ನಾವಿಕ ವಿಶ್ವ ಕನ್ನಡ ಸಮಾವೇಶ ಉದ್ಘಾಟನೆ
ನಾವಿಕ ಬಾಸ್ಟನ್ ನ ವಿಶ್ವ ಕನ್ನಡ ಸಮಾವೇಶದ ಎರಡನೇ ದಿನ ಔಪಚಾರಿಕ ಉದ್ಘಾಟನಾ ಸಮಾರಂಭ ನಡೆಯಿತು. ಕರ್ನಾಟಕದ ಸಾರಿಗೆ ಮಂತಿಗಳಾದ ರಾಮಲಿಂಗ ರೆಡ್ಡಿ ಅವರು ಮುಖ್ಯ ಅತಿಥಿಗಳಾಗಿದ್ದರು.
ಮುಂಜಾನೆ ವೂಸ್ಟರ್ ಮಹಾನಗರದ ಪುರಭವನದಿಂದ ಡಿ.ಸಿ.ಯು ಸಭಾಂಗಣಕ್ಕೆ ಸುಂದರ ಮೆರವಣಿಗೆಯಲ್ಲಿ ಹಲವು ಕನ್ನಡ ಕೂಟಗಳು ಭಾಗವಹಿಸಿದ್ದವು. ವಿವಿಧ ಧಿರಿಸು, ಡೊಳ್ಳು ಕುಣಿತ, ಯಕ್ಷಗಾನ, ಬಾವುಟಗಳಿಂದ ಕೂಡಿದ ಈ ಮೆರವಣಿಗೆಯಲ್ಲಿ ಕನ್ನಡ ಚಲನಚಿತ್ರ ತಾರೆಯರಾದ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಕೂಡಾ ಭಾಗವಹಿಸಿದ್ದರು.
ನಂತರದ ಉದ್ಘಾಟನಾ ಸಮಾರಂಭದಲ್ಲಿ ಸಂಚಾಲಕರಾದ ಶರಣಬಸವ ರಾಜೂರ ಮತ್ತು ಕೃಪಾ ರಾಜೂರ ಅವರು ಎಲ್ಲರನ್ನೂ ಸ್ವಾಗತಿಸಿದರು. ನಾವಿಕ ಅಧ್ಯಕ್ಷ ಕೇಶವ ಬಾಬು ಅವರು ಗಣ್ಯರನ್ನು ವೇದಿಕೆಯ ಮೇಲೆ ಬರಮಾಡಿಕೊಂಡರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮುಖ್ಯಮಂತ್ರಿ ಚಂದ್ರು, ಎನ್.ಆರ್.ಐ ಫೋರಮ್ ನ ಗಣೇಶ್ ಕಾರ್ಣಿಕ್, ಉದ್ಯಮಿ ಗುರುರಾಜ ದೇಶಪಾಂಡೆ, ಜಯಶ್ರೀ ದೇಶಪಾಂಡೆ, ಸಾಹಿತಿ ವೀರಣ್ಣ ರಾಜೂರ, ನಾವಿಕ ಕೇಂದ್ರ ಮಂಡಳಿಯ ರಾಮಪ್ಪ, ವಿಜಯ್ ಕೊಟ್ರಪ್ಪ, ಚಲನಚಿತ್ರ ತಾರೆಯರಾದ ಯಶ್ ಮತ್ತು ರಾಧಿಕಾ ಪಂಡಿತ್, ವೂಸ್ಟರ್ ನಗರದ ಮೇಯರ್ ಜೋಸೆಫ್ ಪೆಟ್ಟಿ, ಅತಿಥೇಯ ಕನ್ನಡ ಕೂಟದ ಅಧ್ಯಕ್ಷರಾದ ಮಧುಸೂಧನ್ ಅಕ್ಕಿಹೆಬ್ಬಾಳ್ ಮತ್ತು ದಿನೇಶ್ ಹರ್ಯಾಡಿ ಅವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ರಾಮಲಿಂಗಾ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶುಭ ಸಂದೇಶ ತಿಳಿಸಿ ಈ ಸಮಾವೇಶ ಯಶಸ್ವಿಯಾಗಲಿ ಎಂದು ಹಾರೈಸಿದರು. ಮುಖ್ಯಮಂತ್ರಿ ಚಂದ್ರು ಅವರು ತಮ್ಮ ಭಾಷಣದಲ್ಲಿ ಹೊರನಾಡ ಕನ್ನಡಿಗರು, ಕನ್ನಡ ಮತ್ತು ಸಂಸ್ಕೃತಿಯ ಜತೆ ನಂಟನ್ನು ಬಲಗೊಳಿಸಲು ಕರೆ ಕೊಟ್ಟರು. ಗಿರೀಶ್ ಕಾರ್ನಾಡ್ ಅವರು ತಮ್ಮ ವೀಡಿಯೋ ಸಂದೇಶದಲ್ಲಿ ಸಮಾವೇಶಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ "ಸೌರಭ" ಎಂಬ ಸ್ಮರಣ ಸಂಚಿಕೆಯನ್ನು ವೀರಣ್ಣ ರಾಜೂರ ಅವರು ಬಿಡುಗಡೆ ಮಾಡಿದರು.
ನಾವಿಕ ಬಾಸ್ಟನ್ ನ ವಿಶ್ವ ಕನ್ನಡ ಸಮಾವೇಶಕ್ಕೆ ಸುಮಾರು ಎರಡೂವರೆ ಸಾವಿರ ಕನ್ನಡಿಗರು ವಿಶ್ವದ ನಾನಾ ಭಾಗಗಳಿಂದ ಆಗಮಿಸಿದ್ದಾರೆ. ಬೋಸ್ಟನ್ ನಲ್ಲಿ ನ್ಯೂ ಇಂಗ್ಲೆಂಡ್ ಕನ್ನಡ ಕೂಟ ಮತ್ತು ಹೊಯ್ಸಳ ಕನ್ನಡ ಕೂಟದ ಸಹಯೋಗದಲ್ಲಿ 2ನೇ 'ನಾವಿಕ' ವಿಶ್ವ ಕನ್ನಡ ಸಮಾವೇಶ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1ರಂದು ಯಶಸ್ವಿಯಾಗಿ ಆಯೋಜನೆಗೊಂಡಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು













Click it and Unblock the Notifications