ವಿದ್ಯಾರಣ್ಯ ಕನ್ನಡ ಕೂಟದಲ್ಲಿ 'ಸುಗ್ಗಿಯ ಸಂಭ್ರಮ'
ಅಮೆರಿಕದ ಚಿಕಾಗೋ ವಲಯದ ಕನ್ನಡ ಸಂಘ, "ವಿದ್ಯಾರಣ್ಯ ಕನ್ನಡ ಕೂಟ"ದವರು ಇದೇ ಫೆಬ್ರವರಿ 10 ಭಾನುವಾರದಂದು ಸಂಕ್ರಾಂತಿ ಹಬ್ಬವನ್ನು "ಸುಗ್ಗಿಯ ಸಂಭ್ರಮ"ವನ್ನಾಗಿ ಆಚರಿಸಿದರು. ಲೆಮೊಂಟಿನ ರಾಮ ದೇವಾಲಯದಲ್ಲಿ ಅದ್ದೂರಿಯಾಗಿ ಈ ಕಾರ್ಯಕ್ರಮ ನಡೆಯಿತು. ಕೊರೆಯುವ ಚಳಿ, ಬಹಳಷ್ಟು ಹಿಮಪಾತವಾಗಿದ್ದರೂ ಅಧಿಕ ಸಂಖ್ಯೆಯಲ್ಲಿ ಕೂಟದ ಕನ್ನಡಿಗರು ನೆರೆದಿದ್ದರು.
ಪೂಜೆ, ಪ್ರಸಾದ ವಿನಿಯೋಗದ ನಂತರ ಗಣ್ಯ ಅತಿಥಿಗಳು, ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಗಾಟಿಸಿದರು. ದೇವತಾ ಪ್ರಾರ್ಥನೆಯ ನಂತರ, ಅಮೆರಿಕ ಹಾಗೂ ಭಾರತದ ರಾಷ್ಟೀಯ ಗೀತೆಗಳನ್ನು ಸಿರಿಗನ್ನಡ ಶಾಲೆಯ ಮಕ್ಕಳು ಹಾಡಿದರು. ನಾಡಗೀತೆ ಗಾಯನದ ನಂತರ ವಿದ್ಯಾರಣ್ಯ ಕನ್ನಡ ಕೂಟದ ಈ ವರ್ಷದ ಅಧ್ಯಕ್ಷರಾದ ಶ್ರೀಶ ಜಯಸೀತಾರಾಮ್ ಅವರು ಸ್ವಾಗತ ಭಾಷಣ ಮಾಡಿದರು.

ದಿನದ ವಿಶೇಷ ಮನರಂಜನಾ ಕಾರ್ಯಕ್ರಮ "ನಿರೀಕ್ಷಾ", ಸೈಂಟ್ ಲೂಯಿಸ್ ನಿಂದ ಅತಿಥಿ ಕಲಾವಿದರಾಗಿ ಬಂದಿದ್ದ 'ಸೂರ್ಯ ಕಲಾ ವೃಂದ' ದವರಿಂದ. 'ನಾಟ್ಯ ವಿದ್ವಾನ್' ಪ್ರಸನ್ನ ಕಸ್ತೂರಿ ಮತ್ತು 'ಅಕ್ಕ ಐಡಲ್' ಸೀಮಾ ಕಸ್ತೂರಿ ಅವರ ನೇತೃತ್ವದ ತಂಡ, ನೂತನ ಭಾವಗೀತೆಗಳ ಗಾಯನ ಮತ್ತು ನರ್ತನವನ್ನು ಭರತನಾಟ್ಯ ಹಾಗೂ ಕಥಕ್ ನೃತ್ಯ ಶೈಲಿಗಳಲ್ಲಿ ವಿನೂತನ ರೀತಿಯಲ್ಲಿ ಪ್ರಸ್ತುತಪಡಿಸಿ ಸದಸ್ಯರನ್ನು ರಂಜಿಸಿದರು.
ಇದಲ್ಲದೆ ಕೂಟದ ಸದಸ್ಯರ ಹಿರಿಯರ ನಗೆನುಡಿ, ಕಿರಿಯರ ಸವಿನುಡಿ, ಕಿರಿಯರ ಛದ್ಮವೇಷ ಕಾರ್ಯಕ್ರಮಗಳು ಚೆನ್ನಾಗಿ ಮೂಡಿ ಬಂದವು. 'ಬಂತು ಬಂತು ಸುಗ್ಗಿ' ವೃಂದಗಾನ, 'ಸುಗ್ಗಿ ಕಾಲ ಹಿಗ್ಗಿ ಬಂದಿತು' ಸಮೂಹ ನೃತ್ಯ, ಲೈವ್ ಆರ್ಕೇಸ್ಟ್ರಾದೊಂದಿಗೆ ಹಾಡು, 'ಮಲ್ಲಾರಿ' ನಾಟ್ಯ ಸಭಿಕರ ಮನ ಗೆದ್ದವು.

ಇತ್ತೀಚೆಗಷ್ಟೇ ನಿಧನರಾದ ಖ್ಯಾತ ಕವಿ ಜಿ.ಎಸ್.ಶಿವರುದ್ರಪ್ಪನವರ ನೆನಪಿನಲ್ಲಿ 'ಕಾವ್ಯ ನಮನ' ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸಂಕ್ರಾಂತಿ ಅಂಗವಾಗಿ ಮಕ್ಕಳಿಗೆ ಗಾಳಿಪಟದ ಅಲಂಕಾರ ಸ್ಪರ್ಧೆಯನ್ನೂ ಕೂಡ ಏರ್ಪಡಿಸಲಾಗಿತ್ತು. ಎಳ್ಳು-ಬೆಲ್ಲ, ಕೊಸುಂಬರಿ, ಸಿಹಿ ಪೊಂಗಲ್, ಖಾರ ಪೊಂಗಲ್, ಕೂಡಿದ ಸಂಕ್ರಾಂತಿ ಹಬ್ಬದ ವಿಶೇಷ ಊಟದೊಂದಿಗೆ ಕಾರ್ಯಕ್ರಮದ ಮುಕ್ತಾಯವಾಯಿತು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications