ಕುವೈತ್ ನಲ್ಲಿ ಬಿಡುಗಡೆಯಾದ ಮೇಷ್ಟ್ರ ಪ್ರವಾಸ ಕಥನ
ಉಡುಪಿಯ ಪತ್ರಿಕೋದ್ಯಮ ಕಾಲೇಜಿನ ಮೇಷ್ಟ್ರು ಮಂಜುನಾಥ್ ಕಾಮತ್ ಅವರು ಬರೆದಿರುವ 'ದಾರಿ ತಪ್ಪಿಸು ದೇವರೇ' ಎಂಬ ಪ್ರವಾಸ ಕಥನ ಕುವೈತ್ ನಲ್ಲಿ ವಿಧ್ಯುಕ್ತವಾಗಿ ಇತ್ತೀಚೆಗೆ ಬಿಡುಗಡೆಯಾಯಿತು.
ಉಡುಪಿಯ ಮಹಾತ್ಮಾ ಗಾಂಧಿ ಮೆಮೋರಿಯಲ್ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಮಂಜುನಾಥ್ ಕಾಮತ್ ಅವರು. ಕರ್ನಾಟಕ ಕರಾವಳಿಯ ಲೇಖಕರೊಬ್ಬರು ರಚಿಸಿರುವ ಕೃತಿಯೊಂದು ಮೊದಲ ಬಾರಿಗೆ ಗಲ್ಫ್ ನಲ್ಲಿ ಬಿಡುಗಡೆಯಾಗಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕುವೈತ್ ಕನ್ನಡ ಸಂಘ, ಕುವೈತ್ ನ ಸಾಹಿತ್ಯ ಸಂಪದ, ಭಾರತೀಯ ಪ್ರವಾಸಿ ಪರಿಷತ್, ಕುವೈತ್ ನ ಜಿಎಸ್ಬಿ ಸಭಾ ಸಂಘಟನೆಗಳು ಜಂಟಿಯಾಗಿ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಜಗದ್ವಿಖ್ಯಾತ ಕುವೈತ್ ಟವರ್ ಬಳಿ ಈ ಪ್ರವಾಸಿ ಕಥನ ಪುಸ್ತಕ ಬಿಡುಗಡೆಯಾಯಿತು.

ಸಾಹಿತ್ಯ ಸಂಪದದ ಆಝಾದ್ ಅವರು, "ಕರಾವಳಿಯಾದ್ಯಂತ ಸುತ್ತಾಡಿದ ಅನುಭವ ಕಥೆಯುಳ್ಳ ಈ ಕೃತಿ, ತಾಯ್ನಾಡಿನಿಂದ ದೂರ ಇರುವ ನಮ್ಮನ್ನೆಲ್ಲ ಕನ್ನಡ ನಾಡಿಗೆ ಕರೆದೊಯ್ಯುತ್ತದೆ. ಕನ್ನಡ ನೆಲದಲ್ಲಿ ನಾವೂ ಲೇಖಕರ ಜೊತೆ ಸುತ್ತಾಡಿದ ಅನುಭವವಾಗುತ್ತದೆ. ಕನ್ನಡ ಲೋಕದ ಪ್ರವಾಸೀ ಸಾಹಿತ್ಯ ಮತ್ತಷ್ಟು ಬೆಳಗಲಿ" ಎಂದು ಪುಸ್ತಕ ಬಿಡುಗಡೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿ.ಎಸ್.ಬಿ ಸಭಾದ ಮಂಜೇಶ್ವರ ಮೋಹನದಾಸ ಕಾಮತ್ ಅವರು, "ಅರಬ್ ರಾಷ್ಟ್ರದಲ್ಲಿ ಮೊತ್ತಮೊದಲ ಬಾರಿಗೆ ಕನ್ನಡ ಪುಸ್ತಕ ಬಿಡುಗಡೆಯಾಗುತ್ತಿರುವುದು ಅತ್ಯಂತ ಸಂತೋಷ ಉಂಟುಮಾಡುತ್ತಿದೆ. ಕನ್ನಡ ಸಾಹಿತ್ಯ ಜಗತ್ತಿನಾದ್ಯಂತ ಪಸರಿಸಲಿ" ಎಂದು ಶುಭ ಹಾರೈಸಿದರು.
ಭಾರತೀಯ ಪ್ರವಾಸೀ ಪರಿಷತ್ತಿನ ರಾಜ್ ಭಂಡಾರಿ, "ಪ್ರವಾಸವೆಂದರೆ ಕೇವಲ ಪೋಲಿ ಅಲೆತವಲ್ಲ. ಅಲ್ಲೂ ಬೆರಗು ಹುಟ್ಟಿಸುವ ಕಥೆಗಳಿರುತ್ತವೆ. ಮಾನವೀಯ ಮುಖಗಳಿರುತ್ತವೆ. ಅವು ಈ ಕೃತಿಯಲ್ಲಿ ಅಮೋಘವಾಗಿ ದಾಖಲಾಗಿವೆ" ಎಂದು ನುಡಿದರು.
ಸಂತೋಷ್ ಶೆಟ್ಟಿ, ಶ್ರೀನಿವಾಸ ಪ್ರಭು, ಅಮೃತ್ ರಾಜ್ ಉಪಸ್ಥಿತರಿದ್ದರು. ದುಬೈ ಹಾಗೂ ಒಮಾನ್ ದೇಶಗಳಲ್ಲೂ ಈ ಕೃತಿಯು ಬಿಡುಗಡೆಗೊಳ್ಳಲಿದೆ ಎಂದು ಅವರು ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications