ನಾವಿಕ ಸಮ್ಮೇಳನದಲ್ಲಿ ಬಿವಿ ಜಗದೀಶ್ ಆಶಯ ಭಾಷಣ

'ಜಾಗತೀಕರಣ, ಅವಕಾಶಗಳು ಮತ್ತು ಸವಾಲುಗಳು' ಎಂಬ ವಿಷಯದ ಕುರಿತು 3 ಲೀಫ್ ಸಿಸ್ಟಂಸ್ ಸಿಇಓ ಮತ್ತು ಅಧ್ಯಕ್ಷರಾಗಿರುವ ಬಿವಿ ಜಗದೀಶ್ ಅವರು ಉಪನ್ಯಾಸ ನೀಡಲಿದ್ದಾರೆ. ಕನ್ನಡ, ಕರ್ನಾಟಕದ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಜಗದೀಶ್ ಅವರು ಪ್ರಥಮ ಬಾರಿಗೆ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಷಣ ಮಾಡಲಿದ್ದಾರೆ.
ಕನ್ನಡ ಸಮ್ಮೇಳನಗಳಲ್ಲಿ ಸಾಮಾನ್ಯವಾಗಿ ಕವಿಗಳು, ಲೇಖಕರು, ಸಾಹಿತಿಗಳು, ಚಿಂತಕರು, ರಾಜಕಾರಣಿಗಳೇ ಮುಂತಾದವರು ಆಶಯ ಭಾಷಣ ಮಾಡುವುದು ವಾಡಿಕೆ. ಆದರೆ, ತಂತ್ರಜ್ಞ ಮತ್ತು ವಾಣಿಜ್ಯೋದ್ಯಮಿಯೊಬ್ಬರಿಗೆ ಈ ಅವಕಾಶ ಕಲ್ಪಿಸಿರುವುದು ನಾವಿಕ ಸಮ್ಮೇಳನ ಸಮಿತಿಯ ಹೆಚ್ಚುಗಾರಿಕೆ ಆಗಿದೆ.
ಜಗದೀಶ್ ಕುರಿತು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ ಜಗದೀಶ್, ಸ್ನಾತಕೋತ್ತರ ಪದವಿಯನ್ನು ಮುಂಬೈ ವಿಶ್ವವಿದ್ಯಾಲಯದಲ್ಲಿ ಪಡೆದಿದ್ದಾರೆ.
3 ಲೀಫ್ ಸಿಸ್ಟಂಸ್ ಸೇರುವ ಮೊದಲು ಜಗದೀಶ್ ಅವರು, ಸಿಟ್ರಿಕ್ ಸಿಸ್ಟಂಸ್ ನ ಉಪಾಧ್ಯಕ್ಷ ಮತ್ತು ಜನರಲ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದರು. ಸಿಟ್ರಿಕ್ ಸಿಸ್ಟಂಸ್ ನೆಟ್ ಸ್ಕೇಲರ್ ವಶಪಡಿಸಿಕೊಳ್ಳುವ ಮೊದಲು ನೆಟ್ ಸ್ಕೇಲರ್ ನ ಸಿಇಓ ಮತ್ತು ಅಧ್ಯಕ್ಷರಾಗಿದ್ದರು. 2005ರಲ್ಲಿ ಸಿಟ್ರಿಕ್ ಸಿಸ್ಟಂಸ್ ಪಾಲಾಗುವ ಮೊದಲು ನೆಟ್ ಸ್ಕೇಲರ್ ಕಂಪನಿಯನ್ನು ಅಪ್ಲಿಕೇಷನ್ ಡೆಲಿವರಿ ಸಿಸ್ಟಂಸ್ ಕ್ಷೇತ್ರದಲ್ಲಿ ಮಾರುಕಟ್ಟೆಯ ದೊಡ್ಡಣ್ಣನಾಗಿ ಮಾಡಿದ ಹೆಗ್ಗಳಿಕೆ ಬಿವಿ ಜಗದೀಶ್ ಅವರದು. ಇದಕ್ಕೂ ಮೊದಲು ಎಕ್ಸೋಡಸ್ ಕಮ್ಯುನಿಕ್ಷನ್ಸ್ ಕಂಪನಿಯ ಸಹಸ್ಥಾಪಿಸಿದ್ದರು. ಜಗದೀಶ್ ಅವರು ನಾವೆಲ್ ಮತ್ತು ತ್ರಿಕಾಂ ಕಂಪನಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications