ಸಿಂಗಪುರದಲ್ಲಿ 'ಕನಕ-ಪುರಂದರ'; ವಿಶ್ವದೆಲ್ಲೆಡೆ ಪ್ರಸಾರ
ಕನ್ನಡ ಸಂಘ (ಸಿಂಗಪುರ)ವು 1998ರಿಂದ ಪ್ರತೀ ವರ್ಷವೂ ಪುರಂದರ ದಾಸರ ಆರಾಧನೆಯನ್ನು ನಡೆಸಿಕೊಂಡು ಬರುತ್ತಿದೆ. ಮೊದಲು ಮನೆಗಳಲ್ಲಿ ಶುರುವಾಗಿ, ನಂತರ ದೇವಸ್ಥಾನಗಳಲ್ಲಿ, ಕನ್ನಡ ಸಂಘದ ಆಶ್ರಯದಲ್ಲಿ ಸಮುದಾಯ ಭವನಗಳಲ್ಲಿ ನಡೆಯುತ್ತಿದ್ದ ಈ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಾ ಬಂದಿದೆ. ಫೆಬ್ರವರಿ 20ನೇ ತಾರೀಖು, ಶನಿವಾರ ಸಿಂಗಪುರದಲ್ಲಿ ನಡೆಯುವ ಪುರಂದರ ನಮನ 2016ರ (ಪುರಂದರ ದಾಸರ 451ನೇ ಆರಾಧನೆ) ಕೆಲವು ವೈಶಿಷ್ಟ್ಯಗಳು ಇಲ್ಲಿವೆ. [ಸಿಂಗಪುರದಲ್ಲಿ ಮೇಳೈಸಿದ 'ಲಯತರಂಗ'ದ ನಾದವೈಭವ]

1. ದಾಸಸಾಹಿತ್ಯ ಮತ್ತು ಸಂಗೀತವನ್ನು ಹೆಚ್ಚಿನ ಕನ್ನಡಿಗರಿಗೆ ಮತ್ತು ಕನ್ನಡೇತರರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಬಾರಿ ಆರಿಸಿಕೊಂಡ ವಿಷಯ "ಕನಕ-ಪುರಂದರ". ಜನವರಿ 31ರಂದು ಸುಮಾರು 120ಕ್ಕೂ ಹೆಚ್ಚು ಹಿರಿ-ಕಿರಿಯರು "ಕನಕ-ಪುರಂದರ" ಸಂಗೀತ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
2. ಸಾಹಿತ್ಯ ಮತ್ತು ಸಂಗೀತಾಧಾರಿತವಾದ ಈ ಕಾರ್ಯಕ್ರಮವನ್ನು ಕನ್ನಡ ಸಂಘ (ಸಿಂಗಪುರ)ವು ಇಲ್ಲಿನ ಪ್ರತಿಷ್ಠಿತ ಕಲಾಸಂಸ್ಥೆಯಾದ ಸಿಂಗಪುರ ಇಂಡಿಯನ್ ಫೈನ್ ಆರ್ಟ್ಸ್ ಸೊಸೈಟಿ (SIFAS)ನ ಜಂಟಿ ಸಹಯೋಗದಲ್ಲಿ ಹಮ್ಮಿಕೊಂಡಿದೆ.
3. "ಕನಕ-ಪುರಂದರ" ಸಂಗೀತ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ಗಾನಕೋಗಿಲೆ ಡಾ. ಭಾಗ್ಯ ಮೂರ್ತಿ ಅವರ ನೇತೃತ್ವದಲ್ಲಿ ಸಿಂಗಪುರದ ಹಲವಾರು ಸಂಗೀತಗಾರರು, ಶಿಕ್ಷಕರು ಹಾಗೂ ಶಿಷ್ಯವರ್ಗದವರಿಂದ ಸಮೂಹಗಾಯನದ ಜೊತೆಗೆ ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆ "ಕನಕ-ಪುರಂದರ" ಹಿಂದೂಸ್ಥಾನಿ-ಕರ್ನಾಟಕ ಸಂಗೀತಗಳ ಜುಗಲ್ ಬಂದಿ ಕಾರ್ಯಕ್ರಮ.
4. ಇದಲ್ಲದೆ ಈ ಕಾರ್ಯಕ್ರಮದಲ್ಲಿ ಆಯೋಯಿಸಲಾಗುತ್ತಿರುವ ಪಕ್ಕವಾದ್ಯಗಳಲ್ಲೊಂದು - ಸಾರಂಗಿ. ಅಪರೂಪವಾದ, ಪ್ರಾಯಶಃ ಸಿಂಗಪುರದಲ್ಲಿ ಪ್ರಥಮಬಾರಿಗೆ ಈ ಪಕ್ಕವಾದ್ಯವನ್ನು ನುಡಿಸಿತ್ತಿರುವವರು ಉಸ್ತಾದ್ ಫೈಯಾಜ್ ಖಾನ್ ಅವರ ಪುತ್ರ ಉಸ್ತಾದ್ ಸರ್ಫರಾಜ್ ಖಾನ್.
ಇಷ್ಟೊಂದು ಹೊಸತನ ತುಂಬಿರುವ ಈ ಕಾರ್ಯಕ್ರಮವನ್ನು ನೋಡಲು ನಾನೂ ಸಿಂಗಪುರದಲ್ಲಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ನಿಮಗನಿಸಿದರೆ ಅದರಲ್ಲೇನೂ ತಪ್ಪಿಲ್ಲ, ನಿರಾಶರಾಗುವ ಅಗತ್ಯವೂ ಇಲ್ಲ. ಕನಕ-ಪುರಂದರ ದಾಸರ ಸಂಗೀತ ಸುಧೆಯನ್ನು ಎಲ್ಲೆಡೆ ಹರಡುವ ನಿಟ್ಟಿನಲ್ಲಿ ಕನ್ನಡ ಸಂಘ (ಸಿಂಗಪುರ)ವು ತನ್ನ ತಾಂತ್ರಿಕ ತಂಡದ ಸಹಯೋಗದೊಂದಿಗೆ ಹೊಸ ಹೆಜ್ಜೆಯೊಂದನ್ನು ಇಡುತ್ತಿದೆ.
ಇದೇ ಮೊದಲ ಬಾರಿಗೆ ಕಾರ್ಯಕ್ರಮದ ನೇರ ಪ್ರಸಾರ ಮಾಡಲಿದೆ. ಈ ಕಾರ್ಯಕ್ರಮವನ್ನು ಕನ್ನಡ ಸಂಘದ ಯೂಟ್ಯೂಬ್ ಚಾನಲ್ಲಿನಲ್ಲಿ ಈ ಶನಿವಾರ ಮಧ್ಯಾಹ್ನ 2.30 ಗಂಟೆ ಭಾರತೀಯ ಸಮಯದಿಂದ (Live Streaming) ನೋಡಲು ಈ ಕೊಂಡಿಯನ್ನು ಕ್ಲಿಕ್ಕಿಸಿ. ಕೇವಲ ನೀವು ಮಾತ್ರ ನೋಡುವುದಲ್ಲ - ನಿಮ್ಮ ಸಂಗೀತ ಪ್ರಿಯ ಬಂಧುಮಿತ್ರರಿಗೂ ತಿಳಿಸಿ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications