ಕೆನಡಾದ ಟೊರೊಂಟೊದಲ್ಲಿ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ
ಹೃದಯವಾಹಿನಿ ಮಂಗಳೂರು, ಕನ್ನಡ ಕಸ್ತೂರಿ ರೇಡಿಯೊ ಟೊರೊಂಟೊ ಮತ್ತು ಬಿ.ವಿ.ನಾಗ್ ಕಮ್ಯುನಿಕೇಷನ್ ಇಂಕ್. ಟೊರೆಂಟೊದ ಸಂಯುಕ್ತವಾಗಿ 2 ದಿನಗಳ 11ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನವನ್ನು ಟೊರೊಂಟೊ ಒಂಟಾರಿಯೋದಲ್ಲಿರುವ ಗ್ರಾಂಡ್ ವಿಕ್ಟೋರಿಯನ್ ಕನ್ವೆಷನ್ ಸೆಂಟರ್ನಲ್ಲಿ ಜೂನ್ 27 ಮತ್ತು 28ರಂದು ಹಮ್ಮಿಕೊಳ್ಳಲಾಗಿದೆ.
ಸಮ್ಮೇಳನದಲ್ಲಿ ಸಾಹಿತ್ಯಕ್ಕೆ ಸಂಬಂಧಪಟ್ಟಂತೆ ಕವಿಗೋಷ್ಠಿ, ಹಾಸ್ಯ ಗೋಷ್ಠಿ, ಮಾಧ್ಯಮ ಗೋಷ್ಠಿ ಹಾಗೂ ಅನಿವಾಸಿ ಕನ್ನಡಿಗರ ಗೋಷ್ಠಿ ಜರುಗಲಿವೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯ, ಜಾನಪದ ನೃತ್ಯ, ನೃತ್ಯ ರೂಪಕ, ಯಕ್ಷಗಾನ ಮುಂತಾದ ಕಲೆಗಳು ಪ್ರದರ್ಶನಗೊಳ್ಳಲಿವೆ.

ಈ ಹಿಂದೆ 2004 ಮತ್ತು 2012ರಲ್ಲಿ ಅಬುಧಾಬಿ, 2005 ಮತ್ತು 2010ರಲ್ಲಿ ಸಿಂಗಪುರ, 2006 ಮತ್ತು 2011ರಲ್ಲಿ ಬಹರೇನ್, 2007ರಲ್ಲಿ ಕುವೈಟ್, 2008ರಲ್ಲಿ ಕತಾರ್, 2009ರಲ್ಲಿ ದುಬೈ, ಮತ್ತು 2013ರಲ್ಲಿ ಆಫ್ರಿಕಾದ ಕೀನ್ಯಾದಲ್ಲಿ ಅನುಕ್ರಮವಾಗಿ 10 ಸಮ್ಮೇಳನಗಳು ನಡೆದಿವೆ.
ಸಮ್ಮೇಳನ ನಡೆಯಲಿರುವ ಸಭಾಂಗಣದ ಹೊರವಲಯದಲ್ಲಿ ವಸ್ತು ಪ್ರದರ್ಶನ, ಪುಸ್ತಕಮೇಳವನ್ನು ಏರ್ಪಡಿಸಲಾಗುವುದು. ಕೆನಡಾದಲ್ಲಿ 1000ಕ್ಕೂ ಹೆಚ್ಚು ಕನ್ನಡಿಗರಿದ್ದಾರೆ. ಕೆನಡಾದ ಅಮೆರಿಕಾ ಗಡಿ ಪ್ರದೇಶಗಳಾದ, ಬಫೆಲೊ, ಕನೆಕ್ಟಿಕಟ್, ಮತ್ತು ಡೆಟ್ರಾಯಿಟ್ ನಲ್ಲಿ ನೆಲೆಸಿರುವ ಕನ್ನಡಿಗರು ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಜೂನ್ 27ರಂದು ಮಧ್ಯಾಹ್ನ ಉದ್ಘಾಟನೆ ನೆರವೇರಲಿದೆ.
ಕರ್ನಾಟಕ ಮತ್ತು ಭಾರತದ ಇತರ ಭಾಗಗಳಿಂದ ಸುಮಾರು 70ಕ್ಕೂ ಹೆಚ್ಚು ಸದಸ್ಯರ ಸಾಂಸ್ಕೃತಿಕ ನಿಯೋಗ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದೆ. ವಿವಿಧ ದೇಶಗಳ ಕನ್ನಡ ಸಂಘಗಳ ಪದಾಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿರುವರು.
ವಿಶೇಷ ಸಂಚಿಕೆ ಮತ್ತು ಪ್ರಶಸ್ತಿ : 11ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದ ಅಂಗವಾಗಿ ವಿಶೇಷ ಸಂಚಿಕೆಯನ್ನು ಹೊರತರಲಾಗುತ್ತಿದೆ. ಪ್ರತಿ ವರ್ಷದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಕಲಾವಿದ, ಸಾಹಿತಿ, ವೈದ್ಯ, ತಂತ್ರಜ್ಞ ಹಾಗೂ ಸಮಾಜ ಸೇವಕರಿಗೆ ವಿಶ್ವ ಮಾನ್ಯರು-2014 ಪ್ರತಿಷ್ಠಿತ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಜೂ.28ರ ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪ್ರದಾನ ಮಾಡಿ ಗೌರವಿಸಲಾಗುವುದು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications