ದುಬೈನಲ್ಲಿ ಕರ್ನಾಟಕ ಸಂಗೀತದ ಸುಂದರ ಸಂಜೆ
ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಶಿಷ್ಯೆ ಶ್ರೀಮತಿ ಸ್ಮಿತಾ ನೂಜಿಬೈಲ್ ಅವರ ನೇತೃತ್ವದಲ್ಲಿ ಶುಕ್ರವಾರ , ದಿನಾಂಕ 27 ಮಾರ್ಚ್ 2015 ರಂದು ದುಬೈ ನಗರದ ಅಲ್ ಕರಾಮಾದ SNG ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಸುಂದರ ಸಂಜೆ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿಬಂತು.
ಶ್ರೀಮತಿ ಸ್ಮಿತಾರೊಂದಿಗೆ ಅವರ ಶಿಷ್ಯರಾದ ಶ್ರೀಮತಿ ಜಯಲಕ್ಷ್ಮೀ ಪ್ರಸಾದ್, ಕು.ಸುಮಾಲಕ್ಷ್ಮೀ, ಕು.ಕ್ಷಮಾ ವೋರುಂಬುಡಿ, ಕು.ಶ್ರೇಯಾ ಶಾಂತಿ ಪ್ರಸಾದ್, ಕು.ಸುಧೀಕ್ಷಾ ಮಂಜುನಾಥ್, ಕು.ಸಂಜನಾ ನೂಜಿಬೈಲ್, ಅಮಿತ್ ಭಟ್ ನೆಕ್ಕರೆ ಮತ್ತು ಅನಿರುದ್ದ ಭಟ್ ನೆಕ್ಕರೆ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಕು.ಸುಮಾಲಕ್ಷ್ಮಿಯವರು "ನಿನ್ನು ಕೋರಿ" ಎನ್ನುವ ವರ್ಣದೊಂದಿಗೆ ಆರಂಭಿಸಿದರು. ನಂತರ ಶ್ರೀ ಮುತ್ತಯ್ಯ ಭಾಗವತರ್ ಅವರ ಕೃತಿಯ ಹಾಡು ಅದ್ಬುತವಾಗಿ ಮೂಡಿ ಬಂತು. ಕು.ಸಂಜನಾ ಹಾಗೂ ಕು.ಸುಧಿಕ್ಷಾ ತಿಲಂಗ್ ರಾಗದಲ್ಲಿ "ತಾರಕ್ಕ ಬಿಂದಿಗೆ" ಹಾಡನ್ನು ಸುಶ್ರಾವ್ಯವಾಗಿ ಹಾಡಿದರು. (ಎನ್ನಾರೈಗಳಿಗೆ ಮತದಾನದ ಹಕ್ಕು)
ಖರಹರ ಪ್ರಿಯ ರಾಗದಲ್ಲಿ ಅನಿರುದ್ಧ ಭಟ್ ನೆಕ್ಕರೆ ಅವರ ಕಂಠದಿಂದ "ರಾಮ ನೀ ಸಮಾನವೆಮರು" ಮಧುರವಾಗಿ ಹೊರಹೊಮ್ಮಿತು. ಶ್ರೀ ತ್ಯಾಗರಾಜರ ಕೃತಿ 'ತುಳಸೀದಳ'ವನ್ನು ಕು. ಶ್ರೇಯಾ ಹಾಗೂ ಕು. ಕ್ಷಮಾ ಜಂಟಿಯಾಗಿ ಹಾಡಿದರು. ಶ್ರೀಮತಿ ಜಯಲಕ್ಷ್ಮೀ ಪ್ರಸಾದ್ 'ಆರಭೀ' ರಾಗದಲ್ಲಿ 'ಪಾಹಿಪರ್ವತ' ಎನ್ನುವ ಹಾಡನ್ನು ಸುಶ್ರಾವ್ಯವಾಗಿ ಹಾಡಿದರು.
ಶ್ರೀಮತಿ ಸ್ಮಿತಾ ನೂಜಿಬೈಲು ಇವರ ಕಂಠಸಿರಿಯಿಂದ ಹಲವು ಕೃತಿಗಳು ಅದ್ಭುತವಾಗಿ ಮೂಡಿ ಬಂದು ಕಿಕ್ಕಿರಿದು ಸೇರಿದ್ದ ಸಂಗೀತ ಪ್ರಿಯರ ಮನರಂಜಿಸಿತು. 'ನಾಟರಾಗ'ದ ಗಜಮುಖನೆ ಸಿದ್ಧಿದಾಯಕನೆ' ಕೃತಿಯಿಂದ ಪ್ರಾರಂಭಗೊಂಡು ಮೋಹನ-ಕಲ್ಯಾಣಿ ರಾಗದಲ್ಲಿ ಭುವನೇಶ್ವರಿಯ, ಶ್ರೀರಂಜಿನಿ ರಾಗದ ಸೊಗಸುಗಾ ಮೃದಂಗ ತಾಳಮು, ಬಿಲಹರಿ ರಾಗದಲ್ಲಿ ನಾರಾಯಣ ತೀರ್ಥರ ತರಂಗ ಪೂರಯ ಮಮಕಾಮಮ್ ಗೋಪಾಲಮ್, ಮೈಸೂರು ವಾಸುದೇವಾಚಾರ್ಯ ರಚಿತ ರಾಗ ಸಿಂಹೇಂದ್ರ ಮಧ್ಯಮದಲ್ಲಿ 'ನಿನ್ನೇ ನಮ್ಮೀತಿ' ಮುಂತಾದ ಹಾಡನ್ನು ಸ್ಮಿತಾ ಹಾಡಿದರು

ಅಲ್ಲದೇ, ಶಿವರಂಜಿನಿ ರಾಗದಲ್ಲಿ 'ಶಿವ ಶಿವ', ರೇವತಿ ರಾಗದ 'ಪಾರ್ವತಿ ಭಗವತಿ', ಸಿಂಧೂ ಭೈರವಿ ರಾಗದ 'ವೆಂಕಟಾಚಲ ನಿಲಯಂ', ಶ್ರೀ ಬಾಲಮುರಳಿ ಕೃಷ್ಣ ರಚಿತ 'ಬೃಂದಾವನಿ' ರಾಗದ 'ತಿಲ್ಲಾನ ಹಾಡನ್ನು ಸ್ಮಿತಾ ಪ್ರಸ್ತುತ ಪಡಿಸಿದರು.
ಸ್ಮಿತಾರವರು ಪ್ರಧಾನ ರಾಗವಾಗಿ ಸಿಂಹೇಂದ್ರ ಮಧ್ಯಮವನ್ನು ಆರಿಸಿಕೊಂಡು 'ನಿನ್ನೇ ನಮ್ಮಿತಿ' ಕೃತಿಯನ್ನು ಉತ್ತಮವಾಗಿ ಪ್ರಸ್ತುತ ಪಡಿಸಿದರು. ವೆಂಕಟೇಶ್ ಅವರ ತನಿ ಆವರ್ತನ ಎಲ್ಲರ ಪ್ರಶಂಸೆಗೊಳಗಾಯಿತು. ಕಾರ್ಯಕ್ರಮವು ಮಧ್ಯಮಾವತಿ ರಾಗದ 'ರಾಮ ನಾಮ ಭಜರೇ' ಸಮೂಹ ಗಾಯನದೊಂದಿಗೆ ಮುಕ್ತಾಯಗೊಂಡಿತು.
ವಯೊಲಿನ್ ನಲ್ಲಿ ಶ್ರೀಮತಿ ಸಂಗೀತಾ ರಾಜೇಶ್ ಹಿತವಾಗಿ ಹಾಗೂ ಮೃದಂಗದಲ್ಲಿ ಶ್ರೀ ವೆಂಕಟೇಶ್ ಸ್ಪೂರ್ತಿದಾಯಕ ಸಾಥ್ ನೀಡಿದರು. (ಸೌದಿಯಲ್ಲಿ ಸಾರೆ ಜಂಹಾಸೆ ಅಚ್ಛಾ)

ಶ್ರೀಮತಿ ಶಂಕರಿ ತಂತ್ರಿಯವರಿಂದ ತಮ್ಮ 10ನೇ ವಯಸ್ಸಿನಲ್ಲಿ ಸಂಗೀತಭ್ಯಾಸ ಆರಂಭಿಸಿದ ಸ್ಮಿತಾ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಶಾಸ್ತ್ರೀಯ ಸಂಗೀತದ ತವರು ಎಂದೇ ಪ್ರಖ್ಯಾತವಾಗಿರುವ ಕಾಂಚನದವರಾದ ಪುತ್ತೂರಿನ ವಿದ್ವಾನ್ ಕಾಂಚನ ಈಶ್ವರ ಭಟ್ ಇವರ ಶಿಷ್ಯೆ.
ಶಾಸ್ತ್ರೀಯ ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ದಿ. ವಿದ್ವಾನ್ ಕಾಂಚನ ಸುಬ್ಬರತ್ನಂ ಅವರ ಶಿಷ್ಯರಾದ ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ಸಂಗೀತದ ಗುರು ಮಾತ್ರವಲ್ಲ ಪ್ರಸಿದ್ಧ ಮೃದಂಗ ವಾದಕರು. ಡಾ. ಬಾಲಮುರಳಿ ಕೃಷ್ಣ ಮೊದಲಾದ ಖ್ಯಾತ ಕಲಾವಿದರಿಗೆ ಪಕ್ಕವಾದ್ಯದಲ್ಲಿ ಸಹಕರಿಸಿದ ಖ್ಯಾತಿ ಇವರದು.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications