ಜುಲೈ 16, 17ರಂದು ಬೆಂಗಳೂರಿನಲ್ಲಿ 'ನಾವಿಕೋತ್ಸವ 2016'
ಬೆಂಗಳೂರು, ಮೇ 06 : 'ನಾವಿಕ' ಸಂಸ್ಥೆ ಎರಡು ವರ್ಷಗಳಿಗೊಮ್ಮೆ ಆಯೋಜಿಸುವ 'ನಾವಿಕೋತ್ಸವ'ಕ್ಕೆ ದಿನಗಣನೆ ಶುರುವಾಗಿದೆ. ಸ್ಥಳೀಯ ಮತ್ತು ಅನಿವಾಸಿ ಕನ್ನಡಿಗರ ಸಾಹಿತ್ಯ ಮತ್ತು ಸಂಸ್ಕೃತಿಯ ವಿನಿಮಯ ಮತ್ತು ಸಮಾಗಮದ ಸಂಕೇತವಾಗಿರುವ ನಾವಿಕೋತ್ಸವ ಈ ಬಾರಿ ಜುಲೈನಲ್ಲಿ 16 ಮತ್ತು 17ರಂದು ನಡೆಯಲಿದೆ.
ಈ ಸಾಂಸ್ಕೃತಿಕ ಉತ್ಸವಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದ್ದು, ನಾವಿಕ ಸಂಸ್ಥೆಯ ಅಧ್ಯಕ್ಷರಾದ ಡಾ. ರೇಣುಕಾ ರಾಮಪ್ಪ ಇದರ ರೂಪುರೇಷೆಗಳನ್ನು ರೂಪಿಸಿದ್ದಾರೆ. ಖಜಾಂಚಿ ವೀಣಾರಾಜ್ ಅವರು ಸಹಕರಿಸುತ್ತಿದ್ದಾರೆ. 'ನಾವಿಕೋತ್ಸವ-2016' ಸಮಿತಿಯ ಸಂಚಾಲಕ ಯಶವಂತ ಸರದೇಶಪಾಂಡೆ ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಅನಿವಾಸಿ ಭಾರತೀಯ ಸಮಿತಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಾವಿಕ (ನಾರ್ತ್ ಅಮೆರಿಕ ವಿಶ್ವಕನ್ನಡ ಆಗರ) 2 ದಿನಗಳ ಕಾಲ 'ನಾವಿಕೋತ್ಸವ'ವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದೆ. [2011ರಲ್ಲಿ ನಡೆದ ಅಮೆರಿಕನ್ನಡೋತ್ಸವದ ವರದಿ]

ರವೀಂದ್ರ ಕಲಾಕ್ಷೇತ್ರದಲ್ಲಿ : ಅಮೆರಿಕಾದ ನಾವಿಕ ಸಂಸ್ಥೆ 2 ವರ್ಷಗಳಿಗೊಮ್ಮೆ ನಡೆಸುವ ಈ ಸಾಂಸ್ಕೃತಿಕ ಉತ್ಸವ ಈ ಬಾರಿಯೂ ಬೆಂಗಳೂರಿನಲ್ಲಿ ನಡೆಯಲಿದೆ. ಜುಲೈ 16 ಮತ್ತು 17, ಶನಿವಾರ ಮತ್ತು ಭಾನುವಾರದಂದು ನಡೆಯುವ ಈ ಸಾಂಸ್ಕೃತಿಕ ಉತ್ಸವಕ್ಕೆ ವಿವಿಧ ದೇಶಗಳ 90ಕ್ಕೂ ಹೆಚ್ಚು ಕನ್ನಡದ ಸಂಘ-ಸಂಸ್ಥೆಗಳನ್ನು ಆಹ್ವಾನಿಸಲಾಗಿದೆ. 2,000ಕ್ಕೂ ಹೆಚ್ಚು ಅನಿವಾಸಿ ಕನ್ನಡಿಗರು ಮತ್ತು ಸ್ಥಳೀಯರು ನಾವಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಈ 'ನಾವಿಕೋತ್ಸವ'ದಲ್ಲಿ ಕನ್ನಡ ಸಾಹಿತ್ಯಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರಾಧನೆ ನಡೆಯಲಿದ್ದು, ಖ್ಯಾತ ಸಾಹಿತಿಗಳು, ಕಲಾವಿದರು, ಅಧಿಕಾರಿಗಳು, ಸರ್ಕಾರದ ವಿವಿಧ ಇಲಾಖೆಗಳ ಸಚಿವರು ಭಾಗವಹಿಸಲಿದ್ದಾರೆ. ಎರಡೂ ದಿನಗಳ ಕಾಲ ಬೆಳಗ್ಗೆ 8ರಿಂದ ರಾತ್ರಿ 10೦ರವರೆಗೆ ಎಡೆಬಿಡದೆ ವೈವಿಧ್ಯಮಯ ಕಾರ್ಯಕ್ರಮಗಳು, ಪ್ರತಿಭಾ ಪ್ರದರ್ಶನಗಳು ನಡೆಯಲಿವೆ.
ಈ ಹಿಂದೆ ಅಮೆರಿಕನ್ನಡೋತ್ಸವ ಎಂಬ ಹೆಸರಿನಲ್ಲಿ ಆಯೋಜಿಸಲಾಗುತ್ತಿದ್ದ ಸಾಂಸ್ಕೃತಿಕ ಉತ್ಸವವನ್ನು ಈ ಬಾರಿ 'ನಾವಿಕೋತ್ಸವ' ಎಂಬ ಹೆಸರಿನಲ್ಲಿ ನಡೆಸಲು ನಾವಿಕ ಸಂಘಟನೆ ನಿರ್ಧರಿಸಿದೆ. ಸಹ ಸಂಚಾಲಕರಾದ ಸಂಜಯ್ ಜೋಷಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ದಿನಾಂಕ : ಜುಲೈ 16 ಮತ್ತು 17
ಸಮಯ : ಬೆಳಗ್ಗೆ 8 ರಿಂದ ರಾತ್ರಿ 10 ಗಂಟೆವರೆಗೆ.
ಸ್ಥಳ : ರವೀಂದ್ರ ಕಲಾಕ್ಷೇತ್ರ, ಬೆಂಗಳೂರು
'ಯುವಸೂಚಿ'ಗೆ ಚಾಲನೆ : ಈ ಬಾರಿಯ ವಿಶ್ವ ಕನ್ನಡೋತ್ಸವದ ವಿಶೇಷತೆ ಎಂದರೆ 'ಯುವಸೂಚಿ' ಎಂಬ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಕರ್ನಾಟಕದಿಂದ ಅಮೆರಿಕಾಗೆ ತೆರಳುವ ಯುವಕರಿಗೆ ಮಾರ್ಗದರ್ಶನ ನೀಡಿ, ಸೂಕ್ತ ಸಹಾಯ ಒದಗಿಸುವ ನಿಟ್ಟಿನಲ್ಲಿ ನಾವಿಕ ಸಂಸ್ಥೆಯು ಅಮೆರಿಕಾದಲ್ಲಿ ಯುವಸೂಚಿ ಎಂಬ ನೂತನ ಕಾರ್ಯಕ್ರಮವನ್ನು ರೂಪಿಸಿದೆ.
ಮಾಹಿತಿಗೆ ಸಂಪರ್ಕಿಸಿ : 9845217869
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications