ದುಬೈನಲ್ಲಿ ಬಸವ ಜಯಂತಿ, ಬಿ ಜಯಶ್ರೀಗೆ 'ಬಸವ ಭೂಷಣ' ಪುರಸ್ಕಾರ
ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈ ಮಹಾನಗರದ ಅಲ್ -ಸಫಾದಲ್ಲಿರುವ ಜೆ.ಎಸ್.ಎಸ್ ಪ್ರೈವೇಟ್ ಸ್ಕೂಲ್ ಸಭಾಂಗಣದಲ್ಲಿ ಮೇ 4, 2018ರ ಶುಕ್ರವಾರ ಸಂಜೆ 3 ಗಂಟೆಗೆ ಬಸವ ಜಯಂತಿ-2018 ಆಚರಿಸಲಿದೆ.
ದುಬೈನಲ್ಲಿರುವ ಯು.ಎ.ಇ ಬಸವ ಸಮಿತಿ ಈ ಸಮಾರಂಭವನ್ನು ಆಯೋಜಿಸಿದ್ದು, ಪಟ್ಟದ ಶ್ರೀ ಮಲಯ ಶಾಂತ ಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು, ಶಿವಗಂಗಾ ಕ್ಷೇತ್ರ ಇವರ ದಿವ್ಯ ಸಾನ್ನಿಧ್ಯವಲ್ಲಿ ಜರುಗಲಿದೆ.
ಸಮಾರಂಭದ ಮುಖ್ಯ ಅತಿಥಿಗಳಾಗಿ ಶ್ರೀ ಪೂಜ್ಯ ಶಿವಶಾಂತವೀರ ಚಿಕ್ಕೇನಕೊಪ್ಪ ಶರಣರು, ಹಾಗು ಖ್ಯಾತ ವಚನಕಾರ, ಪ್ರವಚನಕಾರ, ಜಾನಪದ ವಿದ್ವಾಂಸ, ಪ್ರಸಕ್ತ ವರ್ಷದ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ ರವರು ಪಾಲ್ಗೊಳ್ಳಲಿದ್ದಾರೆ.

2018ರ ಸಾಲಿನ "ಬಸವ ಭೂಷಣ" ಪ್ರಶಸ್ತಿಯನ್ನು ಪ್ರಸಿದ್ಧ ಹಾಗು ಪ್ರತಿಭಾವಂತ ನಿರ್ದೇಶಕಿ, ನಟಿ, ಗಾಯಕಿ ಹಾಗು ಸಮಾಜಸೇವಕಿ ಪದ್ಮಶ್ರೀ ಬಿ. ಜಯಶ್ರೀ ಯವರಿಗೆ, ಅವರು ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಪ್ರದಾನಿಸಲಾಗುವುದು.
ಸ್ಥಳೀಯ ಕಲಾವಿದರ ಸಂಗೀತ ನೃತ್ಯ ಪ್ರದರ್ಶನವಲ್ಲದೆ, ತಾಯ್ನಾಡಿನಿಂದ ಬರಲಿರುವ ನೃತ್ಯಗಾರ್ತಿ ನಾಗವೇಣಿ ಕುಲಕರ್ಣಿ ಹಾಗು ಹೆಸರಾಂತ ಚಲನಚಿತ್ರ ಹಾಗು ರಾಷ್ಟ್ರ ಪ್ರಶಸ್ತಿ ವಿಜೇತ ರಂಗ ಸಂಗೀತ ನಿರ್ದೇಶಕ, ಗಾಯಕ ರಾಮಚಂದ್ರ ಹಡಪದ್ ಅವರು ವಿವಿಧ ಪ್ರದರ್ಶನಗಳನ್ನು ನೀಡಲಿದ್ದಾರೆ . ಅಲ್ಲದೆ ಅನ್ನ ದಾಸೋಹ ಪ್ರಸಾದ ವಿತರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭವನ್ನು ಯು.ಎ.ಇ ಬಸವ ಸಮಿತಿಯ ಪ್ರಸ್ತುತ ಅವಧಿಯ ನೇತೃತ್ವ ವಹಿಸಿರುವ ಸಂಗಮೇಶ ಬಿಸರಳ್ಳಿಯವರು, ಸಲಹಾ ಸಮಿತಿಯ ಸದಸ್ಯರುಗಳಾದ ಮುರುಗೇಶ್ ಗಾಜರೆ, ಮಲ್ಲಿಕಾರ್ಜುನ ಮುಳ್ಳೂರು, ಡಾ. ಶಿವಕುಮಾರ್, ರುದ್ರಯ್ಯ ನವಲಿ ಹಿರೇಮಠ್, ಚಂದ್ರಶೇಖರ್ ಲಿಂಗದಳ್ಳಿ, ಡಾ. ಮಮತಾ ರೆಡ್ಡೇರ, ಜಗದೀಶ್ ಲಾಳಿ, ಸತೀಶ್ ಹಿಂಡೇರ ಹಾಗು ಕಾರ್ಯಕರ್ತರ ಸಹಯೋಗದೊಂದಿಗೆ ಆಯೋಜಿಸಿರುತ್ತಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈ ನಗರದಲ್ಲಿ ಕೇವಲ 12 ಕುಟುಂಬಗಳ ಸಮ್ಮಿಲದೊಂದಿಗೆ 2005ರಲ್ಲಿಆರಂಭಗೊಂಡ ಬಸವ ಸಮಿತಿ ಇಂದು ಬೃಹದಾಕಾರವಾಗಿ ಬೆಳೆದು 400ಕ್ಕೂ ಮಿಕ್ಕು ಕುಟುಂಬಗಳನ್ನೊಳಗೊಂಡಿದೆ. ಬಸವ ತತ್ವ ಎತ್ತಿಹಿಡಿಯುವಿಕೆ ಹಾಗು ಸಮಾಜಮುಖಿ ಸೇವೆಗಳನ್ನು ಪರಿಗಣಿಸಿ ಪುರಸ್ಕರಿಸುವ ಯು.ಎ.ಇ ಬಸವ ಸಮಿತಿಯ ಬಸವ ಭೂಷಣ ಪ್ರಶಸ್ತಿಯನ್ನು 2016ರಲ್ಲಿ ಡಾ. ನೀರಜ್ ಪಾಟೀಲ್ ಹಾಗು 2017ರಲ್ಲಿ ಶಿವಾನಂದ ಜಾಮದಾರ್ ಅವರಿಗೆ ನೀಡಿ ಗೌರವಿಸಲಾಗಿದೆ.
ಪ್ರೆಶಿಯಸ್ ಪಾರ್ಟೀಸ್ ಆಂಡ್ ಎಂಟರ್ಟೈನ್ಮೆಂಟ್ ನ ಸಹಯೋಗದೊಂದಿಗೆ ಆಯೋಜಿಸಿರುವ ಕಾರ್ಯಕ್ರಮಕ್ಕೆ ತುಂಬು ಹೃದಯದ ಸಹಕಾರದೊಂದಿಗೆ, ಯು.ಎ.ಇಯಲ್ಲಿ ನೆಲೆಸಿರುವ ಎಲ್ಲಾ ಕನ್ನಡಿಗರ ಉಪಸ್ಥಿತಿಯನ್ನು ಬಸವ ಸಮಿತಿ ದುಬೈ ಎದುರು ನೋಡುತ್ತಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications