ಕಲಾವಿದರ ಆಹ್ವಾನಕ್ಕಾಗಿ ಬೆಂಗಳೂರಿನಲ್ಲಿ ನಾವಿಕ

ಸಮ್ಮೇಳನದ ಸಂಚಾಲಕರಾದ ಡಾ.ಶರಣ ಬಸವ ರಾಜೂರ, ಸಾಂಸ್ಕೃತಿಕ ತಂಡದ ಸಲಹೆಗಾರರಾದ ವಲ್ಲೀಶ ಶಾಸ್ತ್ರೀ, ಕರ್ನಾಟಕ ಸಂಚಾಲಕರಾದ ಗಜಲಕ್ಷ್ಮೀ ಕೃಷ್ಣಮೂರ್ತಿ, ಕೃಷ್ಣಮೂರ್ತಿ ಆನೇಕಲ್, ಸದಸ್ಯ ಶ್ರೀನಾಥ್ ವಸಿಷ್ಠ ನೇತೃತ್ವದ ಈ ತಂಡ ಮುಂದಿನ ಒಂದು ವಾರಗಳ ಕಾಲ ಕನ್ನಡದ ಹಿರಿಯ ಸಾಹಿತಿಗಳು, ಕಲಾವಿದರನ್ನು ಭೇಟಿಯಾಗಿ ಐತಿಹಾಸಿಕ ಸಮ್ಮೇಳನಕ್ಕೆ ಅಮೆರಿಕಕ್ಕೆ ಬರುವಂತೆ ಆಹ್ವಾನಿಸಲಿದೆ.
ಇದೇ ತಿಂಗಳು ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1ರಂದು ಸಮ್ಮೇಳನವು ಅದ್ದೂರಿಯಾಗಿ ನಡೆಯಲಿದೆ. ಉತ್ತರ ಅಮೆರಿಕದಲ್ಲಿ ಕಳೆದ 40 ವರ್ಷಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಕನ್ನಡಿಗರು ನೆಲೆಸಿದ್ದು, ಕನ್ನಡ ಭಾಷೆ-ಸಂಸ್ಕೃತಿ ಉಳಿಸಿ ಪೋಷಿಸುತ್ತಾ ಬಂದಿದ್ದಾರೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರು ಒಂದಾಗಿ ಪ್ರತಿ ಎರಡು ವರ್ಷಗಳಿಗೊಮ್ಮೆ ಒಂದೇ ಸೂರಿನಡಿ ಸೇರಿ ಕನ್ನಡ ಭಾಷೆ ಹಾಗೂ ಸಂಸ್ಕೃತಿ, ಕಲಾ ಪ್ರತಿಭೆಗಳನ್ನೊಳಗೊಂಡ ಕಾರ್ಯಕ್ರಮಗಳನ್ನು ಆಯೋಜಿಸಿ ತಮ್ಮ ಮುಂದಿನ ಪೀಳಿಗೆಗೆ ಧಾರೆ ಎರೆಯುತ್ತಾ ಬಂದಿದ್ದಾರೆ.
ಈ ನಿಟ್ಟಿನಲ್ಲಿ ನಾವಿಕ ಸಂಸ್ಥೆ ತನ್ನ ಎರಡನೆಯ ವಿಶ್ವ ಕನ್ನಡಿಗರ ಸಮಾವೇಶಕ್ಕೆ ಸಿದ್ಧತೆ ನಡೆಸುತ್ತಿದ್ದು ಸುಮಾರು 3,000ಕ್ಕೂ ಹೆಚ್ಚು ವಿಶ್ವ ಕನ್ನಡಿಗರು ಭಾಗವಹಿಸುವ ನಿರೀಕ್ಷೆಯಿದೆ. ವಿಶೇಷವಾಗಿ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದು, ಸಚಿವ ಸಂಪುಟದ ಸಚಿವರು, ಕನ್ನಡ ಚಲನಚಿತ್ರ ನಟ, ನಟಿಯರನ್ನೂ ಆಹ್ವಾನಿಸಲಾಗಿದೆ.
ಮಂದಾರ ನ್ಯೂ ಇಂಗ್ಲೆಂಡ್ ಕನ್ನಡ ಕೂಟ, ಬೋಸ್ಟನ್ ಮತ್ತು ಹೊಯ್ಸಳ ಕನ್ನಡ ಕೂಟ, ಕನೆಕ್ಟಿಕಟ್ ಸಹಭಾಗಿತ್ವದಲ್ಲಿ ಮೂರು ದಿನಗಳ ಈ ಸಮ್ಮೇಳನವನ್ನು ಆಯೋಜಿಸಲಾಗಿದೆ. ಗಾಯಕಿ ಶಮಿತಾ ಮಲ್ನಾಡ್, ಗಾಯಕ ವಿಜಯ್ ಪ್ರಕಾಶ್, ವೇಣುವಾದಕ ಪ್ರವೀಣ್ ಗೋಡ್ಖಿಂಡಿ, ಗಾಯಕಿ ಪಲ್ಲವಿ ಅರುಣ್ ಮುಂತಾದವರು ಸಂಗೀತ ಸುಧೆ ಹರಿಸಲಿದ್ದಾರೆ. ಗಂಗಾವತಿ ಪ್ರಾಣೇಶ್, ಶ್ರೀನಾಥ್ ವಸಿಷ್ಠ, ಯಶವಂತ್ ಸರದೇಶಪಾಂಡೆಯವರ ಹಾಸ್ಯ ಲಹರಿಯೂ ಇದರಲ್ಲಿ ಭಾಗಿಯಾಗಿದೆ. [ನೊಂದಾವಣೆ ಮತ್ತು ಹೆಚ್ಚಿನ ವಿವರ]
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications