ಸಿಂಗಪುರ ಸಾಂಸ್ಕೃತಿಕ ಹಬ್ಬದ ಮೊದಲನೇ ದಿನ!

ಇಂದು ಬೆಳಗ್ಗೆ 9 ಘಂಟೆಗೆ ವಾಣಿಜ್ಯ ವೇದಿಕೆ ಮತ್ತು ಸಮಾವೇಶದೊಂದಿಗೆ ಪ್ರಾರಂಭವಾಗುವ ಭರ್ಜರಿ ಸಮ್ಮೇಳನವು ಇಲ್ಲಿನ ಕನ್ನಡಿಗರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಕಾರ್ಯಕ್ರಮ ಪದ್ಮಶ್ರೀ ಕದ್ರಿ ಗೋಪಾಲನಾಥ್ ಅವರ ಸ್ಯಾಕ್ಸೋಫೋನ್ ಮಂಗಳ ಧ್ವನಿಯೊಂದಿಗೆ ಮಧ್ಯಾನ್ಹ ಉದ್ಘಾಟಣೆಗೊಂಡು ರಾತ್ರಿ ಬದ್ರಿ ಪ್ರಸಾದ್ ಮತ್ತು ಅನುರಾಧ ಭಟ್ ಅವರ ಚಿತ್ರ ಮಂಜರಿಯೊಂದಿಗೆ ಮೊದಲನೇ ದಿನದ ಕಾರ್ಯಕ್ರಮಗಳು ಅಂತ್ಯಗೊಳ್ಳಲಿವೆ. ಇಂದಿನ ಇನ್ನೂ ಕೆಲವು ವಿಶೇಷಗಳು - ಪುತ್ತೂರ್ ನರಸಿಂಹ ನಾಯಕ್ ಅವರಿಂದ ದಾಸಮಂಜರಿ, ಪ್ರಯೋಗ ರಂಗ ಅವರ ನಾಟಕ, ಕವಿಗೋಷ್ಠಿ, ಜನಪದ ಮತ್ತು ಇತರ ನೃತ್ಯಗಳು ಹಾಗು ವಿಶ್ವಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿತರಣೆ.
ಹೊರದೇಶದಲ್ಲಿ ಕಾರ್ಯನಿಮಿತ್ತ ವಲಸೆ ಹೋಗಿ ತಾಯ್ನಾಡಿನಿಂದ ದೂರವಾಗಿ ವಾಸಿಸುತ್ತಿರುವ ಕನ್ನಡಿಗರಿಗೆ ಕರ್ನಾಟಕದ ಕಲೆ, ಸಾಹಿತ್ಯವನ್ನು ಪುನರ್ ಪರಿಚಯಿಸುವ ಮತ್ತು ಹೊರದೇಶದಲ್ಲೇ ಹುಟ್ಟಿ ಬೆಳೆದಿರುವ ಯುವ ಜನಾಂಗಕ್ಕೆ ಕರ್ನಾಟಕದ ಹಿರಿಮೆಯನ್ನು ತೋರುವ ಸದುದ್ದೇಶವನ್ನು ಹೊಂದಿರುವ ಈ ವಿಶ್ವ ಕನ್ನಡ ಸಮ್ಮೇಳನವು, ಈ ಹಿಂದೆ 2004 (ಅಬುಧಾಭಿ), 2005 (ಸಿಂಗಪುರ), 2006 (ಬಹಮಿಯನ್), 2007 (ಕುವೈತ್), 2008 (ಕತಾರ್) ಮತ್ತು 2009 (ದುಬೈ)ನಲ್ಲಿ ಯಶಸ್ವಿಯಾಗಿ ನಡೆದಿದೆ.
ಸಮ್ಮೇಳನದ ಎರಡು ದಿನವೂ ಕರ್ನಾಟಕದ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ವಸ್ತು ಪ್ರದರ್ಶನ ಮಳಿಗೆಗಳಿರುತ್ತವೆ. ಇಲ್ಲಿ ಕರ್ನಾಟಕದ ಗ್ರಾಮೀಣ ಆಟಗಳನ್ನು ಆಡಬಹುದು, ಕನ್ನಡದ ಹಳೆಯ ದಿನಪತ್ರಿಕೆಗಳನ್ನು ಓದಬಹುದು ಮತ್ತು ವಿಶ್ವ ವಿಖ್ಯಾತ ಮೈಸೂರು ಶೈಲಿಯ ತೈಲವರ್ಣಗಳನ್ನು ನೋಡಬಹುದು!
ಬನ್ನಿ ಈ ಸಾಂಸ್ಕೃತಿಕ ಹಬ್ಬದಲ್ಲಿ ಇಂದು ಮತ್ತು ನಾಳೆ ಪಾಲ್ಗೊಳ್ಳಿ. ಕನ್ನಡಮ್ಮನ ರಥವನೆಳೆಯಲು ನೀವು ಕೈ ನೀಡಿ. ಸಮ್ಮೇಳನದಲ್ಲಿ ನಡೆಯುತ್ತಿರುವ ಕಾರ್ಯಕಲಾಪಗಳ ಮಿಂಚಿನ ವರದಿಗಳಿಗೆ ದಟ್ಸ್ ಕನ್ನಡಕ್ಕೆ ನಿರಂತರವಾಗಿ ಭೇಟಿ ನೀಡುತ್ತಿರಿ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications