ಸಿಂಚನ ಸಾಹಿತ್ಯ ಸ್ಪರ್ಧೆ - 2013 : ಕಥೆ, ಕವನ ಕಳಿಸಿ

ಈ ವರ್ಷದ ಸ್ಪರ್ಧೆಯಲ್ಲಿ ಸಣ್ಣ ಕಥೆ ಮತ್ತು ಕವನವನ್ನು ಒಳಗೊಂಡ ಎರಡು ವರ್ಗಗಳಿಗೆ ನಿಮ್ಮ ಬರಹಗಳನ್ನು ಕಳುಹಿಸಬಹುದು. ವರ್ಗಗಳ ವಿವರಗಳನ್ನು ಕೆಳಗೆ ನೀಡಲಾಗಿದೆ. ಪ್ರತಿ ವರ್ಗದಲ್ಲೂ ಆಯ್ದ ಎರಡು ಉತ್ತಮ ಬರಹಗಳಿಗೆ ಬಹುಮಾನ ಕೂಡ ಇದೆ. ಇನ್ನೇಕೆ ತಡ? ನಿಮ್ಮ ಬರಹಗಳನ್ನು ಆದಷ್ಟು ಬೇಗ ನಮಗೆ ಕಳುಹಿಸುತ್ತೀರಾ ತಾನೆ?
ವರ್ಗ 1 - ಸಣ್ಣ ಕಥೆ (ಮಿತಿ - 4 ಪುಟಗಳು)
ವರ್ಗ 2 - ಕವನ (ಮಿತಿ - 1 ಪುಟ)
ಬರಹಗಾರರ ಗಮನಕ್ಕೆ:
1. ಸ್ಪರ್ಧೆಗೆ ಕಳಿಸುವ ಕಥೆ ಮತ್ತು ಕವನಗಳು ಸ್ವಂತದ್ದಾಗಿರಬೇಕು ಮತ್ತು ಬೇರೆಲ್ಲೂ (ಅಂತರ್ಜಾಲ ಮತ್ತು ಮುದ್ರಿತ ಮಾಧ್ಯಮ) ಈ ಮೊದಲು ಪ್ರಕಟವಾಗಿರಬಾರದು.
2. ಕಥೆ ಮತ್ತು ಕವನಗಳು 'ಬರಹ' ಅಥವ 'ನುಡಿ' ತಂತ್ರಾಂಶದಲ್ಲಿರಬೇಕು. ಕೈ ಬರಹದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
3. ಬಹುಮಾನಿತ ಕೃತಿಗಳನ್ನು "ಸಿಂಚನ' ಸಂಚಿಕೆಗಳಲ್ಲಿ ಪ್ರಕಟಿಸಲಾಗುವುದು. 'ಸಿಂಚನ' ಸಂಪಾದಕ ಸಮಿತಿಯ ತೀರ್ಮಾನವೇ ಅಂತಿಮ. ಬರಹಗಳನ್ನು ಪರಿಷ್ಕರಿಸಿ ಪ್ರಕಟಿಸುವ ಹಕ್ಕು 'ಸಿಂಚನ' ಸಂಪಾದಕ ಸಮಿತಿಗೆ ಸೇರಿದ್ದು.
4. ಎರಡೂ ವರ್ಗಗಳಿಗೂ ಬರಹಗಳನ್ನು ಕಳುಹಿಸಲು ಕೊನೆಯ ದಿನಾಂಕ ಅಕ್ಟೋಬರ್ 5, 2013. ನಂತರ ಬಂದ ಬರಹಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಬಹುಮಾನ ವಿಜೇತರಿಗೆ ನವೆಂಬರ್ ತಿಂಗಳಲ್ಲಿ ಮಿಂಚಂಚೆ ಮೂಲಕ ತಿಳಿಸಲಾಗುವುದು.
5. ಬರಹಗಾರರು ತಮ್ಮ ಕೃತಿಯ ಜೊತೆಗೆ ತಮ್ಮ ಸಂಪೂರ್ಣ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ವಯಸ್ಸು, ಭಾವಚಿತ್ರ ಮತ್ತು EMAIL idಯನ್ನು ತಪ್ಪದೇ ಕಳುಹಿಸಬೇಕು. ಈ ವಿವರಗಳಿಲ್ಲದ ಬರಹಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
6. ಪ್ರತಿ ವರ್ಗಕ್ಕೆ ಒಬ್ಬರು ಒಂದಕ್ಕಿಂತ ಹೆಚ್ಚು ಲೇಖನ ಕಳುಹಿಸುವಂತಿಲ್ಲ.
7. ನಿಮ್ಮ ಬರಹಗಳನ್ನು [email protected]ಗೆ ಮಿಂಚಂಚೆ ಮೂಲಕ ಕಳುಹಿಸಿ.
8. ವಿಶ್ವಕನ್ನಡಿಗರೆಲ್ಲರಿಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಯಾವುದೇ ವಯೋಮಿತಿಯ ನಿಬಂಧನೆಯಿಲ್ಲ.
- ಕನ್ನಡ ಸಂಘ ಸಿಂಗಪುರ
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications