ಎಸ್ಎಲ್ ಭೈರಪ್ಪನವರಿಗೆ ಸಿಂಗಾರ ಸಾಹಿತ್ಯ ರತ್ನ ಪ್ರಶಸ್ತಿ
ಸಭಿಕರ ಪ್ರಚಂಡ ಕರತಾಡನದೊಂದಿಗೆ ಕನ್ನಡದ ಖ್ಯಾತ ಕಾದಂಬರಿಕಾರ, ಪದ್ಮಶ್ರೀ ಡಾ. ಎಸ್ ಎಲ್ ಭೈರಪ್ಪ ಅವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ, "ಸಿಂಗಾರ ಸಾಹಿತ್ಯ ರತ್ನ" ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಸಿಂಗಪುರ, ಅಕ್ಟೋಬರ್ 29 : ಸಂಜೆಯಾಗುತ್ತಲೇ ಸಿಂಗಪುರದ ಕನ್ನಡ ಮನಗಳೆಲ್ಲಾ ಕಾತುರದಿಂದ ಕಾಯುತ್ತಿದ್ದ ಘಳಿಗೆ ಬಂದಿತು. ಅದು ಕನ್ನಡ ಸಂಘ (ಸಿಂಗಪುರ) ದ ಮಾಸ ಪತ್ರಿಕೆ "ಸಿಂಚನ"ದ ವಿಶೇಷ ಸಂಚಿಕೆಯ ಬಿಡುಗಡೆ ಸಮಾರಂಭ.
ಕನ್ನಡ ಸಾರಸ್ವತ ಲೋಕ ಕಂಡ ಅತ್ಯಂತ ಜನಪ್ರಿಯ ಕಾದಂಬರಿಕಾರ ಡಾ. ಎಸ್ ಎಲ್ ಭೈರಪ್ಪ ಅವರು, ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ, ಪಬ್ಲಿಕ್ ಟಿವಿಯ ಸಿದ್ಧಹಸ್ತ ಪತ್ರಕರ್ತ ಎಚ್ ಆರ್ ರಂಗನಾಥ, ಜಾನಪದ ಅಕಾಡೆಮಿಯ ಅಧ್ಯಕ್ಷ ಕಪ್ಪಣ್ಣ ಮುಂತಾದವರ ಸಮ್ಮುಖದಲ್ಲಿ ಬಿಡುಗಡೆ ಮಾಡಿದರು.
ಸಭಿಕರ ಪ್ರಚಂಡ ಕರತಾಡನದೊಂದಿಗೆ ಕನ್ನಡದ ಖ್ಯಾತ ಕಾದಂಬರಿಕಾರ, ಪದ್ಮಶ್ರೀ ಡಾ. ಎಸ್ ಎಲ್ ಭೈರಪ್ಪ ಅವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ, "ಸಿಂಗಾರ ಸಾಹಿತ್ಯ ರತ್ನ" ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ, "ಸಿಂಗಾರ ವಾಸ್ತು ರತ್ನ" ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಡಾ, ಎಸ್ ಎನ್ ಓಂಕಾರ ಅವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ, "ಸಿಂಗಾರ ಯೋಗ ರತ್ನ" ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಪಬ್ಲಿಕ್ ಟಿವಿಯ ಸಿದ್ಧಹಸ್ತ ಪತ್ರಕರ್ತ ಎಚ್ ಆರ್ ರಂಗನಾಥ, ಜಾನಪದ ಅಕ್ಯಾಡೆಮಿಯ ಅಧ್ಯಕ್ಷ ಕಪ್ಪಣ್ಣ, ಕನ್ನಡ ಸಂಸ್ಕೃತಿ ಇಲಾಖೆಯ ಶ್ರೀ ಚೆನ್ನೂರ್, ಮತ್ತು ಆರ್ಟ್ ಆಫ್ ಲಿವಿಂಗ್ನ ರವೀಂದ್ರ ಪ್ರಸಾದ್ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸಲ್ಲಿಸಿ ಗೌರವಿಸಲಾಯಿತು.
ನಂತರ ಡಾ. ಎಸ್ ಎಲ್ ಭೈರಪ್ಪ ಮಾತನಾಡುತ್ತ, ಅವರನ್ನು ಒಬ್ಬ ಬರಹಗಾರರಾಗಿ ಬೆಳೆಸುವುದರಲ್ಲಿ ಓದುಗರ ಪಾತ್ರವೇ ಪ್ರಮುಖ ಎಂದು ಅಭಿಪ್ರಾಯಪಟ್ಟರು. ಅಲ್ಲದೇ ಎಲ್ಲರಿಗೂ "ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವ ಕೆಟ್ಟ ಚಾಳಿ"ಯನ್ನು ಕನ್ನಡಿಗರು ತೊರೆದು, ಮನೆಯಲ್ಲಿ ಮತ್ತು ಎಲ್ಲೆಲ್ಲಿ ಸಾಧ್ಯವಾಗುತ್ತದೆಯೋ ಅಲ್ಲಲ್ಲಿ ಕನ್ನಡದಲ್ಲೇ ಮಾತನಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮಕ್ಕಳಿಗೆ ಕನ್ನಡ ಕಲಿಸುತ್ತಿರುವ ಕನ್ನಡ ಸಂಘ (ಸಿಂಗಪುರ)ದ ಪ್ರಯತ್ನವನ್ನು ಶ್ಲಾಘಿಸಿದ ಅವರು, ಈ ಪ್ರಯತ್ನ ಸದಾ ಮುಂದುವರೆಯಬೇಕು ಎಂದು ಪ್ರೋತ್ಸಾಹಿಸಿದರು. ಉದಾಹರಣೆಯಾಗಿ ಇಂಗ್ಲೆಂಡಿನಲ್ಲಿ ನೆಲೆಸಿರುವ ಮಾರ್ವಾಡಿಗಳು ಮತ್ತು ಗುಜರಾತಿಗಳು ತಮ್ಮ ಮಕ್ಕಳಿಗೆ ತಮ್ಮ ಭಾಷೆಯನ್ನೇ ಕಲಿಸುವ ರೂಢಿಯನ್ನು ಕುರಿತಾಗಿ ಮಾತನಾಡಿದರು.
ನಮ್ಮ ಜನರು ಮಕ್ಕಳನ್ನು ಕೇವಲ ಉದ್ಯೋಗಾವಕಾಶಕ್ಕಾಗಿ ಮಾತ್ರ ಬದುಕಗೊಡದೇ, ಉದ್ಯೋಗಪತಿಗಳಾಗುವಂತೆ ತರಬೇತಿ ನೀಡಬೇಕು ಎಂದು ಅಭಿಪ್ರಾಯಪಟ್ಟರು. ಇದರಿಂದ ತಮ್ಮತನ, ಭಾಷೆ, ಮತ್ತು ಸಂಸ್ಕೃತಿಗೆ ಬಲಬರುತ್ತದೆ ಎಂದು ನಮ್ಮವರು ಅರಿಯಬೇಕು ನುಡಿದರು.
ರಂಗನಾಥ ಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತ, ದೂರದಲ್ಲಿರುವವರಿಗೆ ತಮ್ಮ ನೆಲ ಜಲದ ಬಗ್ಗೆ ಸ್ವಾಭಾವಿಕ ಆಸಕ್ತಿ ಮತ್ತು ಭಕ್ತಿ ಎಂದು ಹೇಳಿದರು. ಕನ್ನಡ ಸಂಘ (ಸಿಂಗಪುರ)ದ ಈ ಬೃಹತ್ ಪ್ರಯತ್ನವನ್ನು ಶ್ಲಾಘಿಸಿದರು. ಬೆಂಗಳೂರಿನಲ್ಲಿ ಕೂಡ ಇಂತಹ ಪ್ರಯತ್ನಗಳನ್ನು ಮಾಡುವ ಕಾಲ ಮುಂದೊಂದು ದಿನ ಬರಬಹುದು ಎಂದು ವಿಡಂಬನಾತ್ಮಕವಾಗಿ ಮಾತನಾಡಿದರು. ಸಿಂಗಪುರದ ಹೆಸರಿನಲ್ಲೇ ಕನ್ನಡವಿದೆ ಎಂದು ನುಡಿದ ಅವರು, ಸಿಂಗನ್ನಡಿಗರು ತಮ್ಮ ಕನ್ನಡ ಪ್ರೇಮವನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡ ವರ್ಗಾಯಿಸಬೇಕು ಎಂದು ಕರೆ ನೀಡಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications