ನಾವಿಕ ವಿಶ್ವ ಕನ್ನಡ ಸಮಾವೇಶ ಉದ್ಘಾಟನೆ
ನಾವಿಕ ಬಾಸ್ಟನ್ ನ ವಿಶ್ವ ಕನ್ನಡ ಸಮಾವೇಶದ ಎರಡನೇ ದಿನ ಔಪಚಾರಿಕ ಉದ್ಘಾಟನಾ ಸಮಾರಂಭ ನಡೆಯಿತು. ಕರ್ನಾಟಕದ ಸಾರಿಗೆ ಮಂತಿಗಳಾದ ರಾಮಲಿಂಗ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿದ್ದರು.
ಮುಂಜಾನೆ ವೂಸ್ಟರ್ ಮಹಾನಗರದ ಪುರಭವನದಿಂದ ಡಿ.ಸಿ.ಯು ಸಭಾಂಗಣಕ್ಕೆ ಸುಂದರ ಮೆರವಣಿಗೆಯಲ್ಲಿ ಹಲವು ಕನ್ನಡ ಕೂಟಗಳು ಭಾಗವಹಿಸಿದ್ದವು. ವಿವಿಧ ಧಿರಿಸು, ಡೊಳ್ಳು ಕುಣಿತ, ಯಕ್ಷಗಾನ, ಬಾವುಟಗಳಿಂದ ಕೂಡಿದ ಈ ಮೆರವಣಿಗೆಯಲ್ಲಿ ಕನ್ನಡ ಚಲನಚಿತ್ರ ತಾರೆಯರಾದ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಕೂಡಾ ಭಾಗವಹಿಸಿದ್ದರು.
ನಂತರದ ಉದ್ಘಾಟನಾ ಸಮಾರಂಭದಲ್ಲಿ ಸಂಚಾಲಕರಾದ ಶರಣಬಸವ ರಾಜೂರ ಮತ್ತು ಕೃಪಾ ರಾಜೂರ ಅವರು ಎಲ್ಲರನ್ನೂ ಸ್ವಾಗತಿಸಿದರು. ನಾವಿಕ ಅಧ್ಯಕ್ಷ ಕೇಶವ ಬಾಬು ಅವರು ಗಣ್ಯರನ್ನು ವೇದಿಕೆಯ ಮೇಲೆ ಬರಮಾಡಿಕೊಂಡರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮುಖ್ಯಮಂತ್ರಿ ಚಂದ್ರು, ಎನ್.ಆರ್.ಐ ಫೋರಮ್ ನ ಗಣೇಶ್ ಕಾರ್ಣಿಕ್, ಉದ್ಯಮಿ ಗುರುರಾಜ ದೇಶಪಾಂಡೆ, ಜಯಶ್ರೀ ದೇಶಪಾಂಡೆ, ಸಾಹಿತಿ ವೀರಣ್ಣ ರಾಜೂರ, ನಾವಿಕ ಕೇಂದ್ರ ಮಂಡಳಿಯ ರಾಮಪ್ಪ, ವಿಜಯ್ ಕೊಟ್ರಪ್ಪ, ಚಲನಚಿತ್ರ ತಾರೆಯರಾದ ಯಶ್ ಮತ್ತು ರಾಧಿಕಾ ಪಂಡಿತ್, ವೂಸ್ಟರ್ ನಗರದ ಮೇಯರ್ ಜೋಸೆಫ್ ಪೆಟ್ಟಿ, ಅತಿಥೇಯ ಕನ್ನಡ ಕೂಟದ ಅಧ್ಯಕ್ಷರಾದ ಮಧುಸೂಧನ್ ಅಕ್ಕಿಹೆಬ್ಬಾಳ್ ಮತ್ತು ದಿನೇಶ್ ಹರ್ಯಾಡಿ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ರಾಮಲಿಂಗಾ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶುಭ ಸಂದೇಶ ತಿಳಿಸಿ ಈ ಸಮಾವೇಶ ಯಶಸ್ವಿಯಾಗಲಿ ಎಂದು ಹಾರೈಸಿದರು. ಮುಖ್ಯಮಂತ್ರಿ ಚಂದ್ರು ಅವರು ತಮ್ಮ ಭಾಷಣದಲ್ಲಿ ಹೊರನಾಡ ಕನ್ನಡಿಗರು, ಕನ್ನಡ ಮತ್ತು ಸಂಸ್ಕೃತಿಯ ಜತೆ ನಂಟನ್ನು ಬಲಗೊಳಿಸಲು ಕರೆ ಕೊಟ್ಟರು. ಗಿರೀಶ್ ಕಾರ್ನಾಡ್ ಅವರು ತಮ್ಮ ವೀಡಿಯೋ ಸಂದೇಶದಲ್ಲಿ ಸಮಾವೇಶಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ "ಸೌರಭ" ಎಂಬ ಸ್ಮರಣ ಸಂಚಿಕೆಯನ್ನು ವೀರಣ್ಣ ರಾಜೂರ ಅವರು ಬಿಡುಗಡೆ ಮಾಡಿದರು.
ನಾವಿಕ ಬಾಸ್ಟನ್ ನ ವಿಶ್ವ ಕನ್ನಡ ಸಮಾವೇಶಕ್ಕೆ ಸುಮಾರು ಎರಡೂವರೆ ಸಾವಿರ ಕನ್ನಡಿಗರು ವಿಶ್ವದ ನಾನಾ ಭಾಗಗಳಿಂದ ಆಗಮಿಸಿದ್ದಾರೆ. ಬೋಸ್ಟನ್ ನಲ್ಲಿ ನ್ಯೂ ಇಂಗ್ಲೆಂಡ್ ಕನ್ನಡ ಕೂಟ ಮತ್ತು ಹೊಯ್ಸಳ ಕನ್ನಡ ಕೂಟದ ಸಹಯೋಗದಲ್ಲಿ 2ನೇ 'ನಾವಿಕ' ವಿಶ್ವ ಕನ್ನಡ ಸಮಾವೇಶ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1ರಂದು ಯಶಸ್ವಿಯಾಗಿ ಆಯೋಜನೆಗೊಂಡಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ













Click it and Unblock the Notifications