ದುಬೈನಲ್ಲಿ ಕರ್ನಾಟಕ ಸಂಗೀತದ ಸುಂದರ ಸಂಜೆ
ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಶಿಷ್ಯೆ ಶ್ರೀಮತಿ ಸ್ಮಿತಾ ನೂಜಿಬೈಲ್ ಅವರ ನೇತೃತ್ವದಲ್ಲಿ ಶುಕ್ರವಾರ , ದಿನಾಂಕ 27 ಮಾರ್ಚ್ 2015 ರಂದು ದುಬೈ ನಗರದ ಅಲ್ ಕರಾಮಾದ SNG ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಸುಂದರ ಸಂಜೆ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿಬಂತು.
ಶ್ರೀಮತಿ ಸ್ಮಿತಾರೊಂದಿಗೆ ಅವರ ಶಿಷ್ಯರಾದ ಶ್ರೀಮತಿ ಜಯಲಕ್ಷ್ಮೀ ಪ್ರಸಾದ್, ಕು.ಸುಮಾಲಕ್ಷ್ಮೀ, ಕು.ಕ್ಷಮಾ ವೋರುಂಬುಡಿ, ಕು.ಶ್ರೇಯಾ ಶಾಂತಿ ಪ್ರಸಾದ್, ಕು.ಸುಧೀಕ್ಷಾ ಮಂಜುನಾಥ್, ಕು.ಸಂಜನಾ ನೂಜಿಬೈಲ್, ಅಮಿತ್ ಭಟ್ ನೆಕ್ಕರೆ ಮತ್ತು ಅನಿರುದ್ದ ಭಟ್ ನೆಕ್ಕರೆ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಕು.ಸುಮಾಲಕ್ಷ್ಮಿಯವರು "ನಿನ್ನು ಕೋರಿ" ಎನ್ನುವ ವರ್ಣದೊಂದಿಗೆ ಆರಂಭಿಸಿದರು. ನಂತರ ಶ್ರೀ ಮುತ್ತಯ್ಯ ಭಾಗವತರ್ ಅವರ ಕೃತಿಯ ಹಾಡು ಅದ್ಬುತವಾಗಿ ಮೂಡಿ ಬಂತು. ಕು.ಸಂಜನಾ ಹಾಗೂ ಕು.ಸುಧಿಕ್ಷಾ ತಿಲಂಗ್ ರಾಗದಲ್ಲಿ "ತಾರಕ್ಕ ಬಿಂದಿಗೆ" ಹಾಡನ್ನು ಸುಶ್ರಾವ್ಯವಾಗಿ ಹಾಡಿದರು. (ಎನ್ನಾರೈಗಳಿಗೆ ಮತದಾನದ ಹಕ್ಕು)
ಖರಹರ ಪ್ರಿಯ ರಾಗದಲ್ಲಿ ಅನಿರುದ್ಧ ಭಟ್ ನೆಕ್ಕರೆ ಅವರ ಕಂಠದಿಂದ "ರಾಮ ನೀ ಸಮಾನವೆಮರು" ಮಧುರವಾಗಿ ಹೊರಹೊಮ್ಮಿತು. ಶ್ರೀ ತ್ಯಾಗರಾಜರ ಕೃತಿ 'ತುಳಸೀದಳ'ವನ್ನು ಕು. ಶ್ರೇಯಾ ಹಾಗೂ ಕು. ಕ್ಷಮಾ ಜಂಟಿಯಾಗಿ ಹಾಡಿದರು. ಶ್ರೀಮತಿ ಜಯಲಕ್ಷ್ಮೀ ಪ್ರಸಾದ್ 'ಆರಭೀ' ರಾಗದಲ್ಲಿ 'ಪಾಹಿಪರ್ವತ' ಎನ್ನುವ ಹಾಡನ್ನು ಸುಶ್ರಾವ್ಯವಾಗಿ ಹಾಡಿದರು.
ಶ್ರೀಮತಿ ಸ್ಮಿತಾ ನೂಜಿಬೈಲು ಇವರ ಕಂಠಸಿರಿಯಿಂದ ಹಲವು ಕೃತಿಗಳು ಅದ್ಭುತವಾಗಿ ಮೂಡಿ ಬಂದು ಕಿಕ್ಕಿರಿದು ಸೇರಿದ್ದ ಸಂಗೀತ ಪ್ರಿಯರ ಮನರಂಜಿಸಿತು. 'ನಾಟರಾಗ'ದ ಗಜಮುಖನೆ ಸಿದ್ಧಿದಾಯಕನೆ' ಕೃತಿಯಿಂದ ಪ್ರಾರಂಭಗೊಂಡು ಮೋಹನ-ಕಲ್ಯಾಣಿ ರಾಗದಲ್ಲಿ ಭುವನೇಶ್ವರಿಯ, ಶ್ರೀರಂಜಿನಿ ರಾಗದ ಸೊಗಸುಗಾ ಮೃದಂಗ ತಾಳಮು, ಬಿಲಹರಿ ರಾಗದಲ್ಲಿ ನಾರಾಯಣ ತೀರ್ಥರ ತರಂಗ ಪೂರಯ ಮಮಕಾಮಮ್ ಗೋಪಾಲಮ್, ಮೈಸೂರು ವಾಸುದೇವಾಚಾರ್ಯ ರಚಿತ ರಾಗ ಸಿಂಹೇಂದ್ರ ಮಧ್ಯಮದಲ್ಲಿ 'ನಿನ್ನೇ ನಮ್ಮೀತಿ' ಮುಂತಾದ ಹಾಡನ್ನು ಸ್ಮಿತಾ ಹಾಡಿದರು

ಅಲ್ಲದೇ, ಶಿವರಂಜಿನಿ ರಾಗದಲ್ಲಿ 'ಶಿವ ಶಿವ', ರೇವತಿ ರಾಗದ 'ಪಾರ್ವತಿ ಭಗವತಿ', ಸಿಂಧೂ ಭೈರವಿ ರಾಗದ 'ವೆಂಕಟಾಚಲ ನಿಲಯಂ', ಶ್ರೀ ಬಾಲಮುರಳಿ ಕೃಷ್ಣ ರಚಿತ 'ಬೃಂದಾವನಿ' ರಾಗದ 'ತಿಲ್ಲಾನ ಹಾಡನ್ನು ಸ್ಮಿತಾ ಪ್ರಸ್ತುತ ಪಡಿಸಿದರು.
ಸ್ಮಿತಾರವರು ಪ್ರಧಾನ ರಾಗವಾಗಿ ಸಿಂಹೇಂದ್ರ ಮಧ್ಯಮವನ್ನು ಆರಿಸಿಕೊಂಡು 'ನಿನ್ನೇ ನಮ್ಮಿತಿ' ಕೃತಿಯನ್ನು ಉತ್ತಮವಾಗಿ ಪ್ರಸ್ತುತ ಪಡಿಸಿದರು. ವೆಂಕಟೇಶ್ ಅವರ ತನಿ ಆವರ್ತನ ಎಲ್ಲರ ಪ್ರಶಂಸೆಗೊಳಗಾಯಿತು. ಕಾರ್ಯಕ್ರಮವು ಮಧ್ಯಮಾವತಿ ರಾಗದ 'ರಾಮ ನಾಮ ಭಜರೇ' ಸಮೂಹ ಗಾಯನದೊಂದಿಗೆ ಮುಕ್ತಾಯಗೊಂಡಿತು.
ವಯೊಲಿನ್ ನಲ್ಲಿ ಶ್ರೀಮತಿ ಸಂಗೀತಾ ರಾಜೇಶ್ ಹಿತವಾಗಿ ಹಾಗೂ ಮೃದಂಗದಲ್ಲಿ ಶ್ರೀ ವೆಂಕಟೇಶ್ ಸ್ಪೂರ್ತಿದಾಯಕ ಸಾಥ್ ನೀಡಿದರು. (ಸೌದಿಯಲ್ಲಿ ಸಾರೆ ಜಂಹಾಸೆ ಅಚ್ಛಾ)

ಶ್ರೀಮತಿ ಶಂಕರಿ ತಂತ್ರಿಯವರಿಂದ ತಮ್ಮ 10ನೇ ವಯಸ್ಸಿನಲ್ಲಿ ಸಂಗೀತಭ್ಯಾಸ ಆರಂಭಿಸಿದ ಸ್ಮಿತಾ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಶಾಸ್ತ್ರೀಯ ಸಂಗೀತದ ತವರು ಎಂದೇ ಪ್ರಖ್ಯಾತವಾಗಿರುವ ಕಾಂಚನದವರಾದ ಪುತ್ತೂರಿನ ವಿದ್ವಾನ್ ಕಾಂಚನ ಈಶ್ವರ ಭಟ್ ಇವರ ಶಿಷ್ಯೆ.
ಶಾಸ್ತ್ರೀಯ ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ದಿ. ವಿದ್ವಾನ್ ಕಾಂಚನ ಸುಬ್ಬರತ್ನಂ ಅವರ ಶಿಷ್ಯರಾದ ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ಸಂಗೀತದ ಗುರು ಮಾತ್ರವಲ್ಲ ಪ್ರಸಿದ್ಧ ಮೃದಂಗ ವಾದಕರು. ಡಾ. ಬಾಲಮುರಳಿ ಕೃಷ್ಣ ಮೊದಲಾದ ಖ್ಯಾತ ಕಲಾವಿದರಿಗೆ ಪಕ್ಕವಾದ್ಯದಲ್ಲಿ ಸಹಕರಿಸಿದ ಖ್ಯಾತಿ ಇವರದು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications