ಮಸ್ಕತ್ ಸಂಕ್ರಾಂತಿಗೆ ಶಿವರಾಜ್ ಕುಮಾರ್ ಎಳ್ಳುಬೆಲ್ಲ
ಒಮಾನ್ ರಾಷ್ಟ್ರದ ಮಸ್ಕತ್ ನ ಭಾರತೀಯ ಸಾಮಾಜಿಕ ವೇದಿಕೆ ಕರ್ನಾಟಕ ವಿಭಾಗದ ವತಿಯಿಂದ 2015 ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಸಂಗೀತ ರಸ ಸಂಜೆ ಕಾರ್ಯಕ್ರಮ ವನ್ನು ಜ.16, ಶುಕ್ರವಾರದಂದು ಸಂಜೆ 5.30ಕ್ಕೆ ಮಸ್ಕತ್ ನ ಅಲ್ ಬುಸ್ತಾನ್ ಪ್ಯಾಲೇಸ್ ನಲ್ಲಿ ಆಯೋಜಿಸಲಾಗಿದೆ.
92.7 ಬಿಗ್ ಎಫೆ ಎಂನ ಪ್ರಸಿದ್ದ ಕಾರ್ಯಕ್ರಮ "ಅನ್ ಪ್ಲಗ್ಡ್ ವಿತ್ ಆರ್ ಜೆ ಮಯೂರ್" ರೂವಾರಿ ಆರ್ ಜೆ ಮಯೂರ್ ರಾಘವೇಂದ್ರರವರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ದೇಶ ವಿದೇಶಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನೀಡಿ ಜನಪ್ರಿಯರಾಗಿರುವ ಗಾಯಕರಾದ ಚಿನ್ಮಯ್ ಆತ್ರೇಯ ಮತ್ತು ಸಿಂಚನ್ ದೀಕ್ಷಿತ್ ರವರು ಮಸ್ಕತ್ ಕನ್ನಡಿಗರಿಗೆ ಸಂಗೀತ ರಸದೌತಣವನ್ನು ಉಣ ಬಡಿಸಲಿದ್ದಾರೆ.

ಅವರಿಗೆ ಜತೆಯಾಗಿ ಪ್ರದ್ಯುಮ್ನ, ಸಂದೀಪ್, ಮಂಜುನಾಥ್, ಆಶ್ವಿನ್, ವೇಣು ಮತ್ತು ಸಂದೀಪ್ ರವರು ಸಂಗೀತ ವಾದ್ಯಗೋಷ್ಠಿಯನ್ನು ನಡೆಸಿಕೊಡಲಿದ್ದಾರೆ. ಹಾಸ್ಯನಟ, ನಿರ್ಮಾಪಕ ಮತ್ತು ನಿರ್ದೇಶಕ ಸಿಹಿಕಹಿ ಚಂದ್ರುರವರು 45 ನಿಮಿಷಗಳ ಕಾಲ ಹಾಸ್ಯ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಮೊದಲ ಬಾರಿಗೆ ಮಸ್ಕತ್ ಕನ್ನಡ ಸಂಘದ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಮತ್ತು ಚಿ. ಗುರುದತ್ ಉದಯ್ ಶಂಕರ್ ರವರು ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸ್ಥಳೀಯ ಒಮಾನಿ ಪ್ರಜೆ ಹೈತಮ್ ರಫಿಯವರು ತಮ್ಮ ಮಾತೃಭಾಷೆ ಅರೇಬಿಕ್ ಆಗಿದ್ದರೂ ಸಹ ಸಂಗೀತ ರಸಸಂಜೆ ಕಾರ್ಯಕ್ರಮಕ್ಕೋಸ್ಕರ ಕನ್ನಡ ಹಾಡುಗಳನ್ನು ಕಲಿತುಕೊಂಡು ಕಾರ್ಯಕ್ರಮದಲ್ಲಿ ಕನ್ನಡ ಹಾಡುಗಳನ್ನು ಹಾಡಿ ಮಸ್ಕತ್ ಕನ್ನಡಿಗರನ್ನು ರಂಜಿಸಲು ಸಿದ್ಧತೆ ನಡೆಸಿದ್ದಾರೆ.
ಕಾರ್ಯಕ್ರಮಕ್ಕೆ ಬ್ಯಾಂಕ್ ಮಸ್ಕತ್, ಸರ್ವೀಸ್ ಽ ಟ್ರೇಡ್ ಮತ್ತು ಟಾವೆಲ್ ಇನ್ಫ್ರಾಸ್ಟ್ರಕ್ಛರ್ ರವರು ಪ್ರಾಯೋಜಕತ್ವವನ್ನು ವಹಿಸಿಕೊಂಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications