'ಧ್ವನಿ ಶ್ರೀರಂಗ' ಅಂತಾರಾಷ್ಟ್ರೀಯ ರಂಗ ಪ್ರಶಸ್ತಿಗೆ ಸಿಕೆ ಗುಂಡಣ್ಣ ಆಯ್ಕೆ
ದುಬೈ, ಫೆಬ್ರವರಿ 04 : ನಾಲ್ಕು ದಶಕಗಳಿಂದಲೂ ಹೆಚ್ಚು ಕಾಲ ರಂಗ ನಟನಾಗಿ, ರಂಗಕರ್ಮಿಯಾಗಿ, ಸಂಘಟಕನಾಗಿ ಸೇವೆ ಸಲ್ಲಿಸಿದ ಸಿಕೆ ಗುಂಡಣ್ಣ ಅವರಿಗೆ ಪ್ರತಿಷ್ಠಿತ 'ಧ್ವನಿ ಶ್ರೀರಂಗ' ಅಂತಾರಾಷ್ಟ್ರೀಯ ರಂಗ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ದುಬೈನ ಧ್ವನಿ ಪ್ರತಿಷ್ಠಾನ ಕನ್ನಡ ರಂಗಭೂಮಿಯಲ್ಲಿ ಸೇವೆಗೈಯುವವರನ್ನು ಗುರುತಿಸಿ ಕಳೆದ ಒಂದು ದಶಕಗಳಿಂದ 'ಧ್ವನಿ ಶ್ರೀರಂಗ' ಅಂತಾರಾಷ್ಟ್ರೀಯ ರಂಗ ಪ್ರಶಸ್ತಿಯನ್ನು ನೀಡುತ್ತ ಬಂದಿದೆ.
ಆದ್ಯ ರಂಗಾಚಾರ್ಯರ ನೆನಪಿನಲ್ಲಿ ಅಂತಾರಾಷ್ಟ್ರೀಯ ನೆಲೆಯಲ್ಲಿ ಕೊಡಮಾಡುವ ರಂಗ ಪ್ರಶಸ್ತಿಗೆ ಈ ತನಕ ಬಿ. ಜಯಶ್ರೀ, ಟಿ.ಎಸ್. ನಾಗಭರಣ, ಶ್ರೀನಿವಾಸ ಕಪ್ಪಣ್ಣ, ಮುಖ್ಯಮಂತ್ರಿ ಚಂದ್ರು, ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ, ಡಾ. ಎಚ್.ಎಸ್. ಶಿವಪ್ರಕಾಶ್, ಉಮಾಶ್ರೀ, ಡಾ. ನಾ.ದಾ. ಶೆಟ್ಟಿ, ಗಿರಿಜಾ ಲೋಕೇಶ್ ಮುಂತಾದವರು ಭಾಜಕರಾಗಿರುವರು. ಪ್ರಶಸ್ತಿಯನ್ನು ದುಬಾಯಿಯ ಎಮಿರೇಟ್ಸ್ ಥಿಯೇಟರ್ ನಲ್ಲಿ ಫೆಬ್ರವರಿ 8ರಂದು ಶುಕ್ರವಾರ ಸಂಜೆ ಪ್ರದಾನಿಸಲಾಗುವುದು.

ರಾಷ್ಟ್ರೀಯ ಚಲಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಪಿ. ಶೇಷಾದ್ರಿ ಹಾಗು ದುಬೈಯ ಭಾರತೀಯ ಧೂತಾವಾಸದ ಕಾನ್ಸುಲೇಟ್ ಜನರಲ್ ವಿಪುಲ್ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ಪ್ರಸ್ತುತ ವರ್ಷದ "ಧ್ವನಿ ಪುರಸ್ಕಾರ" ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ರಂಗ ನಟಿ ಹಾಗು ಸಾಮಾಜಿಕ ಕಾರ್ಯಕರ್ತೆ ಗೋಪಿಕಾ ಮಯ್ಯ ಅವರಿಗೆ ನೀಡಲಾಗುವುದು.
ಇದೇ ಸಂದರ್ಭದಲ್ಲಿ ಡಾ.ಎನ್. ಎಸ್. ಲಕ್ಷ್ಮೀ ನಾರಯಣ ಭಟ್ ಅವರ ಅನುವಾದದ "ಮೃಚ್ಛಕಟಿಕ "ನಾಟಕವನ್ನು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರ ನಿರ್ದೇಶನದಲ್ಲಿ ರಂಗವೇರಿಸಲಾಗುವುದು. ಆರತಿ ಅಡಿಗ, ಪ್ರಭಾಕರ ಕಾಮತ್, ವಾಸು ಬಾಯರ್ ಮುಖ್ಯ ಭೂಮಿಕೆಯಲ್ಲಿರುವ ಈ ನಾಟಕದಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚು ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಕಾರ್ಯಕ್ರಮಕ್ಕೆ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಆಯೋಜಕರು ವಿನಂತಿಸಿಕೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications