ಸಿಂಗಪುರ ಉತ್ಸವದಲ್ಲಿ ಕರ್ನಾಟಕ ಜನಪದ ನೃತ್ಯ ವೈಭವ

ಸಿಂಗಪುರದಲ್ಲಿ ದೀಪಾವಳಿ ಹಬ್ಬದ ಆಚರಣೆಯ ವೈಭೋಗವೇ ಬೇರೆಯ ರೀತಿಯದು. ದೀಪಾವಳಿ ಆಚರಣೆಯ ಭಾಗವಾಗಿ ನಡೆಯುವ 'ಉತ್ಸವ 2010'ದಲ್ಲಿ ಇಡೀ ಸಿಂಗಪುರವೇ ಸಿಂಗರಿಸಿಕೊಂಡು ನಿಲ್ಲುತ್ತದೆ. ಅಕ್ಟೋಬರ್ 30ರಂದು ಸಿಂಗಪುರದ ಹಿಂದೂಗಳೆಲ್ಲ ಸಡಗರದಿಂದ ಬೀದಿಬೀದಿಗಳಲ್ಲಿ ಸೇರಿ ಉತ್ಸವ 2010ರನ್ನು ಅತ್ಯಂತ ಉತ್ಸಾಹದಿಂದ ಆಚರಿಸುತ್ತಾರೆ.
ಹೆರಿಟೇಜ್ ಅಸೋಸಿಯೇಶನ್ ಮತ್ತು ಭಾರತೀಯ ಅಂಗಡಿ ಮಾಲಿಕರ ಸಹಯೋಗದೊಂದಿದೆ ಹಿಂದೂ ಎಂಡೋಮೆಂಟ್ ಬೋರ್ಡ್ ದೀಪಾವಳಿ ಉತ್ಸವವನ್ನು ಆಯೋಜಿಸಿದೆ. ರಂಗ್ಬಿರಂಗಿ ದೀಪಗಳಿಂದ ಝಗಮಗಿಸುವ ಬೀದಿಬೀದಿಗಳಲ್ಲಿ ಅಂದು ಸಂಜೆ ನಡೆಯಲಿರುವ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಸುಮಾರು 20ಕ್ಕೂ ಹೆಚ್ಚು ತಂಡಗಳು ಭಾಗವಹಿಸುತ್ತಿದ್ದು, ಕರ್ನಾಟಕ ವೈಭವ ಕೂಡ ಕರ್ನಾಟಕ ಜನಪದದ ಶ್ರೀಮಂತಿಕೆಯನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಿದೆ. ಈ ಮೆರವಣಿಗೆಯಲ್ಲಿ ತಮಿಳುನಾಡು ಸರಕಾರ ಮತ್ತು ಶ್ರೀಲಂಕಾ ಪ್ರಾಯೋಜಿಸಿರುವ ತಂಡಗಳು ಕೂಡ ಭಾಗವಹಿಸುತ್ತಿವೆ.
ಕರ್ನಾಟಕ ವೈಭವದ ಜನಪದ ನೃತ್ಯ : ಡಾ. ಸಂಜಯ್ ಶಾಂತಾರಾಮ್ ಅವರು ಸಂಯೋಜಿಸಿರುವ ಕರ್ನಾಟಕ ಜನಪದ ನೃತ್ಯವನ್ನು ಕರ್ನಾಟಕ ವೈಭವ ಈ ಬಾರಿ ಪ್ರಸ್ತುತಪಡಿಸಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕನ್ನಡಿಗರು ಮತ್ತು ಕನ್ನಡೇತರರಿಗೆ ಡಾ. ಸಂಜಯ್ ಈಗಾಗಲೆ ತರಬೇತಿಯನ್ನು ನೀಡಲು ಪ್ರಾರಂಭಿಸಿದ್ದಾರೆ. ಇದರಲ್ಲಿ ಡೊಳ್ಳು ಕುಣಿತ, ಕಂಸಾಳೆ, ವೀರಗಾಸೆ, ಸುಗ್ಗಿ ಗೀತ, ಕೋಲಾಟ ಮತ್ತು ಯಕ್ಷಗಾನಗಳು ಸಿಂಗಪುರಿಗರನ್ನು ರಂಜಿಸಲಿವೆ.
ಈ ನೃತ್ಯ ಸಂಯೋಜನೆಗೆ ಕರ್ನಾಟಕ ಜನಪದ ನೃತ್ಯ ವೈಭವ ಎಂದು ನಾಮಕರಣ ಮಾಡಲಾಗಿದ್ದು, ಅಕ್ಟೋಬರ್ 30ರ ಶನಿವಾರ, ಸಂಜೆ 7ರಿಂದ 10ರವರೆಗೆ ನಡೆಯಲಿರುವ ಸಿಂಗಪುರ ದೀಪಾವಳಿ ಉತ್ಸವವನ್ನು 15 ಸಾವಿರಕ್ಕೂ ಹೆಚ್ಚಿನ ಸ್ಥಳೀಯ ಮತ್ತು ವಿದೇಶಿಗರು ವೀಕ್ಷಿಸಲಿದ್ದಾರೆ. ಈ ಮೆರವಣಿಗೆ ರೇಸ್ ಕೋರ್ಸ್ ರಸ್ತೆಯಲ್ಲಿ ನಡೆಯಲಿದೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications