ಬಂಡವಾಳ ಆಕರ್ಷಣೆ : ಸಿದ್ದು ಅಮೆರಿಕ ರೋಡ್ ಶೋ ರದ್ದು
ಕ್ಯಾಲಿಫೋರ್ನಿಯಾ, ನವೆಂಬರ್ 24 : ವಿಧಾನಮಂಡಲ ಅಧಿವೇಶನ ಮುಗಿಯುತ್ತಿದ್ದಂತೆ ಅಮೆರಿಕಕ್ಕೆ ಹಾರಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಂಡವಾಳ ಆಕರ್ಷಿಸುವ ಉದ್ದೇಶದಿಂದ ನವೆಂಬರ್ 30ರಂದು ಅಮೆರಿಕಾದ ಹಲವೆಡೆಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಸಿದ್ದರಾಮಯ್ಯ ಅವರೊಡಗೂಡಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗು ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಅವರು ಕೂಡ 'ಕರ್ನಾಟಕದಲ್ಲಿ ಬಂಡವಾಳ ಹೂಡಿ' ಎಂಬ ಮನವಿ ಮಾಡಿಕೊಂಡು ಸಿದ್ದರಾಮಯ್ಯ ಅವರೊಂದಿಗೆ ರಸ್ತೆ ಶೋ ನಡೆಸುತ್ತಿದ್ದಾರೆ.
ಇದೀಗ ಬಂದ ಸುದ್ದಿ : ವಿಧಾನಪರಿಷತ್ ಚುನಾವಣೆ ಹತ್ತಿರದಲ್ಲೇ ಇರುವ ಕಾರಣ ಅಮೆರಿಕ ಮತ್ತು ಫ್ರಾನ್ಸ್ ಪ್ರವಾಸವನ್ನು ಸಿದ್ದರಾಮಯ್ಯ ರದ್ದುಪಡಿಸಿದ್ದಾರೆ. ಅವರ ಬದಲಿಗೆ ಆರ್ ವಿ ದೇಶಪಾಂಡೆ ಅವರು ನಿಯೋಗದೊಂದಿಗೆ ವಿದೇಶ ಪ್ರವಾಸ ಮಾಡಲಿದ್ದಾರೆ ಮತ್ತು ರೋಡ್ ಶೋ ನಡೆಸಲಿದ್ದಾರೆ.
ಉತ್ತರ ಕ್ಯಾಲಿಫೋರ್ನಿಯಾದ ಹಲವಾರು ಕನ್ನಡ ಸಂಘಟನೆಗಳೊಂದಿಗೆ ಅಮೆರಿಕ ಕನ್ನಡ ಕೂಟಗಳ ಆಗರ (ಅಕ್ಕ) ಮತ್ತು ಕನ್ನಡ ಕೂಟ ಉತ್ತರ ಕ್ಯಾಲಿಫೋರ್ನಿಯಾ (ಕೆಕೆಎನ್ಸಿ) ಸಿದ್ದರಾಮಯ್ಯ, ದೇಶಪಾಂಡೆ ಅವರನ್ನು ಭರ್ಜರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸುತ್ತಿವೆ. [ಬೆಂಗಳೂರಿನಲ್ಲಿ ಯುಎಸ್ ವೀಸಾ ಕೇಂದ್ರ ಸ್ಥಾಪನೆಗೆ ಮನವಿ]

ಕ್ಯಾಲಿಫೋರ್ನಿಯಾ ಮಾತ್ರವಲ್ಲದೆ ಅಮೆರಿಕದ ಪ್ರಮುಖ ನಗರಗಳಾದ ನ್ಯೂಯಾರ್ಕ್, ಶಿಕಾಗೋಗಳಲ್ಲಿಯೂ ರೋಡ್ ಶೋ ನಡೆಸಲಾಗುತ್ತಿದೆ. ಸ್ಥಳೀಯ ಕನ್ನಡ ಕೂಟಗಳೊಂದಿಗೆ ಸಹಯೋಗದೊಂದಿಗೆ ಅಕ್ಕ ಸಂಸ್ಥೆ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಅಕ್ಕದ ಪ್ರಧಾನ ಕಾರ್ಯದರ್ಶಿ ಧನಂಜಯ ಕೆಂಗಯ್ಯ ಅವರು ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದರು.
ಈ ರೋಡ್ ಶೋ ನವೆಂಬರ್ 30ರ ಸೋಮವಾರ ಸಂಜೆ 7.30ಕ್ಕೆ ನಡೆಯಲಿದ್ದು, ಸ್ಥಳ ನಿಗದಿಯಾದ ಕೂಡಲೆ ತಿಳಿಸುವುದಾಗಿ ಕೆಕೆಎನ್ಸಿ ತನ್ನ ವಾರ್ತಾಸಂಚಿಕೆಯಲ್ಲಿ ಪ್ರಕಟಿಸಿದೆ. ವಿಐಪಿ ಸೀಟುಗಳನ್ನು ಬುಕ್ ಮಾಡಿಕೊಳ್ಳಲು ಇಚ್ಛಿಸುವವರು 500 ಡಾಲರ್ ದಾನ ಮಾಡಬಹುದಾಗಿದೆ.
ಸಿದ್ದರಾಮಯ್ಯ ಅವರೊಂದಿಗೆ ಹಲವಾರು ಐಎಎಸ್ ಅಧಿಕಾರಿಗಳು ಕೂಡ ಈ ರೋಡ್ ಶೋನಲ್ಲಿ ಭಾಗವಹಿಸುತ್ತಿರುವುದು ವಿಶೇಷ. ಅವರ ಪಟ್ಟಿ ಕೆಳಗಿನಂತಿದೆ.
* ಕೌಶಿಕ್ ಮುಖರ್ಜಿ, ಐಎಎಸ್, ಮುಖ್ಯ ಕಾರ್ಯದರ್ಶಿ
* ಕೆ. ರತ್ನ ಪ್ರಭಾ, ಐಎಎಸ್, ವಾಣಿಜ್ಯ ಮತ್ತು ಉದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
* ಡಿ.ಎನ್. ನರಸಿಂಹ ರಾಜು, ಐಎಎಸ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
* ಗೌರವ್ ಗುಪ್ತಾ, ಐಎಎಸ್, ಉದ್ಯಮ ಆಯುಕ್ತ
* ಮಿರ್ಜಾ ಮಹದಿ, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ
* ಎಚ್.ಎನ್. ರವೀಂದ್ರ, ವಾಣಿಜ್ಯ ಮತ್ತು ಉದ್ಯಮ ಇಲಾಖೆಯ ಇಂಡಸ್ಟ್ರಿಯಲ್ ಪ್ರಮೋಷನ್ ಅಧಿಕಾರಿ
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications