‘ಮೂವತ್ತು ಮಳೆಗಾಲ’ದ ಕವಿ ಎಚ್.ಎಸ್.ವಿ

ಆದರೆ, ಅವರ ಹೃದಯದಲ್ಲಿದ್ದ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ಮತ್ತು ಬರಹಗಾರನಾಗುವ ಉತ್ಕಟಾಕಾಂಕ್ಷೆ ಅವರನ್ನು ಸುಮ್ಮನಿರಗೊಡಲಿಲ್ಲ. ಧಾರವಾಡ ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಬಿ.ಎ. ಪದವಿ ಪಡೆದು, ನಂತರ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿ ಬೆಂಗಳೂರು ವಿಶ್ವವಿದ್ಯಾಲಯದ ಎಂ.ಎ. ಪದವಿಯನ್ನು ಪಡೆದರು. 1973ರಲ್ಲಿ ಪ್ರೊ|| ಜಿ.ಎಸ್.ಶಿವರುದ್ರಪ್ಪನವರ ನೇತೃತ್ವದಲ್ಲಿ ಕಥನ ಕವನಗಳು ಎಂಬ ವಿಷಯ ಕುರಿತು ಥೀಸಿಸ್ ಬರೆದು ಬೆಂಗಳೂರು ವಿಶ್ವವಿದ್ಯಾಲಯದ ಪಿ.ಎಚ್.ಡಿ. ಪದವಿಯನ್ನೂ ಗಳಿಸಿದರು. ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ 27 ವರ್ಷ ಸೇವೆ ಸಲ್ಲಿಸಿ, 2000ರಲ್ಲಿ ನಿವೃತ್ತರಾಗಿರುವ ಎಚ್ಚೆಸ್ವಿಯವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಕೃತಿಗಳು : ವೆಂಕಟೇಶಮೂರ್ತಿಯವರು ಕವನಗಳು, ನಾಟಕಗಳು, ಸಣ್ಣ ಕಥೆಗಳು, ಕಾದಂಬರಿಗಳ ಜೊತೆಗೆ ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೂ ತಮ್ಮ ಕೊಡುಗೆ ಸಲ್ಲಿಸಿದ್ದಾರೆ. ಅವರ ಕೆಲವು ಕೃತಿಗಳೆಂದರೆ : 'ಪರಿವೃತ್ತ"(ಕವಿತೆ), 'ಬಾಗಿಲು ಬಡಿವ ಜನ"(ಕವಿತೆ), 'ಸಿಂದಾಬಾದನ ಆತ್ಮಕಥೆ"(ಕವಿತೆ), 'ಕ್ರಿಯಾಪರ್ವ"(ಕವಿತೆ), ಉತ್ತರಾಯಣ (ಕವಿತೆ), 'ಅಮೆರಿಕದಲ್ಲಿ ಬಿಲ್ಲುಹಬ್ಬ"(ಕವಿತೆ)", 'ತಾಪಿ"(ಕಾದಂಬರಿ), 'ಬಾನಸವಾಡಿಯ ಬೆಂಕಿ"(ಕಥಾ ಸಂಕಲನ), ಹೆಜ್ಜೆಗಳು (ನಾಟಕ), 'ಹಕ್ಕಿಸಾಲು (ಮಕ್ಕಳ ಕವಿತೆ), 'ಅಮಾನುಷರು"(ಮಕ್ಕಳ ಕಾದಂಬರಿ), 'ಸಿಂಗಾರಿ" (ಪ್ರವಾಸ ಕಥನ).... ಇತ್ಯಾದಿಯಾಗಿ ಭಾಷಾಂತರ, ವಿಮರ್ಶೆಗಳನ್ನೊಳಗೊಂಡಂತೆ ಐವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 'ಚಿನ್ನಾರಿ ಮುತ್ತ", 'ಕ್ರೌರ್ಯ", 'ಮತದಾನ" ಚಿತ್ರಗಳಿಗೆ ಸಾಹಿತ್ಯ ಒದಗಿಸಿರುವುದಲ್ಲದೆ ಕಿರುತೆರೆ ಧಾರಾವಾಹಿಗಳಿಗೂ ಗೀತೆಗಳನ್ನು ರಚಿಸಿದ್ದಾರೆ. ಇವರ ಹಲವಾರು ಭಾವಗೀತೆಗಳು ಧ್ವನಿಸುರುಳಿಗಳಾಗಿ ಕನ್ನಡಿಗರ ಮನ ಸೂರೆಗೊಂಡಿವೆ.
ಪ್ರಶಸ್ತಿಗಳು : ಕನ್ನಡ ಸಾಹಿತ್ಯ ಅಕಾಡೆಮಿ ಬಹುಮಾನ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ದೇವರಾಜ್ ಬಹಾದ್ದೂರ್ ಪ್ರಶಸ್ತಿ, ಡಿವಿಜಿ ಪ್ರಶಸ್ತಿ, ಮೈಸೂರು ಅನಂತಸ್ವಾಮಿ ಪ್ರಶಸ್ತಿ ಮುಂತಾದ ನಾಡಿನ ಹಲವಾರು ಗೌರವಗಳು ಎಚ್ಚೆಸ್ವಿಯವರನ್ನು ಅರಸಿ ಬಂದಿವೆ. ಎಚ್ಎಸ್ವಿ ಅವರು 2010ರ ಸೆಪ್ಟೆಂಬರ್ ನಲ್ಲಿ ನ್ಯೂ ಜೆರ್ಸಿಯಲ್ಲಿ ಜರಗಲಿರುವ 6ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದ ಸಾಹಿತ್ಯ ವೇದಿಕೆಯಲ್ಲಿ ಮುಖ್ಯ ಅತಿಥಿಗಳಲ್ಲೊಬ್ಬರಾಗಿ ಭಾಗವಹಿಸುತ್ತಿದ್ದಾರೆ.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications