ಕಾಫಿ ತೋಟಕ್ಕೆ ಕತಾರ್ ಕನ್ನಡಿಗರಿಂದ ಭಾರೀ ಪ್ರಶಂಸೆ
ಖ್ಯಾತ ನಿರ್ದೇಶಕ ಟಿ.ಎನ್. ಸೀತಾರಾಮ್ ನಿರ್ದೇಶನದ 'ಕಾಫಿ ತೋಟ ' ಚಲನಚಿತ್ರವನ್ನು ಇದೇ ಅಕ್ಟೋಬರ್ 13ರಂದು, ದೋಹಾದಲ್ಲಿ ಕತಾರ್ ಕನ್ನಡಿಗರಿಗೆ ಪ್ರದರ್ಶಿಸಲಾಯಿತು. ಚಿತ್ರ ಮಂದಿರ ಸಂಪೂರ್ಣವಾಗಿ ಕನ್ನಡಿಗರಿಂದ ತುಂಬಿ ತುಳುಕುತ್ತಿತ್ತು.
ವಿಮರ್ಶೆ: ಕುತೂಹಲಭರಿತ 'ಕಾಫಿತೋಟ'ದಲ್ಲಿ ಥ್ರಿಲ್ಲಿಂಗ್ ಜರ್ನಿ
ಇದೇ ಪ್ರಥಮ ಬಾರಿಗೆ ಚಿತ್ರದ ನಾಯಕ ರಘು ಮುಖರ್ಜಿ ಮತ್ತು ನಾಯಕಿಯರಾದ ರಾಧಿಕಾ ಚೇತನ್, ನವ ನಟಿ ಅಪೇಕ್ಷಾ ಪುರೋಹಿತ್ ಮತ್ತು ಚಿತ್ರದ ನಿರ್ಮಾಪಕ ಅವರುಗಳು ಕತಾರ್ ಗೆ ಆಗಮಿಸಿದ್ದರು. ಚಿತ್ರವನ್ನು ಪ್ರೇಕ್ಷಕರೊಂದಿಗೆ ಕುಳಿತು ವೀಕ್ಷಿಸಿದ ಇವರು, ಕತಾರ್ ನಲ್ಲಿ ತಮ್ಮ ಚಿತ್ರ ಯಶಸ್ವಿ ಪ್ರದರ್ಶನಗೊಂಡ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಕತಾರ್ ಕನ್ನಡಿಗರಿಗೆ ಧನ್ಯವಾದ ಅರ್ಪಿಸಿದರು.

ಕೇವಲ ಒಂದು ವರ್ಷದ ಅವಧಿಯಲ್ಲಿ 8 ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನಗೊಂಡ ಬಗ್ಗೆ ಆಯೋಜಕರು ಸಂತಸ ವ್ಯಕ್ತಪಡಿಸಿದರು. ಮುಂದೆಯೂ ಕನ್ನಡ ಚಿತ್ರಗಳಿಗೆ ಇದೇ ರೀತಿಯ ಸಹಕಾರ ತೋರುವಂತೆ ಮನವಿ ಮಾಡಿದರು ಹಾಗು ಇದಕ್ಕೆ ಕಾರಣಕರ್ತರಾದ ಚಿತ್ರಪ್ರದರ್ಶನದ ಮುಖ್ಯ ಆಯೋಜಕರಾದ ಸುಬ್ರಮ್ಮಣ್ಯ ಹೆಬ್ಬಾಗಿಲು ಅವರನ್ನು ಬಹುವಾಗಿ ಪ್ರಶಂಸಿಸಿದರು.
ಇದೇ ಸಂದರ್ಭದಲ್ಲಿ ಸುಬ್ರಮ್ಮಣ್ಯ ಹೆಬ್ಬಾಗಿಲು ಹಾಗು ಗೆಳೆಯರ ಬಳಗವು ಅವರೆಲ್ಲರನ್ನೂ ಆತ್ಮೀಯವಾಗಿ ಸನ್ಮಾನಿಸಿದರು. ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರಾದ ಅರವಿಂದ ಪಾಟೀಲ್, ಐ.ಸಿ.ಬಿ.ಎಫ್ ನ ಕಾರ್ಯದರ್ಶಿ ಮಹೇಶ್ ಗೌಡ, ಐ.ಸಿ.ಸಿ ಯ(ಭಾರತೀಯ ಸಾಂಸ್ಕೃತಿಕ ಕೇಂದ್ರ) ಪದಾಧಿಕಾರಿ ನಿಯಾಜ್ ಅಹಮದ್ ಮತ್ತು ಕರ್ನಾಟಕ ಸಂಘ ಹಾಗು ಸೋದರ ಸಂಸ್ಥೆಗಳ ಮುಖ್ಯಸ್ಥರುಗಳೆಲ್ಲರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸೀತಾರಾಮ್ ನಿರ್ದೇಶನದ ಕಾಫಿ ತೋಟ, ಸಸ್ಪೆನ್ಸ್ ಥ್ರಿಲ್ಲರ್ ಕಥೆಯನ್ನು ಹೊಂದಿದ್ದು, ಬಾಕ್ಸಾಫೀಸಿನಲ್ಲಿ ಬಾರೀ ಸದ್ದು ಮಾಡದಿದ್ದರೂ, ವಿಮರ್ಶಕರಿಂದ ಮತ್ತು ಪ್ರೇಕ್ಷಕರಿಂದ ಪ್ರಶಂಸೆಗೆ ಪಾತ್ರವಾಗಿದೆ. ಹಲವಾರು ವರ್ಷಗಳ ನಂತರ ಸೀತಾರಾಮ್ ಅವರು ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications