ಸಿಂಗಪುರ ಕನ್ನಡ ಸಾಹಿತ್ಯ ರಸದೌತಣಕ್ಕೆ ದಿನಗಣನೆ

ಸಿಂಗಪುರಿನಲ್ಲಿ ನೆಲಸಿರುವ ಕನ್ನಡಿಗರಿಗೆ ತಾಯ್ನಾಡಿನ ಕಲಾವಿದರನ್ನು ನೋಡುವ, ಅವರು ನಡೆಸಿಕೊಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಉತ್ಸಾಹ ದಿನೇ ದಿನೇ ಹೆಚ್ಚುತ್ತಿದೆ. ಈ ಕಾರ್ಯಕ್ರಮವನ್ನು ಎಂದಿನಂತೆ ಅಚ್ಚುಕಟ್ಟಾಗಿ ನಡೆಸಲು ಸಿಂಗಪುರ ಕನ್ನಡ ಸಂಘದ ಪದಾಧಿಕಾರಿಗಳು, ಸದಸ್ಯರು ಮತ್ತು ಉತ್ಸಾಹಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಕರ್ನಾಟಕದಿಂದ ಬರುತ್ತಿರುವ ನೂರಾರು ಕಲಾವಿದರನ್ನು ಒಂದುಗೂಡಿಸಿ, ಎರಡು ದಿನಗಳು ಸಾಂಸ್ಕೃತಿಕ ಮತ್ತು ಮನರಂಜಿಸುವ ಕಾರ್ಯಕ್ರಮಗಳನ್ನು ಲೋಪ ದೋಷವಿಲ್ಲದೆ ನಡೆಸುವುದು ಸುಲಭದ ಮಾತಲ್ಲವಲ್ಲ. ಎಲ್ಲ ರೀತಿಯ ಸಿದ್ಧತೆಗಳು ಭರದಿಂದ ಸಾಗುತ್ತಿವೆ.
ಈ ಮೆಗಾ ಕಾರ್ಯಕ್ರಮಕ್ಕೆ ಸಾವಿರಕ್ಕೂ ಹೆಚ್ಚು ಪ್ರೇಕ್ಷಕರನ್ನು ನಿರೀಕ್ಷಿಸಲಾಗಿದೆ. ಟಿಕೆಟ್ ಮಾರಾಟ ಬಿಸಿ ರೊಟ್ಟಿಯಂತೆ ಮಾರಾಟವಾಗುತ್ತಿದೆ. ಕಾರ್ಯಕ್ರಮವನ್ನು ನೋಡಲು ಸಿಂಗಪುರ ಅಲ್ಲದೆ ನೆರೆಯ ದೇಶವಾದ ಮಲೇಶಿಯದಿಂದಲೂ ಕನ್ನಡಿಗರು ಬರುತ್ತಿದ್ದಾರೆ. ಒಟ್ಟಿನಲ್ಲಿ ಸಿಂಗನ್ನಡಿಗರಿಗೆ ಭಾರಿ ರಸದೌತಣ ಕಾದಿದೆ!
ಎರಡು ದಿನ ಭರ್ಜರಿಯಾಗಿ ನಡೆಯುವ ಸಮ್ಮೇಳನದಲ್ಲಿ ಹೆಸರಾಂತ ಕಲಾವಿದರಿಂದ ಸುಶ್ರಾವ್ಯ ಸಂಗೀತ, ಹಾಸ್ಯ ಕಲಾವಿದರಿಂದ ಹಾಸ್ಯ ಮಂಜರಿ, ಯಕ್ಷಗಾನ, ಹಾಸ್ಯ ನಾಟಕಗಳು, ವೀರಗಾಸೆ, ಡೊಳ್ಳು ಕುಣಿತ, ಶಾಸ್ತ್ರೀಯ ನೃತ್ಯ, ಸ್ಯಾಂಡಲ್ವುಡ್ನಿಂದ ವಿಶೇಷವಾಗಿ ಆಗಮಿಸುವ ಪ್ರಖ್ಯಾತ ನಟ ನಟಿಯರಿಂದ ರಂಗುರಂಗಿನ ಕಾರ್ಯಕ್ರಮಗಳಿವೆ. "ನ ಭೂತೋ ನ ಭವಿಷ್ಯತಿ" ಆಗುವ ಎಲ್ಲಾ ಲಕ್ಷಣವಿರುವ ಈ ಕಾರ್ಯಕ್ರಮಕ್ಕೆ ಬರುವ ಕಲಾವಿದರ ಪಟ್ಟಿ ದಿನವೂ ಬೆಳೆಯುತ್ತಲಿದೆ. ಎಲ್ಲರೂ ಅವರವರ ಕ್ಷೇತ್ರದಲ್ಲಿ ದಿಗ್ಗಜರೆ! ಸಿಂಗಪುರಕ್ಕೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬರುತ್ತಿರುವ ಗಣ್ಯರ ಪಟ್ಟಿ ದಟ್ಸ್ ಕನ್ನಡ ತಾಣದಲ್ಲಿ ಸದ್ಯದಲ್ಲೇ ಪ್ರಕಟವಾಗಲಿದೆ. ಯಾರ್ಯಾರು ಬರುತ್ತಿದ್ದಾರೆ ಎಂದು ತಿಳಿದುಕೊಳ್ಳಲು ದಟ್ಸ್ ಕನ್ನಡಕ್ಕೆ ಭೇಟಿ ನೀಡುತ್ತಿರಿ.
ಸಾಂಸ್ಕೃತಿಕ ಕಾರ್ಯಕ್ರಮವಲ್ಲದೆ ಕವಿಗೋಷ್ಠಿ, ವೈದ್ಯಕೀಯಗೋಷ್ಠಿ, ಮಾಧ್ಯಮಗೋಷ್ಠಿ, ಅನಿವಾಸಿ ಕನ್ನಡಿಗರ ಗೋಷ್ಠಿ ಮುಂತಾದ ವಿಶೇಷ ಕಾರ್ಯಕ್ರಮಗಳು ಕೂಡ ಇವೆ. ಅಲ್ಲದೆ ಮೊದಲ ಬಾರಿಗೆ ಸಿಂಗಪುರದಲ್ಲಿ ಕನ್ನಡಿಗರನ್ನು ಒಂದುಗೂಡಿಸುವ (ನೆಟ್ವರ್ಕಿಂಗ್) ಹೊಸ ಪ್ರಯೋಗ ಕೂಡ ನಡೆಯಲಿದೆ.
Zee TV, HDFC, masti 96.3, Thatskannada, United land bank, Esteem group, Premier properties, ಹೃದಯ ವಾಹಿನಿ ಮತ್ತು ಇನ್ನು ಹಲವು ಸಂಸ್ಥೆಗಳು ಈ ವೈಭವದ ಕಾರ್ಯಕ್ರಮವನ್ನು ಪ್ರಾಯೋಜಿಸಲು ಉತ್ಸಾಹದಿಂದ ಮುಂದೆ ಬಂದಿವೆ.
ಒಟ್ಟಿನಲ್ಲಿ ಕನ್ನಡವನ್ನು ನಾಡಿನಾಚೆಯಲ್ಲೂ ಉಳಿಸಿ ಬೆಳಸುವ ಇಂತಹ ಮಹತ್ಕಾರ್ಯಗಳಿಗೆ ಕನ್ನಡಿಗರೆಲ್ಲರ ಬೆಂಬಲ, ಪ್ರೋತ್ಸಾಹ ಮತ್ತು ಎಲ್ಲಕ್ಕಿಂತ ಮುಖ್ಯವಾಗಿ ಉತ್ಸಾಹದಿಂದ ಭಾಗವಹಿಸುವಿಕೆಯ ಅಗತ್ಯವಿದೆ. ಇನ್ನೂ ಹೆಚ್ಚಿನ ಮಾಹಿತಿಗಳಿಗೆ ದಟ್ಸ್ ಕನ್ನಡ ತಪ್ಪದೇ ಓದುತ್ತಿರಿ!
ಸದ್ಯದಲ್ಲೇ ನಿರೀಕ್ಷಿಸಿ - ಭಾಗವಹಿಸುವ ಸಂಗೀತಗಾರರು ಯಾರು? ಸಿನೆಮಾ ನಟ ನಟಿಯರು ಯಾರು? ಕವಿಗಳು ಯಾರು? ಜನಪದ ಕಲಾವಿದರು ಯಾರು?
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications