ಹುಚ್ಚೆದ್ದು ಕುಣಿಯುವಂತೆ ಮಾಡಿದ ಜಾನಪದ ಕಲಾವೈಭವ
ವೀರಗಾಸೆ, ಡೊಳ್ಳು ಕುಣಿತ, ತಮ್ಮಟೆವಾದ್ಯ, ಪೂಜಾ ಕುಣಿತ ಮುಂತಾದ ಜಾನಪದ ನರ್ತಕರು ವೇದಿಕೆಯ ಮೇಲೆ ಮುಖ್ಯ ಭೂಮಿಕೆ ವಹಿಸಿ ನೀಡಿದ ಪ್ರದರ್ಶನ ಪ್ರೇಕ್ಷಕರಲ್ಲಿ ಶಕ್ತಿ ಸಂಚಾಲನೆಯನ್ನುಂಟು ಮಾಡಿತು.
ಸಿಂಗಪುರ, ಅಕ್ಟೋಬರ್ 30 : ಜಾನಪದ ಕಲೆ ನಮ್ಮತನ, ನಮ್ಮ ಸಂಸ್ಕೃತಿ ಮತ್ತು ವೈಶಿಷ್ಟ್ಯದ ಪ್ರತೀಕಗಳು. ಆದುದರಿಂದಲೇ ಕನ್ನಡ ಸಂಘ (ಸಿಂಗಪುರ), ಜಾನಪದ ಕಲೆಗೆ ಪ್ರಾಮುಖ್ಯತೆ ನೀಡಿ ಸಿಂಗಾರ ಸಾಹಿತ್ಯ ಸಮ್ಮೇಳನದ ಎರಡನೆಯ ದಿನದ ಕಾರ್ಯಕ್ರಮವನ್ನು ಭರ್ಜರಿ ಜಾನಪದ ಕಲಾವೈಭವದೊಂದಿಗೆ ಶುಭಾರಂಭವನ್ನು ಮಾಡಿತು.
ಕರ್ನಾಟಕದಿಂದ ಬಂದ ಜಾನಪದ ಕಲಾವಿದರು ಗಣನಾಥನಿಗೆ ನಮಿಸುವ ಪದದೊಂದಿಗೆ ತಮ್ಮ ಶಕ್ತಿ ಭರಿತ ಗಾಯನವನ್ನು ಆರಂಬಿಸಿದರು. ಜಾನಪದ ತಂಡವು ಏಕತಾರಿ, ತಾಳ ವಾದ್ಯಗಳೊಂದಿಗೆ ಉತ್ಸಾಹ ಭರಿತರಾಗಿ ಹಾಡಿದರೆ, ಜಾನಪದ ನೃತ್ಯಕಾರರು ಅಷ್ಟೇ ಶಕ್ತಿಯುತವಾಗಿ ನರ್ತಿಸಿ ಹಾಡುವವರೊಡನೆ ಸಮನಾಗಿ ಕಲಾ ಪ್ರದರ್ಶನ ಮಾಡಿದರು.
ಪ್ರೇಕ್ಷಕರು ಕರತಾಡನ ಮಾಡಿದ್ದಲ್ಲದೇ, ಅನೇಕರು ಅವರೊಂದಿಗೆ ಸ್ವತಃ ತಾವೇ ಹೆಜ್ಜೆ ಹಾಕಿದ್ದು ಮುಂಜಾನೆಯ ಸಡಗರವನ್ನು ದ್ವಿಗುಣಗೊಳಿಸಿತ್ತು. ನಂತರ ವೀರಗಾಸೆ, ಡೊಳ್ಳು ಕುಣಿತ, ತಮ್ಮಟೆವಾದ್ಯ, ಪೂಜಾ ಕುಣಿತ ಮುಂತಾದ ಜಾನಪದ ನರ್ತಕರು ವೇದಿಕೆಯ ಮೇಲೆ ಮುಖ್ಯ ಭೂಮಿಕೆ ವಹಿಸಿ ನೀಡಿದ ಪ್ರದರ್ಶನ ಪ್ರೇಕ್ಷಕರಲ್ಲಿ ಶಕ್ತಿ ಸಂಚಾಲನೆಯನ್ನುಂಟು ಮಾಡಿತು.

ಸಿಂಗನ್ನಡಿಗರೆಲ್ಲರಲ್ಲೂ ವಿದ್ಯುತ್ ಸಂಚಾರವನ್ನುಂಟು ಮಾಡಿದ ಜಾನಪದ ಕಲೆಗಳ ಮೃಷ್ಟಾನ್ನದ ನಂತರ ಭಾವಗೀತೆಗಳ ಪಾಯಸವನ್ನು ಕುಡಿಸಲು ಉಪಾಸನ ಮೋಹನ್ ಶಿಬಿರಾರ್ಥಿಗಳ ತಂಡ ವೇದಿಕೆಯಲ್ಲಿ ಸಜ್ಜಾಯಿತು. ಸಂಗೀತವನ್ನೇ ಬಾಳ ಸಂಗಾತಿಯಾಗಿ ಮಾಡಿಕೊಂಡು ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುತ್ತಿರುವ ಉಪಾಸನ ಮೋಹನ್ರವರ ಸಂಗೀತ ಸಂಯೋಜನೆಯಲ್ಲಿ ಗಾಯಕರು ಪ್ರಸಿದ್ಧ ಕವಿಗಳಾದ ಬಿ. ಆರ್. ಲಕ್ಷ್ಮಣ್ರಾವ್, ಟಿ.ಎಲ್.ಎಸ್. ಅಡಿಗ ಮತ್ತು ಲಕ್ಷ್ಮೀನಾರಾಯಣ ಭಟ್ಟರ ಭಾವಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ ಸಭಿಕರ ಮೈಮರೆಸಿದರು.
'ಒಷನ್ ಕಿಡ್ಸ್' ಕರಾವಳಿಯ ನೃತ್ಯ ವೈಭವ
ನಂತರ 'ಒಷನ್ ಕಿಡ್ಸ್' ಕರಾವಳಿಯ ನೃತ್ಯ ತಂಡವು "ನೃತ್ಯ ವಿಸ್ಮಯ" ಶೀರ್ಷಿಕೆಯಲ್ಲಿ ರಾಮಾಯಣ ಕಥಾದಾರಿತ ಶಾಸ್ತ್ರೀಯ ಶೈಲಿಯ ಪೌರಾಣಿಕ ನೃತ್ಯ ಪ್ರದರ್ಶಿಸಿ, ನೆರೆದಿದ್ದ ವೀಕ್ಷಕರನ್ನು ವಿಸ್ಮಯಗೊಳಿಸುವಲ್ಲಿ ಯಶಸ್ವಿಯಾಯಿತು. ಕೇವಲ 10-15 ನಿಮಿಷಗಳ ನೃತ್ಯ ರೂಪಕದಲ್ಲಿ ಇಡೀ ರಾಮಾಯಣದ ಸಾರವನ್ನು ಪ್ರೇಕ್ಷಕರ ಮನಮುಟ್ಟುವಂತೆ ಅಭಿನಯಿಸಿದ 'ಕಡಲ ಮಕ್ಕಳ ' ಸಾಧನೆ ನಿಜಕ್ಕೂ ಶ್ಲಾಘನೀಯ.
ಸಿಂಗಪುರ ಭರತನಾಟ್ಯ ಗುರುಗಳಲ್ಲಿ ಒಬ್ಬರಾದ ವಿದುಷಿ ಎಮ್. ಎಸ್. ಶ್ರೀಲಕ್ಷ್ಮಿಯವರ ನಿರ್ದೇಶನದಲ್ಲಿ "ಕಿಂದರಿ ಜೋಗಿ" ಎಂಬ ಕುವೆಂಪು ವಿರಚಿತ ನಾಟಕವನ್ನಾಧರಿಸಿದ ನೃತ್ಯರೂಪಕವನ್ನು ಹದಿನೈದಕ್ಕೂ ಹೆಚ್ಚಿನ ಚಿಣ್ಣರು ಅತ್ಯಂತ ಸುಂದರವಾಗಿ ಪ್ರಸ್ತುತ ಪಡಿಸಿದರು.

ಸಿಂಗಾರ ಅಜೀವ ಸಾಧನ ಪುರಸ್ಕಾರ
ಶೈಕ್ಷಣಿಕ ಕ್ಷೇತ್ರದಲ್ಲಿ ಅಮೋಘ ಸಾಧನೆಗಾಗಿ ರಾಮನಾಥ್ ಎಚ್.ಎಸ್. ಅವರಿಗೂ ಹಾಗು ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದ ಸಾಧನೆಗಾಗಿ ಡಾ. ಎಮ್. ಪ್ರಕಾಶ್ ಹಂಡೆಯವರಿಗೂ ಸಿಂಗಾರ ಅಜೀವ ಸಾಧನ ಪುರಸ್ಕಾರವನ್ನು ಕೊಟ್ಟು ಗೌರವಿಸಲಾಯಿತು.
ವೇದಿಕೆಯಲ್ಲಿ ಉಪಸ್ಥಿತರಿದ್ಧ ಪದ್ಮಶ್ರೀ ಡಾ. ಎಸ್.ಎಲ್. ಭೈರಪ್ಪ, ಪ್ರೊ. ಕೃಷ್ಣೇಗೌಡ ಮತ್ತು ಕನ್ನಡ ಸಂಘ ಸಿಂಗಪುರದ ಅಧ್ಯಕ್ಷರಾದ ವಿಜಯರಂಗ ಪ್ರಸಾದ್ರವರು ಈ ಮಹನೀಯರಿಗೆ ಶಾಲು ಮತ್ತು ಮೈಸೂರು ಪೇಟಗಳೊಂದಿಗೆ ಸನ್ಮಾನಿಸಿದರು.
ನಂತರ ಮಾತನಾಡಿದ ಸನ್ಮಾನಿತರು ಅವರಿಗೆ ಸಂದಿರುವ ಈ ಗೌರವಕ್ಕೆ ಪ್ರತಿಯಾಗಿ ಕನ್ನಡ ಸಂಘಕ್ಕೆ ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿದರು. ಕನ್ನಡ ಸಂಘ ನಡೆಸುತ್ತಿರುವ 'ಕನ್ನಡ ಕಲಿ' ಕಾರ್ಯಕ್ರಮದ ರೂವಾರಿಯಾದ ಎಚ್.ಎಸ್. ರಾಮನಾಥ್ ರವರ ಸನ್ಮಾನ ನಡೆಯುತ್ತಿರುವಾಗ, ಪ್ರೇಕ್ಷಕ ವೃಂದದಲ್ಲಿ ಉಪಸ್ಥಿತರಿದ್ದ ಅವರ ವಯೋ ವೃದ್ಧರಾದ ತಂದೆ (ಗಮಕ ವಿದ್ವಾನ್ ಶ್ರೀ ಎಚ್ ಎಸ್ ಸತ್ಯನಾರಾಯಣ) ಅವರನ್ನು ವೇದಿಕೆಯ ಮೇಲೆ ಕರೆದಾಗ ಒಂದು ಅಪೂರ್ವ ಸಂದರ್ಭ ಉಂಟಾಯಿತು. ಮಗನ ಸನ್ಮಾನ ಸಂದರ್ಭದಲ್ಲಿ ತಂದೆ ಇದ್ದುದು ತುಂಬಾ ಭಾವಪೂರ್ಣವಾಗಿ ಇಡೀ ಕನ್ನಡ ಸಂಘ ಒಂದು ದೊಡ್ಡ ಪರಿವಾರ, ನಾವೆಲ್ಲ ನಮ್ಮವರ ಏಳಿಗೆಯನ್ನು ನೋಡಿ ಸಂತೋಷಭರಿತರಾಗಿದ್ದೇವೆ ಎಂಬ ಭಾವನೆ ಉಂಟಾಯಿತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications