ಸಮ್ಮೇಳನದ ಭಾರ ಹೊತ್ತ ಐದರ ಪೋರ

ಈ ಬಾರಿ ಟ್ರೈ ಸ್ಟೇಟ್ಸ್ ತ್ರಿವೇಣಿ ಕನ್ನಡ ಸಂಘದಲ್ಲಿ ನಾಟಕ ಇದೆ, ಅದರ ಮುಂದಿನ ವಾರ ಹೊಯ್ಸಳ ಸಂಘದಲ್ಲಿ ಭಾರತದ ಬಂದಿರುವ ಗಾಯಕಿಯ ಭರ್ಜರಿ ಹಾಡುಗಾರಿಕೆ ಇದೆಯಂತೆ, ಅಲ್ಲಿಗೆ ಹೋಗಬೇಕು. ಡಿಸೆಂಬರ್ ನಲ್ಲಿ ನ್ಯೂಯಾರ್ಕಿನಲ್ಲಿ ಕನ್ನಡ ಮಕ್ಕಳ ನಾಟಕಕ್ಕೆ ಹೋಗಲೇಬೇಕು.. ಹೀಗೆ, ಕನ್ನಡತನವನ್ನು ಹುಡುಕಿಕೊಂಡು ನಿತ್ಯ ಸುತ್ತಾಡುತ್ತಿರಬೇಕು. ಇದು ಹತ್ತಾರು ವರಷಗಳಿಂದ ನಡೆದುಬಂದ ಪರಿಪಾಠ. ಆದರೆ, ಎಷ್ಟು ದಿನ ಅಂತ ಅಲ್ಲಿ ಇಲ್ಲಿ ಹೋಗಿಬಂದು ಮಾಡುವುದಕ್ಕೆ ಸಾಧ್ಯ. ನಾವೇ ಒಂದು ಕನ್ನಡ ಸಂಘ ಕಟ್ಟಿದರೆ ಆಯ್ತು, ಅದೇನು ಮಹಾ, ಎಂದುಕೊಂಡರು ಅವರು.
ಒಂದು ದಿನ ಮನೆಗೆ ಹುಡುಗ ಹಾಲು ತರದಿದ್ದರೆ, ಅದಕ್ಕೇನಂತೆ ನಾವೇ ಒಂದು ಡೈರಿ ಶುರುಮಾಡೋಣ ಎನ್ನುವಂತಹವರು ಅಲ್ಲಿದ್ದರು. ಅವರಿಗೆಲ್ಲ ಪ್ರಸನ್ನಕುಮಾರ್ ಎಂಬ ಮಧ್ಯವಯಸ್ಕನೇ ನಾಯಕ. ಸರಿ, ಆಗಷ್ಟೇ ಫ್ಲಾರಿಡಾ ಅಕ್ಕ ಸಮ್ಮೇಳನ (2004) ಮುಗಿದು ಎಲ್ಲರೂ ನ್ಯೂ ಜೆರ್ಸಿಗೆ ವಾಪಸ್ಸಾಗಿದ್ದರು. ಕನ್ನಡದ ಪರಿಮಳ ಇನ್ನೂ ಹಸಿಹಸಿಯಾಗಿ ನವುರಾಗಿತ್ತು. ಒಂದು ಸಂಜೆ ಎಲ್ಲರೂ ಕುಳಿತು ಸಭೆ ಮಾಡಿ ಕನ್ನಡ ಸಂಘ ಕಟ್ಟಿಬಿಡುವ ನಿರ್ಧಾರಕ್ಕೆ ಬಂದರು. ಅಲ್ಲಿ ಒಂದು ಬೃಂದಾವನವೇ ನಿರ್ಮಾಣವಾಯಿತು. ನ್ಯೂ ಜೆರ್ಸಿ ಕನ್ನಡಿಗರ ನಂದಗೋಕುಲದಂತಿರುವ ಬೃಂದಾವನಕ್ಕೆ ಮೊನ್ನೆ ಡಿಸೆಂಬರ್ 5ಕ್ಕೆ ಐದು ವರ್ಷ ತುಂಬಿ ಆರಕ್ಕೆ ಬಿತ್ತು.
ಕರ್ನಾಟಕದ ಶಾಲೆಗಳ ಲೆಕ್ಕದಲ್ಲಿ ಬೃಂದಾವನ ನರ್ಸರಿಗೆ ಹೋಗುವ ಬಾಲಕ. ಐದು ವರ್ಷ ಎಂಟು ತಿಂಗಳು ತುಂಬದೆ ಒಂದನೆ ತರಗತಿಗೆ ಸೇರುವಂತಿಲ್ಲ. ಆದರೆ ಇದೊಂದು ಸ್ಪೆಷಲ್ ಕೇಸ್ ಎಂದು ಪರಿಗಣಿಸಿ ಬಾಲಕನನ್ನು ಪದವಿ ಪರೀಕ್ಷೆಗೆ ಒಡ್ಡಲಾಗಿದೆ. ಅಮೆರಿಕಾದ ಅತ್ಯಂತ ಕಿರಿಯ ಕನ್ನಡ ಸಂಘ ಬೃಂದಾವನ ಬೃಹತ್ ನ್ಯೂ ಜೆರ್ಸಿ ಅಕ್ಕ ಸಮ್ಮೇಳನದ ಭಾರ ಹೊತ್ತು ನಿಲ್ಲುತ್ತಿದೆ. ಈ ಸಮ್ಮೇಳನಕ್ಕೆ ಐದರ ಪೋರನಾಗಿದ್ದಾಗಲೇ ಪವರ್ಫುಲ್ ನಟನೆಯಿಂದ ಸ್ಟಾರ್ ಆಗಿದ್ದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಬ್ರಾಂಡ್ ಅಂಬಾಸಡರ್ ಆಗಿದ್ದಾರೆ. ಬೃಂದಾವನ ಸಂಘ ಮಾಜಿ ಅಧ್ಯಕ್ಷ ಮತ್ತು ಅಕ್ಕ ಸಮ್ಮೇಳನದ ಸಂಯೋಜಕ ತ್ರಿವಳಿಗಳಲ್ಲಿ ಒಬ್ಬರಾಗಿರುವ ಪ್ರಸನ್ನ ಕುಮಾರ್ ಅವರನ್ನು ನಾನು ಮೊನ್ನೆ ಬೆಂಗಳೂರಿನಲ್ಲಿ ಭೇಟಿ ಆಗಿದ್ದೆ. ಅವರೊಂದಿಗೆ ನಡೆಸಿದ ಮಾತುಕತೆಯ ಸಾರಾಂಶಕ್ಕಾಗಿ, ನೋಡುತ್ತಿರಿ ದಟ್ಸ್ ಕನ್ನಡ ಎನ್ಆರ್ಐ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications