ಕಸಾರಂನಲ್ಲಿ ತ್ರಿವೇಣಿ ಮತ್ತು ಜ್ಯೋತಿ 'ಸಾಹಿತ್ಯ ಸಲ್ಲಾಪ'
ಏಪ್ರಿಲ್ 29 ಮತ್ತು 30, 2017ರ೦ದು ನ್ಯೂ ಇಂಗ್ಲೆಂಡ್ ಕನ್ನಡ ಕೂಟ 'ಮಂದಾರ'ದ ಸಹಯೋಗ ಮತ್ತು ಆಶ್ರಯದಲ್ಲಿ ಬಾಸ್ಟನ್ ನಗರದ ಬಳಿ ಇರುವ ಫ್ರೇಮಿಂಘ್ಯಾಮ್ನಲ್ಲಿ ಸಮ್ಮೇಳನ ನಡೆಯಲಿದೆ.
ಭಾಷಾಬಾಂಧವರಿಗೆ ವಂದನೆ.
ಮತ್ತೊಮ್ಮೆ ನಿಮ್ಮನ್ನೆಲ್ಲ ಎದುರುಗೊಳ್ಳುವ ಸಂದರ್ಭ ಕೂಡಿಬಂದಿದೆ. ಮತ್ತೊಂದು ವಸಂತ ಸಾಹಿತ್ಯೋತ್ಸವಕ್ಕೆ ನಮ್ಮ ಕನ್ನಡ ಸಾಹಿತ್ಯ ರಂಗ ಅಣಿಯಾಗಿದೆ. ಕನ್ನಡ ಸಾಹಿತ್ಯಕ್ಕೆಂದೇ ಮೀಸಲಾಗಿ ಅದನ್ನೇ ಗುರಿಯಾಗಿರಿಸಿಕೊಂಡು ತುಡಿಯುತ್ತಿರುವ ಸಮಾನಾಸಕ್ತರ ರಾಷ್ಟ್ರೀಯ ಒಕ್ಕೂಟ, ಅಮೆರಿಕದ ಉದ್ದಗಲದಲ್ಲಿ ಕನ್ನಡ ಸಾಹಿತ್ಯದ ಅಚ್ಚರುಚಿಯನ್ನು ಹರಡುವಲ್ಲಿ ಸಕ್ರಿಯವಾಗಿರುವ ಏಕೈಕ ಸಂಸ್ಥೆ ಕನ್ನಡ ಸಾಹಿತ್ಯ ರಂಗ. ತಮಗೆಲ್ಲರಿಗೂ ತಿಳಿದೇ ಇದೆ.
ಈಗ ನಮ್ಮ ಎಂಟನೇ ವಸಂತ ಸಾಹಿತ್ಯೋತ್ಸವ. ಎಂದಿನಂತೆಯೇ ಈ ಬಾರಿಯೂ, ನಮ್ಮೆಲ್ಲ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಲು, ಒಟ್ಟು ಸಾಹಿತ್ಯೋತ್ಸವವನ್ನು ಯಶಸ್ವಿಗೊಳಿಸುವಲ್ಲಿ ಸಹಭಾಗಿಯಾಗಲು ನಿಮ್ಮನ್ನು ಆಮಂತ್ರಿಸುತ್ತಿದ್ದೇವೆ.
ಈ ಬಾರಿ, ಮತ್ತೊಮ್ಮೆ ನಾವು ಗೆಳತಿಯರಿಬ್ಬರೂ ಕೂಡಿಕೊಂಡು 'ಸಾಹಿತ್ಯ ಸಲ್ಲಾಪ'ವನ್ನು ನಡೆಸಿಕೊಡಲು ನಿಯೋಜಿತರಾಗಿದ್ದೇವೆ, ಅದನ್ನು ಅತ್ಯಂತ ಪ್ರೀತ್ಯಾಸಕ್ತಿಯಿಂದ ಒಪ್ಪಿಕೊಂಡಿದ್ದೇವೆ. ಹಾಗೆ ಈ ಕಾರ್ಯಕ್ರಮವನ್ನು ಸುಲಲಿತ ಸಲ್ಲಾಪವಾಗಿಸಲು ನಿಮ್ಮೆಲ್ಲರ ಒಳಗೊಳ್ಳುವಿಕೆಯನ್ನು ವಿನಮ್ರವಾಗಿ ಆಶಿಸುತ್ತಿದ್ದೇವೆ.

ಏಪ್ರಿಲ್ 29 ಮತ್ತು 30, 2017ರ೦ದು ನ್ಯೂ ಇಂಗ್ಲೆಂಡ್ ಕನ್ನಡ ಕೂಟ 'ಮಂದಾರ'ದ ಸಹಯೋಗ ಮತ್ತು ಆಶ್ರಯದಲ್ಲಿ ಬಾಸ್ಟನ್ ನಗರದ ಬಳಿ ಇರುವ ಫ್ರೇಮಿಂಘ್ಯಾಮ್ನಲ್ಲಿ ಸಮ್ಮೇಳನ ನಡೆಯಲಿದೆ. ಕನ್ನಡದ ವಿಶಿಷ್ಟ ಲೇಖಕ, ಚಿಂತಕ, ವಾಗ್ಮಿ, ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರು ಈ ಸಮ್ಮೇಳನದ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. [ಕನ್ನಡ ಸಾಹಿತ್ಯ ರ೦ಗದ 8ನೇ ವಸಂತ ಸಾಹಿತ್ಯೋತ್ಸವ]
1- ಅಮೆರಿಕನ್ನಡ ಬರಹಗಾರರು ಇದರಲ್ಲಿ ಭಾಗವಹಿಸಬಹುದು.
2- ಗದ್ಯ ಅಥವಾ ಪದ್ಯ ರೂಪದ ತಮ್ಮ ಸ್ವಂತ ಕೃತಿಯನ್ನು ಇದರಲ್ಲಿ ತಾವು ಸ್ವತಹ ಹಾಜರಿದ್ದು ಪ್ರಸ್ತುತಪಡಿಸುವ ಅವಕಾಶವಿದು.
3- ಗದ್ಯವಾದರೆ ಏಳು ನಿಮಿಷಗಳ ಪ್ರಸ್ತುತಿ ಹಾಗೂ ಪದ್ಯವಾದರೆ ಐದು ನಿಮಿಷಗಳ ಪ್ರಸ್ತುತಿ. ಈ ಸಮಯ ಮಿತಿಯೊಳಗೆ ತಮ್ಮ ಪ್ರಸ್ತುತಿಯನ್ನು ಕ್ಲಪ್ತವಾಗಿ ಮುಗಿಸಿಕೊಡಿ.
4- ಒಬ್ಬರಿಗೆ ಒಂದೇ ಅವಕಾಶ.
5- ತಮ್ಮ ಕೃತಿ ಮಾರ್ಚ್ ಕೊನೆಯಲ್ಲಿ, ತಾ. ಮೂವತ್ತೊಂದರೊಳಗಾಗಿ (30-03-2017), ನಮಗೆ- ತ್ರಿವೇಣಿ ರಾವ್ ([email protected]) ಅಥವಾ ಜ್ಯೋತಿ ಮಹಾದೇವ್ ([email protected]) -ತಲುಪಿಸಿರಿ. ನಿರ್ವಹಣೆಗೆ ಅನುಕೂಲವಾಗುವುದು.
6- ತಮ್ಮ ಪ್ರಸ್ತುತಿಯನ್ನು ಕಳುಹಿಸುವ ಮೊದಲೊಮ್ಮೆ ತಾವೇ ಓದಿಕೊಂಡು ನಿಗದಿತ ಸಮಯದ ಮಿತಿಯೊಳಗೆ ಇದೆಯೆಂದು ಖಚಿತಪಡಿಸಿಕೊಂಡರೆ ಒಳಿತು. ಸಮಯಾನುಸಂಧಾನ ಮೀರುವಂತಿದ್ದರೆ ನಿರಾಕರಣೆಯ ಸಾಧ್ಯತೆಯಿದೆ.
7- ಕೃತಿ ಕನ್ನಡದಲ್ಲೇ ಇರಬೇಕು. 'ಭಕ್ತಿ ಸಾಹಿತ್ಯ'ವೆನ್ನುವ ಈ ಬಾರಿಯ ಆಶಯ-ಚಿಂತನೆಗೆ ಹೊಂದುವಂತಿದ್ದರೆ ಉತ್ತಮ. ಆದರೆ ಅದು ಕಡ್ಡಾಯವಲ್ಲ. ವೈವಿಧ್ಯಮಯ ಬರಹಗಳಿಗೂ ಸ್ವಾಗತವಿದೆ.
ನಿಮ್ಮನ್ನು ಬಾಸ್ಟನ್ನಿನಲ್ಲಿ, ವಸಂತ ಸಾಹಿತ್ಯೋತ್ಸವದ ವೇದಿಕೆಯಲ್ಲಿ ಭೇಟಿಯಾಗುವ ಉತ್ಸಾಹದಲ್ಲಿ,
ಇಂತಿ,
ತ್ರಿವೇಣಿ, ಜ್ಯೋತಿ.
ಸಮ್ಮೇಳನದ ಸುದ್ದಿಗಳಿಗಾಗಿ ನಮ್ಮ ತಾಣಕ್ಕೆ ಭೇಟಿಕೊಡುತ್ತಿರಿ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications