ಅಮೆರಿಕನ್ನಡಂ ಗೆಲ್ಗೆ.. ಅಮೆರಿಕನ್ನಡಂ ಬಾಳ್ಗೆ..!

ಬದುಕು ಕಟ್ಟಿಕೊಟ್ಟ ನಾಡಿನಲ್ಲಿ ಜನ್ಮಭೂಮಿಯ ಮೇಲಿನ ಪ್ರೀತಿಯ ಸೆಲೆ ಉಕ್ಕಿದಾಗ ಕನ್ನಡಿಗರ ಹೃನ್ಮನಗಳು ಆನಂದ ಸಾಗರದಲ್ಲಿ ಮಿಂದೆದ್ದವು. ಅವರ ಭಾವ ಸಂಗಮಕ್ಕೆ ಹುಟ್ಟು ಹಾಕುವ ಮೂಲಕ ನಾವಿಕ' ಸಾರ್ಥಕತೆ ಪಡೆಯಿತು.
ನಾವಿಕ ಬಳಗದ ಅವಿರತ ಶ್ರಮದ ಫಲವಾಗಿ ಆಯೋಜನೆಗೊಂಡಿರುವ ಮೂರು ದಿನಗಳ ಈ ಸಮ್ಮೇಳನಕ್ಕೆ ಶುಕ್ರವಾರ ಮಧ್ಯಾಹ್ನ ಚಾಲನೆ ಕೊಟ್ಟದ್ದು ವಾಣಿಜ್ಯ ಗೋಷ್ಠಿ. ಅಮೆರಿಕದ ಕನ್ನಡಿಗರು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳು ಹಾಗೂ ನಾನಾ ಕ್ಷೇತ್ರಗಳ ಬಗ್ಗೆ ಈ ಗೋಷ್ಠಿಯಲ್ಲಿ ಬೆಳಕು ಚೆಲ್ಲಲಾಯಿತು. ಕರ್ನಾಟಕ ಸರಕಾರದ ಪರವಾಗಿ ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್ ಮಾಹಿತಿ ನೀಡಿದರು. ಕರ್ನಾಟಕ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್ ಪ್ರಮುಖ ಭಾಷಣದಲ್ಲಿ ಬಂಡವಾಳ ಹೂಡಿಕೆ ಬಗ್ಗೆ ಮಹತ್ವದ ಅಂಶಗಳನ್ನು ಒದಗಿಸಿದರು.
ಅಮೆರಿಕ ಕನ್ನಡಿಗರು ಬಂಡವಾಳ ಹೂಡಿಕೆ ಅವಕಾಶಗಳನ್ನು ಹೇಗೆ ಬಳಸಿಕೊಳ್ಳಬಹುದು, ಆ ಮೂಲಕ ಕರ್ನಾಟಕದ ಪ್ರಗತಿಯಲ್ಲಿ ಹೇಗೆ ತೊಡಗಿಸಿಕೊಳ್ಳಬಹುದು ಎಂಬುದನ್ನು ವಿವರಿಸಿದರು. ಸರಕಾರದಲ್ಲಿ ಸಲ್ಲಿಸಿದ್ದ ಸೇವೆಯ ಅನುಭವದ ಆಧಾರದ ಮೇಲೆ ಅವರು ಮಂಡಿಸಿದ ವಿಷಯ ಮಹತ್ವ ಪಡೆದುಕೊಂಡಿತು.
ಇದೇ ಮೊದಲ ಬಾರಿಗೆ ಕನ್ನಡ ಸಮ್ಮೇಳನದಲ್ಲಿ ವಸ್ತು ಪ್ರದರ್ಶನ ಏರ್ಪಡಿ ಸಲಾಗಿದೆ. ಕನ್ನಡಿಗರು ಹಾಗೂ ಅಮೆರಿಕ ಕನ್ನಡಿಗರ ಉತ್ಪನ್ನಗಳ ಪ್ರದರ್ಶನದಲ್ಲಿ ಜವಳಿ, ಸಾಂಬಾರು ಪದಾರ್ಥ, ಆಭರಣಗಳಿಂದ ಹಿಡಿದು ಜ್ಞಾನ ಮಾಹಿತಿ ವಿನಿಮಯ ದವರೆಗೂ ಅವಕಾಶ ಕಲ್ಪಿಸಲಾಗಿದೆ.
ಈ ಮಧ್ಯೆ ಅಮೆರಿಕ ಮತ್ತು ಭಾರತ ಕನ್ನಡ ಸಾಹಿತಿಗಳ ನಡುವೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾವ್ಯಧಾರೆ' ಸಾಹಿತ್ಯ ಸಂವಾದ ಹಾಗೂ ಕವನ ವಾಚನವೂ ನಡೆಯಿತು. ಇಂತಹದೊಂದು ವಿಶಿಷ್ಟ ಕಾರ್ಯಕ್ರಮಕ್ಕೆ ಪ್ರಥಮ' ಬರೆದ ಹೆಗ್ಗಳಿಕೆ ನಾವಿಕದ್ದು. ಬೆಂಗಳೂರಿನ ನಯನ' ಸಭಾಂಗಣದಿಂದ ಖ್ಯಾತ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ, ಡಾ. ಎಚ್.ಎಸ್. ವೆಂಕಟೇಶಮೂರ್ತಿ, ಪ್ರೊ. ಎಸ್.ಜಿ. ಸಿದ್ದರಾಮಯ್ಯ ನೇರ ಪ್ರಸಾರದಲ್ಲಿ ಕವನ ವಾಚಿಸಿದರು. ಇತ್ತಲಿಂದ ಅಲಮೇಲು ಅಯ್ಯಂಗಾರ್, ಜ್ಯೋತಿ ಮಹದೇವ, ಸುಕುಮಾರ್ ರಘುರಾಮ್ ಹಾಗೂ ಸವಿತಾ ರವಿಶಂಕರ್ ಬರವಣಿಗೆಗೆ ಆಧಾರ ಆಗಬೇಕಾದ ಅಂಶಗಳ ಬಗ್ಗೆ ಪ್ರಶ್ನೋತ್ತರ ನಡೆಸಿದರು. ಅಮೆರಿಕದಲ್ಲಿ ಮಕ್ಕಳಿಗೆ ಕನ್ನಡ ಕಲಿಸಲು ಮಾಡಿರುವ ವ್ಯವಸ್ಥೆಗಳ ಬಗ್ಗೆ ತಿಳಿಸಿ, ಮೆಚ್ಚುಗೆಗೆ ಪಾತ್ರರಾದರು.
ಸಂಜೆ ನಡೆದ ಸಾಂಸ್ಕೃತಿಕ ಕಾರ್ಯ ಕ್ರಮದಲ್ಲಿ ಖ್ಯಾತ ಗಾಯಕರಾದ ಬದರಿ ಪ್ರಸಾದ್, ಕಿಕ್ಕೇರಿ ಕೃಷ್ಣಮೂರ್ತಿ, ಅಜಯ್ ವಾರಿಯರ್ ಹಾಗೂ ದಿವ್ಯಾ ರಘುರಾಮ್ ಅವರ ಹಾಡುಗಳಿಗೆ ಸಭಿಕರು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು. ಅದೇ ರೀತಿ ಪ್ರೊ. ಕೃಷ್ಣೇಗೌಡ ಹಾಗೂ ಡಾ. ಕೆ.ಪಿ. ಪುತ್ತೂರಾಯ ಅವರ ಹಾಸ್ಯ ಲಹರಿಗೆ ನಗೆಬುಗ್ಗೆ ಹರಿಸಿದರು. ಕರ್ನಾಟಕದಿಂದ ಬಂದಿರುವ ಕಲಾವಿದರ ಪ್ರತಿಭೆ ಪ್ರದರ್ಶನಕ್ಕೆ ಮನಸೋತು, ಮೈ ಮರೆತಿದ್ದ ಸಭಿಕರ ಉತ್ಸಾಹಕ್ಕೆ ಬ್ರೇಕ್ ಹಾಕಿದ್ದು ಸಮಯದ ಮಿತಿ. ಇಂದಿನ ಅನುಭವ ಹಾಗೂ ನಾಳಿನ ನಿರೀಕ್ಷೆಯೊಡನೆ ಅವರು ಮನೆಗಳತ್ತ ಹೊರಟಾಗ ಮಧ್ಯರಾತ್ರಿ ದಾಟಿತ್ತು. (ಸ್ನೇಹಸೇತು : ವಿಜಯ ಕರ್ನಾಟಕ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications