ಲಾಸ್ ಏಂಜಲಿಸ್ನಲ್ಲಿ ನೂತನ ಶ್ರೀ ಕೃಷ್ಣ ಬೃಂದಾವನ
ಉಡುಪಿಯ ಶ್ರೀ ಪುತ್ತಿಗೆ ಮಠದ ಅಂಗಸಂಸ್ಥೆಯಾದ ಶ್ರೀ ಕೃಷ್ಣ ಬೃಂದಾವನ ಲಾಸಂಜಲೀಸ್ ನಲ್ಲಿ 2004ರಲ್ಲೇ ವುಡ್ಲ್ಯಾಂಡ್ ಹಿಲ್ಸ್ ನಲ್ಲಿ ಸ್ಥಾಪಿಸಲಾಗಿತ್ತು. ದೈನಂದಿನ ಪೂಜೆ, ಆರಾಧನೆಗಳು, ಹಬ್ಬ ಹರಿದಿನಗಳ ಆಚರಣೆ ಹಾಗೂ ಆಧ್ಯಾತ್ಮಿಕ ವಿಚಾರದಲ್ಲಿ ಸಾವಿರಾರು ಭಕ್ತಾದಿಗಳಿಗೆ ಶ್ರೀ ಕೃಷ್ಣ ಬೃಂದಾವನ ಕೇಂದ್ರಬಿಂದುವಾಗಿತ್ತು. ಪೂಜಾ ಮಂದಿರದ ಮತ್ತು ವಾಹನ ನಿಲುಗಡೆಯ ಸ್ಥಳಾವಭಾವದ ಕಾರಣದಿಂದ ಶ್ರೀ ಮಠದ ಆಡಳಿತವರ್ಗದವರು ನೂತನ ನಿವಾಸದ ಹುಡುಕಾಟದಲ್ಲಿ ತೊಡಗಿದ್ದರು.

ಶ್ರೀ ಹರಿ ವಾಯು ಗುರುಗಳ ಅನುಗ್ರಹದಿಂದ ಶ್ರೀ ಕೃಷ್ಣ ಬೃಂದಾವನಕ್ಕೆ ಥೌಸಂಡ್ ಓಕ್ಸ್ ನ ಬಳಿಯಲ್ಲಿ 5 ಎಕರೆ ವಿಶಾಲವಾದ ಸ್ಥಳ ದೊರಕಿತು. ಜೂನ್ 28, 2015 ಭಾನುವಾರದಂದು ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಹಾಗು ಬನ್ನಂಜೆ ಗೋವಿಂದಾಚಾರ್ಯರ ಉಪಸ್ಥಿತಿಯಲ್ಲಿ ನೂತನ ದೇವಸ್ಥಾನದ ಪ್ರತಿಷ್ಠಾಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಶ್ರೀ ಮಠದ ವಿವಿಧ ಶಾಖೆಗಳಿಂದ ಅನೇಕ ಹಿರಿಯ ಅರ್ಚಕರು ಬಂದು ನಡೆಸಿಕೊಟ್ಟರು. ಸುಮಾರು 800ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಕ್ಯಾಲಿಫೋರ್ನಿಯ ರಾಜ್ಯದ 39ನೇ ಕಾಂಗ್ರೆಸ್ಸನಲ್ ಜಿಲ್ಲೆಯ, ಅಮೆರಿಕಾದ ಹೌಸ್ ಆಫ್ ರೆಪ್ರೆಸೆಂಟ್ಟಿಟಿವ್ ಸದಸ್ಯರಾದ ಎಡ್ ರಾಯ್ಸ್ ರವರೂ ಉಪಸ್ಥಿತರಿದ್ದರು.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರು "ಆಧುನಿಕ ಯುಗದಲ್ಲಿ ಭಗವದ್ಗೀತೆ ಹಾಗೂ ಮಧ್ವ ಶಾಸ್ತ್ರದ ಪ್ರಾಮುಖ್ಯತೆ"ಯ ಬಗ್ಗೆ ಪ್ರವಚನವನ್ನಿತ್ತು ಶುಭ ಹಾರೈಸಿದರು. ಬಳಿಕ ಕರ್ನಾಟಕದ ಸುಪ್ರಸಿದ್ದ ಶಾಸ್ತ್ರೀಯ ಸಂಗೀತಗಾರರಾದ ಡಾ .ಆರ್.ಕೆ. ಪದ್ಮನಾಭನ್ ಹಾಗು ಸಂಗಡಿಗರಿಂದ ಸಂಗೀತ ಕಚೇರಿ ಏರ್ಪಡಿಸಲಾಗಿತ್ತು. ಊರ ಪರಊರ ಭಕ್ತಾದಿಗಳೆಲ್ಲ ಬಂದು ದೇವರ ಅನುಗ್ರಹ ಪ್ರಸಾದ ಸ್ವೀಕರಿಸಿ ಪುನೀತರಾದರು.
More From
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications