ಲಾಸ್ ಏಂಜಲಿಸ್ನಲ್ಲಿ ನೂತನ ಶ್ರೀ ಕೃಷ್ಣ ಬೃಂದಾವನ
ಉಡುಪಿಯ ಶ್ರೀ ಪುತ್ತಿಗೆ ಮಠದ ಅಂಗಸಂಸ್ಥೆಯಾದ ಶ್ರೀ ಕೃಷ್ಣ ಬೃಂದಾವನ ಲಾಸಂಜಲೀಸ್ ನಲ್ಲಿ 2004ರಲ್ಲೇ ವುಡ್ಲ್ಯಾಂಡ್ ಹಿಲ್ಸ್ ನಲ್ಲಿ ಸ್ಥಾಪಿಸಲಾಗಿತ್ತು. ದೈನಂದಿನ ಪೂಜೆ, ಆರಾಧನೆಗಳು, ಹಬ್ಬ ಹರಿದಿನಗಳ ಆಚರಣೆ ಹಾಗೂ ಆಧ್ಯಾತ್ಮಿಕ ವಿಚಾರದಲ್ಲಿ ಸಾವಿರಾರು ಭಕ್ತಾದಿಗಳಿಗೆ ಶ್ರೀ ಕೃಷ್ಣ ಬೃಂದಾವನ ಕೇಂದ್ರಬಿಂದುವಾಗಿತ್ತು. ಪೂಜಾ ಮಂದಿರದ ಮತ್ತು ವಾಹನ ನಿಲುಗಡೆಯ ಸ್ಥಳಾವಭಾವದ ಕಾರಣದಿಂದ ಶ್ರೀ ಮಠದ ಆಡಳಿತವರ್ಗದವರು ನೂತನ ನಿವಾಸದ ಹುಡುಕಾಟದಲ್ಲಿ ತೊಡಗಿದ್ದರು.

ಶ್ರೀ ಹರಿ ವಾಯು ಗುರುಗಳ ಅನುಗ್ರಹದಿಂದ ಶ್ರೀ ಕೃಷ್ಣ ಬೃಂದಾವನಕ್ಕೆ ಥೌಸಂಡ್ ಓಕ್ಸ್ ನ ಬಳಿಯಲ್ಲಿ 5 ಎಕರೆ ವಿಶಾಲವಾದ ಸ್ಥಳ ದೊರಕಿತು. ಜೂನ್ 28, 2015 ಭಾನುವಾರದಂದು ಉಡುಪಿ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಹಾಗು ಬನ್ನಂಜೆ ಗೋವಿಂದಾಚಾರ್ಯರ ಉಪಸ್ಥಿತಿಯಲ್ಲಿ ನೂತನ ದೇವಸ್ಥಾನದ ಪ್ರತಿಷ್ಠಾಮಹೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಶ್ರೀ ಮಠದ ವಿವಿಧ ಶಾಖೆಗಳಿಂದ ಅನೇಕ ಹಿರಿಯ ಅರ್ಚಕರು ಬಂದು ನಡೆಸಿಕೊಟ್ಟರು. ಸುಮಾರು 800ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು. ಕ್ಯಾಲಿಫೋರ್ನಿಯ ರಾಜ್ಯದ 39ನೇ ಕಾಂಗ್ರೆಸ್ಸನಲ್ ಜಿಲ್ಲೆಯ, ಅಮೆರಿಕಾದ ಹೌಸ್ ಆಫ್ ರೆಪ್ರೆಸೆಂಟ್ಟಿಟಿವ್ ಸದಸ್ಯರಾದ ಎಡ್ ರಾಯ್ಸ್ ರವರೂ ಉಪಸ್ಥಿತರಿದ್ದರು.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯರು "ಆಧುನಿಕ ಯುಗದಲ್ಲಿ ಭಗವದ್ಗೀತೆ ಹಾಗೂ ಮಧ್ವ ಶಾಸ್ತ್ರದ ಪ್ರಾಮುಖ್ಯತೆ"ಯ ಬಗ್ಗೆ ಪ್ರವಚನವನ್ನಿತ್ತು ಶುಭ ಹಾರೈಸಿದರು. ಬಳಿಕ ಕರ್ನಾಟಕದ ಸುಪ್ರಸಿದ್ದ ಶಾಸ್ತ್ರೀಯ ಸಂಗೀತಗಾರರಾದ ಡಾ .ಆರ್.ಕೆ. ಪದ್ಮನಾಭನ್ ಹಾಗು ಸಂಗಡಿಗರಿಂದ ಸಂಗೀತ ಕಚೇರಿ ಏರ್ಪಡಿಸಲಾಗಿತ್ತು. ಊರ ಪರಊರ ಭಕ್ತಾದಿಗಳೆಲ್ಲ ಬಂದು ದೇವರ ಅನುಗ್ರಹ ಪ್ರಸಾದ ಸ್ವೀಕರಿಸಿ ಪುನೀತರಾದರು.
More From
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications