ಸಿಂಗಾರ ಸಮ್ಮೇಳನಕ್ಕೆ ಅಧ್ಯಕ್ಷರ ಅತ್ಯಾದರದ ಸ್ವಾಗತ
ಸಮಸ್ತ ಕನ್ನಡ ಬಾಂಧವರಿಗೆ ನಮಸ್ಕಾರ,
ಎಲ್ಲರಿಗೂ ನವರಾತ್ರಿ ಹಾಗೂ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು.
ಕನ್ನಡ ಸಂಘ (ಸಿಂಗಪುರ)ಕ್ಕೆ ಈಗ 20ನೇ ವರ್ಷ, ತಾರುಣ್ಯ ಕಳೆಯನ್ನು ತುಂಬಿಕೊಂಡು, ನೈತಿಕವಾಗಿ ಬೆಳೆದು ಶಕ್ತಿ ಭರಿತಗೊಂಡಿದೆ. ಅನೇಕ ಕಾರ್ಯಕರ್ತರ, ಸದಸ್ಯರುಗಳ ಸಂಘದ ಜೊತೆಗಿನ ಅವಿನಾಭಾವ ಸಂಬಂಧವೇ ಕನ್ನಡ ಸಂಘ (ಸಿಂಗಪುರ)ದ ಸಾಮರ್ಥ್ಯ.
ಬಾಲ್ಯ ಲೀಲೆಗಳಿಂದ ಸಂಘವು ನಮ್ಮನ್ನೆಲ್ಲಾ ಆಕರ್ಷಿಸುತ್ತಾ, ನಮ್ಮ ಮನವನ್ನು ಮುದಗೊಳಿಸಿದೆ. ಪೋಷಕರಂತೆ ನಾವೆಲ್ಲರೂ ಸಂಘವನ್ನು ಆರೈಕೆಮಾಡಿ ಬೆಳೆಸಿಕೊಂಡು ಬಂದಿದ್ದೇವೆ. ಸಂಘದ ಗೆಲ್ಗೆ-ಏಳ್ಗೆಗೇ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣೀಭೂತರಾದ ಎಲ್ಲರನ್ನೂ ಕೃತಜ್ಞತಾ ಪೂರ್ವಕವಾಗಿ ನೆನೆಯುವ ಸಂದರ್ಭ ಇದಾಗಿದೆ.
ನಿರೀಕ್ಷೆಗೂ ಮೀರಿ 20 ವರ್ಷಗಳ ಕಾಲ ಬಲಾಢ್ಯವಾಗಿ ಬೆಳದು ಯೌವನ ತುಂಬಿ ಠೀವಿಯಿಂದ ಮೆರಯುತ್ತಿರುವ ನಮ್ಮ ಕನ್ನಡ ಸಂಘ (ಸಿಂಗಪುರ)ದ ಮುಂದಿನ ನಡೆಗಳು ಸುಭದ್ರವಾಗಿ, ನಿಶ್ಚಲವಾದ ಗುರಿಯೊಡನೆ ಜವಾಬ್ದಾರಿಯುತವಾಗಿ ಸಾಗಬೇಕಾಗಿದೆ. ಇಂತಹ ಲಕ್ಷ್ಯ ಸಾಧನೆಯ ಬಗ್ಗೆ ಸಮಾನ ಮನಸ್ಸಿನೊಡನೆ ಚರ್ಚಿಸಲು ಕನ್ನಡ ಸಮ್ಮೇಳನ ಒಂದು ನಿಮಿತ್ತವಾಗುತ್ತದೆ.

ಸಮ್ಮೇಳನಗಳು ಒಂದು ಜಾತ್ರೆ, ವೈಭವ-ಆಡಂಬರಗಳೇ ಹೆಚ್ಚು, ವೃಥಾ ಖರ್ಚು ಎಂಬದು ಅನೇಕರ ಭಾವನೆಯಾದರೂ, ಗಾಢ-ಗಂಭೀರವಾಗಿ ಯೋಚಿಸಿದಾಗ ಇಂತಹ ಉತ್ಸವಗಳು ಆಗಿಂದ್ದಾಗೆ ನಡೆಯುತ್ತಿರಬೇಕು ಎಂಬುದು ಅಂತರಂಗದ ತುಡಿತ.
"ಉತ್-ಸವ" ಎನ್ನುವ ಪದವೇ ಪ್ರಸ್ತುತ ಎಡೆಯಿಂದ ಮೇಲೆತ್ತುವುದು ಎಂಬ ಅರ್ಥವನ್ನು ಸೂಚಿಸುತ್ತದೆ. ಇಂತಹ ಜಾತ್ರೆಗಳಿಂದ ಮಾತ್ರವಲ್ಲದೆ ಸಂತೆಗಳಿಂದ ಪ್ರಯೋಜನಗಳುಂಟು ಎಂಬುದನ್ನು ಮರೆಯದಿರೋಣ. ಜಾತ್ರೆ ಎಂಬುದು 'ಯಾತ್ರೆ'ಯ 'ಸಂತೆ' ಎಂಬುದು 'ಸಂಸ್ಥೆ'ಯ ತದ್ಭವಗಳಷ್ಟೆ.
ಬದುಕು ಅಸತ್ತಿನಿಂದ ಸತ್ತಿನೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ, ಅನಂತ ಯಾತ್ರೆಯಾಗಬೇಕು. ಸಾವಿರಾರು ಮೈಲಿಗಳಿಂದ ದೂರಬಂದಿರುವ ನಾವೆಲ್ಲರೂ ಒಂದು ಕಡೆ ಸೇರುವುದು, ಒಬ್ಬರನ್ನೊಬ್ಬರು ಭೇಟಿಯಾಗುವುದು, ಪರಸ್ಪರ ಮಾತಾನಾಡುವುದು ಈ ಉತ್ಸವದ ಫಲಗಳು.
ಈಗಿನ ಜಾಗತೀಕರಣ, ಉದಾರೀಕರಣ, ಖಾಸಗೀಕರಣ ಎಂಬ 'ತ್ರಿಕರಣ'ಗಳ 'ಸುನಾಮಿ'ಯಲ್ಲಿ ಸಿಕ್ಕಿಕೊಂಡಿರುವ ನಮಗೆ, ಅಸಹಜ ಪ್ರಭಾವದಿಂದ ಪಾರಾಗಿ ನಮ್ಮ ಅನನ್ಯತೆಯನ್ನು, ಸ್ವಂತಿಕೆಯನ್ನು ಸ್ಥಾಪಿಸಬೇಕಾದರೆ ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಳ್ಳವುದು ಅವಶ್ಯ. ಕನ್ನಡ ಸಂಸ್ಕೃತಿ ಸಮ್ಮೇಳನ ಎನ್ನುವಲ್ಲಿ 'ಕನ್ನಡ ಸಂಸ್ಕೃತಿ' ಎಂಬುದು ಒಂದೇ ನಾಣ್ಯದ ಎರಡು ಮುಖದಂತೆ ಏಕಶಬ್ದಗ್ರಾಹಕವಾಗಿದೆ.
ನಮ್ಮ ಕನ್ನಡ ಸಂಸ್ಕೃತಿಯನ್ನು ವಿಶ್ವದಾದ್ಯಂತ ಹರಡಿ ವಿರಾಜಿಸುವಂತೆ ಮಾಡುವ ಧ್ಯೇಯ ಹಾಗೂ ಸಾಧನೆಯ ಸಂಕಲ್ಪವನ್ನು ಈ ಸಮ್ಮೇಳನದ ಸಮಯದಲ್ಲಿ ಮಾಡಬೇಕಾಗಿದೆ. ನಾವು ಇನ್ನಷ್ಟು ಸಮಾಜಮುಖಿಯಾದ ಕೆಲಸಗಳನ್ನು ಹಮ್ಮಿಕೊಂಡು, ನಮ್ಮ ಮನಸ್ಸಿನ ಸಂತೋಷದ ಜೊತೆಗೆ, ನಮ್ಮ ಕಾರ್ಯಚಟುವಟಿಕೆಗಳನ್ನು ಇಮ್ಮಡಿಗೊಳಿಸಲು ಸಮ್ಮೇಳನಗಳು ಸಾಕ್ಷಿಯಾಗಬೇಕು.
ಪ್ರಸ್ತುತ ನಡೆಯುತ್ತಿರುವ "ಸಿಂಗಾರ ಕನ್ನಡ ಸಂಸ್ಕೃತಿ ಸಮ್ಮೇಳನ"ಕ್ಕೆ ತಮ್ಮಗೆಲ್ಲರಿಗೂ ಹೃದಯ ಪೂರ್ವಕವಾಗಿ ಸ್ವಾಗತವನ್ನು ಕೋರುತ್ತಿದ್ದೇನೆ. ನಾವು-ನೀವು ಈ ಸಮ್ಮೇಳನವನ್ನು ವಿಜೃಂಭಣೆಯಿಂದ ಆಚರಿಸೋಣ ಬನ್ನಿ. ಸಮ್ಮೇಳನದ ಕಂಪು ಈಗಾಗಲೇ ಎಲ್ಲೆಡೆ ಹರಡಿ ಅನೇಕ ಸಿಂಗನ್ನಡಿಗ ಸ್ವಯಂಸೇವಕರು ತನು-ಮನ-ಧನದಿಂದ ನಮ್ಮ ಸಂಸ್ಕೃತಿಗಾಗಿ ಪ್ರವೃತ್ತಿದಾಯಕದಿಂದ ಶ್ರಮಿಸುತ್ತಿದ್ದಾರೆ. ನೀವೆಲ್ಲರೂ ಈ ಸಮಾವೇಶದಲ್ಲಿ ಪಾಲ್ಗೊಂಡು ಸಮ್ಮೇಳನದ ಯಶಸ್ಸಿಗೆ ಪಾತ್ರರಾಗಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ. ನಿಮ್ಮ ಸಕ್ರಿಯ ಭಾಗವಹಿಸುವಿಕೆ ನಮಗೆ ಊರುಗೋಲು. ನಿಮ್ಮ ಕುಟುಂಬದ ಜೊತೆಗೆ, ನಿಮ್ಮ ಸ್ನೇಹಿತರನ್ನು ಕರೆತನ್ನಿ. ನಿಮ್ಮ ಬೆಂಬಲವೇ ನಮಗೆ ಆನೆಯಬಲ ಎಂಬುದನ್ನು ಸವಿನಯ ಪೂರ್ವಕವಾಗಿ ಒತ್ತಾಯಿಸುತ್ತಿದ್ದೇನೆ.
ಅಕ್ಟೋಬರ್ 29 ಹಾಗು 30ರಂದು ನಡೆಯಲಿರುವ ಎರಡು ದಿನಗಳ ಬೃಹತ್ ಸಮಾವೇಶದಲ್ಲಿ ನಮ್ಮ ಕನ್ನಡ ಭಾಷೆ, ಕನ್ನಡದ ಸಂಸ್ಕೃತಿ, ಕನ್ನಡದ ಸೊಬಗು-ಸೊಗಡು, ಬೆಡಗು-ಬೆರಗು, ಹಿರಿಮೆ-ಗರಿಮೆಗಳನ್ನು ಬಿಂಬಿಸುವ ಕಲೆಗಳ ಸಂಗಮ, ಜಾನಪದ ಮೆರವಣಿಗೆ, ನಾಟಕ, ಹಾಸ್ಯ, ರಸಮಯವಾದ ಕರ್ನಾಟಕವನ್ನು ಪ್ರತಿಬಿಂಬಿಸುವ ನೃತ್ಯ, ಗಾಯನ, ಕನ್ನಡ ಕಣ್ಮಣಿಯರನ್ನು ನೆನೆಪಿಸುವ ಸಂಗೀತ ಸಂಜೆಯಂತಹ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಕಲಾವಿದರೊಂದಿಗೆ, ಕನ್ನಡ ನಾಡಿನ ಅನೇಕ ಕಲಾವಿದರು, ಪ್ರಸಿದ್ಧ ಸಾಹಿತಿಗಳು, ಗಣ್ಯರು, ಅತಿಥಿ-ಅಭ್ಯಾಗತರು, ಪ್ರಾಯೋಜಕರು ನಮಗೋಸ್ಕರ ಈ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಎಲ್ಲ ಕನ್ನಡಿಗರ ಅಭಿಮಾನದ ಹನಿಗಳು ಕೂಡಿ ನಾಲೆಯಾಗಿ, ನಾಲೆಯಿಂದ ಹೊಳೆಯಾಗಲಿ, ಹೊಳೆ ಹರಿದು ಕನ್ನಡವೆಂಬ ಸುಂದರ ಸಾಗರವನ್ನು ಸೇರಲಿ. ಎಲ್ಲ ಭಾಷೆಗಳನ್ನು ಪ್ರೀತಿಸೋಣ, ಆದರೆ ಕನ್ನಡ ಭಾಷೆಯನ್ನು ಆರಾಧಿಸೋಣ. ಎಲ್ಲೇ ಇದ್ದರೂ, ಒಳ್ಳೆಯ ಕನ್ನಡಿಗರಾಗಿ ಬದುಕೋಣ; ಬನ್ನಿ, ಒಟ್ಟಾಗಿ ಸೇರಿ ಕನ್ನಡದ ದೀಪವನ್ನು ಹಚ್ಚೋಣ, ಕನ್ನಡದ ಕೀರ್ತಿಯನ್ನು ಹೆಚ್ಚಿಸೋಣ, ಕನ್ನಡಾಂಬೆಯನ್ನು ಮೆರೆಸೋಣ.
ವಿಜಯ ರಂಗ ಪ್ರಸಾದ ಎನ್.ಎಸ್
ಅಧ್ಯಕ್ಷರು
ಕನ್ನಡ ಸಂಘ (ಸಿಂಗಪುರ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications