್ಯಂತ ಪ್ರದರ್ಶನಗೊಂಡಿದೆ. ಡಾ. ಎನ್ .ಎಸ್ .ಲಕ್ಷ್ಮೀನಾರಾಯಣ ಭಟ್ಟರವರು ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿರುತ್ತಾರೆ.

ಖ್ಯಾತ ರಂಗ ನಿರ್ದೇಶಕ, ಸಾಹಿತಿಗಳಾದ, ನಾಟಕ ಅಕಾಡಮಿ ಪ್ರಶಸ್ತಿ ಪುರಸ್ಕೃತ ಪ್ರಕಾಶ್ ರಾವ್ ಪಯ್ಯಾರ್ ಅವರು 'ಮೃಚ್ಚಕಟಿಕ' ನಾಟಕವನ್ನು ನಿರ್ದೇಶಿಸಿದ್ದಾರೆ. ಕರ್ನಾಟಕದ ಉದ್ದಗಲಗಳಿಂದ ಯು.ಎ.ಇ.ಗೆ ಬಂದು ನೆಲೆಸಿರುವ ಪ್ರತಿಭಾವಂತ ಹವ್ಯಾಸಿ ರಂಗಕಲಾವಿದರುಗಳು ಪಾತ್ರಗಳಿಗೆ ಜೀವ ತುಂಬಲಿದ್ದಾರೆ.

ಆರತಿ ಅಡಿಗ, ಪ್ರಭಾಕರ್ ಕಾಮತ್, ವಾಸು ಬಾಯರ್, ನಾಗಭೂಷಣ್ ಕಶ್ಯಪ್, ಮೋಹನ್ ಬಿ.ಪಿ, ಸಪ್ನಾಕಿರಣ್, ಅಶೋಕ್ ಅಂಚನ್, ಜಾನೆಟ್ ಸಿಕ್ವೆರಾ, ಜೇಶ್ ಬಾಯರ್, ಆದೇಶ ಹಾಸನ, ರುದ್ರಯ್ಯ ನವಲಿ ಹಿರೇಮಠ್, ವೆಂಕಟೇಶ್ ರಾವ್, ಸಂಧ್ಯಾ ರವಿಕುಮಾರ್, ಶೋಭಿತಾ ಪ್ರೇಮ್ ಜೀತ್, ಬೇಬಿ ಸಾನ್ವಿ ರಾಕೇಶ್ ಶರ್ಮ, ನರಸಿಂಹನ್ ಜಿ.ಎಸ್, ಗುರುರಾಜ್ ಪುತ್ತೂರು, ಸಂದೀಪ್ ದೇವಾಡಿಗ, ರಮೇಶ್ ಲಾಕ್ಯ, ಹರೀಶ್ ಪೂಜಾರಿ, ಜಯಂತ್ ಶೆಟ್ಟಿ, ಕೃಷ್ಣ ಕುಮಾರ್, ವಿನಾಯಕ್ ಹೆಗ್ಡೆ ಮತ್ತು ಶ್ವೇತಾ ನಾಡಿಗ್ ಶರ್ಮ ನಾಟಕದ ಪಾತ್ರಗಳನ್ನು ಪೋಷಿಸಲಿದ್ದಾರೆ.

ಗಣೇಶ್ ರೈ ವೇದಿಕೆ ವಿನ್ಯಾಸ, ಅರುಣ್ ಕಾರ್ಲೊ ಸಂಗೀತ, ಅರುಣ್ ಮಣಿಪಾಲ್ ಬೆಳಕಿನ ಸಂಯೋಜನೆ ಜೊತೆಗೆ ಮೃಚ್ಛಕಟಿಕ ನಾಟಕದ ಪರದೆಯ ಹಿಂದೆ ಸಹಕರಿಸುವ ರಂಗಾಸಕ್ತರು ಸತೀಶ್ ಹೆಗ್ಡೆ, ಅನಿಲ್ ಪೂಜಾರ, ರಿತೇಶ್ ಅಂಚನ್, ಸಂತೋಷ್ ಪೂಜಾರಿ, ಅಶೋಕ್ ಬೈಲೂರ್, ಗಣೇಶ ಕುಲಾಲ್, ಸುಗಂಧ ರಾಜ್ ಬೇಕಲ್ ಉದಯ್ ನಂಜಪ್ಪ, ಸಾಯಿ ಮಲ್ಲಿಕಾ, ಲತಾ ಹೆಗ್ಡೆ, ದೀಪಾ ಮರಿಯಾ ಮುಂತಾದವರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications