ಅಕ್ಕ : ಕಾರ್ಯಕ್ರಮ ನಿರೂಪಕಿ ಶ್ರುತಿ ಜಿ ರಾವ್

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಟ್ಟಿ ಬೆಳೆದ ಶ್ರುತಿ, ತಮ್ಮ ಐದನೇ ವಯಸ್ಸಿನಿಂದಲೇ ಹೆಸರಿಗೆ ಅನ್ವರ್ಥ ಎಂಬಂತೆ ಕರ್ನಾಟಕ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಮ್ಯಾಂಡೊಲಿನ್ ವಾದನದಲ್ಲಿ ಪಳಗಿರುವ ಕಲಾವಿದೆ. ಸದ್ಯ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡದ ಬಹುಮುಖ ಪ್ರತಿಭೆ.
ಇಂಜಿನಿಯರಿಂಗ್ ಪದವೀಧರೆ. ಸಂಗೀತ, ಸಾಹಿತ್ಯ, ಅಭಿನಯ, ನೃತ್ಯ ಹೀಗೆ ಕಲೆಯ ವಿವಿಧ ಪ್ರಕಾರಗಳಲ್ಲಿ ಅಭಿರುಚಿ. ನಾದ ಮಾಧುರ್ಯ ಮೂಡಿಸುವ ಆಶಯವಿರುವ ಶ್ರುತಿ, ಕಮಲ ರಾಜಲಕ್ಷ್ಮಿ, ಎಚ್ಆರ್ ಲೀಲಾವತಿ ಮತ್ತು ದತ್ತಾತ್ರೇಯ ಇವರುಗಳ ನುರಿತ ಮಾರ್ಗದರ್ಶನದಿಂದ ಉದಯ, ಈಟಿವಿ, ಜೀ ಕನ್ನಡ, ದೂರದರ್ಶನ ಚಂದನ ವಾಹಿನಿಗಳಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಮತ್ತು ಮ್ಯಾಂಡೊಲಿನ್ ಕಚೇರಿಗಳನ್ನು ನೀಡಿರುವುದು ಇವರ ಪ್ರತಿಭೆಗೆ ಸಾಕ್ಷಿಯಾಗಿದೆ.
ಅಖಿಲ ಭಾರತ ಸಂಗೀತ ಸ್ಪರ್ಧೆಗಳಲ್ಲಿ ಕರ್ನಾಟಕವನ್ನು 5 ಬಾರಿ ಪ್ರತಿನಿಧಿಸಿ, 2000ನೇ ಇಸವಿಯಲ್ಲಿ ನವ ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಕ್ಕಳ ಮಹಾ ಸಮ್ಮೇಳನದಲ್ಲಿ ಕಾರ್ಯಕ್ರಮವನ್ನು ನೀಡಿ "ಕನ್ನಡ ಕೋಗಿಲೆ" Yuva Pratibha Puraskar Award ಪಡೆದಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ "ಮೌನಿ" ಎಂಬ ಸಾಕ್ಷ್ಯ ಚಿತ್ರಕ್ಕೆ ಹಿನ್ನಲೆ ಗಾಯಕಿಯಾಗಿ ಹಾಡಿರುವುದು ಮತ್ತು "ಉದಯಚಂದ್ರನ ಶ್ರೀ ಕಲ್ಕಿ" ಎಂಬ ಇವರ ಧ್ವನಿಸುರುಳಿ ಹೊರಬಂದಿರುವುದು ಇವರ ಪ್ರತಿಭೆಗೆ ಸಂದ ಮತ್ತೊಂದು ಗೌರವ.
ಪ್ರಸಕ್ತ ಅಮೆರಿಕಾದ ಚಾರ್ಲೋಟೆ ನಗರದಲ್ಲಿ ನೆಲೆಸಿರುವ ಶ್ರುತಿಯವರು, ಕೆರೋಲಿನಾ ಕನ್ನಡ ಬಳಗದಲ್ಲಿ ಸಕ್ರಿಯ ಪಾತ್ರ ವಹಿಸುತ್ತಿದ್ದಾರೆ. ಕರ್ನಾಟಕದಲ್ಲಿ ಹಲವಾರು ಕಾರ್ಯಕ್ರಮಗಳಿಗೆ ನಿರೂಪಣೆ ಮಾಡಿರುವ ಶ್ರುತಿ, ಈಗ ಪ್ರಸ್ತುತ ಅಕ್ಕ 2010ರ ಸಮ್ಮೇಳನದಲ್ಲಿ ಕಾರ್ಯಕ್ರಮ ನಿರೂಪಣೆ ಮಾಡುವವರ ತಂಡದಲ್ಲಿ ಒಬ್ಬರಾಗಿರುತ್ತಾರೆ.
ಅಕ್ಕ: ಕಾರ್ಯಕ್ರಮ ನಿರೂಪಕಿ ವೀಣಾ ಮೋಹನ್ »
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications