ಬಾಸ್ಟನ್ ಕನ್ನಡ ನುಡಿಹಬ್ಬದಲ್ಲಿ ಥೈಥೈಥೈಥೈಥೈ
ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1ರಂದು ಬೋಸ್ಟನ್ ನಲ್ಲಿ ನ್ಯೂ ಇಂಗ್ಲೆಂಡ್ ಕನ್ನಡ ಕೂಟ ಮತ್ತು ಹೊಯ್ಸಳ ಕನ್ನಡ ಕೂಟದ ಸಹಯೋಗದಲ್ಲಿ ನಡೆಯಲಿರುವ 2ನೇ 'ನಾವಿಕ' ವಿಶ್ವ ಕನ್ನಡ ಸಮಾವೇಶಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಸಮಾವೇಶಕ್ಕೆ ಸರ್ವರೀತಿಯ ಸಿದ್ಧತೆಗಳು ಭರದಿಂದ ಸಾಗಿವೆ. ನೀವು ಅಥವಾ ನಿಮ್ಮ ಸ್ನೇಹಿತರು ಇನ್ನೂ ನೋಂದಾಯಿಸದಿದ್ದರೆ, ಇಂದೇ ನಮ್ಮ ಅಂತರಜಾಲ ತಾಣಕ್ಕೆ ಭೇಟಿ ನೀಡಿ. ನೀವು ಒಂದು ದಿನದ ನೋಂದಾವಣಿ ಕೂಡ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ನಮ್ಮನ್ನು ಸಂಪರ್ಕಿಸಿ.
ಈ ಸಮಾವೇಶದಲ್ಲಿ ಅಮೋಘ ಕಾರ್ಯಕ್ರಮಗಳು ಮತ್ತು ವರ್ಣರಂಜಿತ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ. ಉದಾಹರಣೆಗೆ, ಕರಾವಳಿ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನದ ಭರ್ಜರಿ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ. ಕೊಂಡದಕುಳಿ ರಾಮಚಂದ್ರ ಹೆಗಡೆ ಮತ್ತು ವಿದ್ಯಾ ಕೊಲ್ಯೂರ್ ಅವರು ತಮ್ಮ ತಮ್ಮ ತಂಡಗಳ ಜತೆಗೆ ಬಂದು ಪ್ರೇಕ್ಷಕರನ್ನು ತಮ್ಮ ಪ್ರತಿಭೆಯಿಂದ ಸೆಳೆಯಲು ಸಜ್ಜಾಗಿದ್ದಾರೆ. ನೀವು ಯಕ್ಷಗಾನದ ಅಭಿಮಾನಿ ಇರಬಹುದು ಅಥವಾ ಮೊದಲ ಬಾರಿ ಯಕ್ಷಗಾನ ನೋಡುತ್ತಿರಬಹುದು, ಇವರ ಕಾರ್ಯಕ್ರಮ ನಿಮಗೆ ಇಷ್ಟವಾಗುವುದರಲ್ಲಿ ಸಂದೇಹವೇ ಇಲ್ಲ!

ಯಕ್ಷ ಮಂಜೂಷಾ : ಹಲವು ಪ್ರಥಮಗಳನ್ನು ಸಾಧಿಸಿರುವ ಮಂಗಳೂರಿನ ಯಕ್ಷ ಮಂಜೂಷಾ ಯಕ್ಷಗಾನ ಮಂಡಳಿ ಈ ಬಾರಿ ಕನ್ನಡ ನುಡಿಹಬ್ಬದ ಆಕರ್ಷಣೆಗಳಲ್ಲೊಂದಾಗಲಿದೆ. ಕನ್ನಡ ಮತ್ತು ಹಿಂದಿಯಲ್ಲಿ ಯಕ್ಷಗಾನ ಪ್ರದರ್ಶನಗಳನ್ನು ಏಕೈಕ ತಂಡ ಇದು. ಓರ್ವ ಮಹಿಳೆ ನೇತೃತ್ವ ವಹಿಸಿರುವ ಈ ತಂಡ 19 ರಾಜ್ಯಗಳಲ್ಲಿ ಯಕ್ಷಗಾನ ಪ್ರದರ್ಶನಗಳನ್ನು ನೀಡಿದೆ. ವಿದ್ಯಾ ಕೊಯ್ಲೂರ್ ಅವರು ತಂಡದ ಮುಖ್ಯಸ್ಥೆ ಮಾತ್ರವಲ್ಲ, ಕ್ರಿಯೆಟೀವ್ ಡೈರೆಕ್ಟರ್ ಕೂಡ ಆಗಿದ್ದಾರೆ. ಅಮೆರಿಕಾದ ಯಕ್ಷಗಾನ ಪ್ರಿಯರನ್ನು ರಂಜಿಸಲು ತಂಡ ತುದಿಗಾಲಲ್ಲಿ ನಿಂತಿದೆ.
ಪೂರ್ಣಚಂದ್ರ ಯಕ್ಷಗಾನ ಪ್ರತಿಷ್ಠಾನ : ಕುಂಭಾಶಿಯ ಕರ್ನಾಟಕದ ಪುರಾತನ ಕಲೆಯನ್ನು 2000ನೇ ವರ್ಷದಿಂದ ಪೋಷಿಸುತ್ತಿದೆ. ಕೊಂಡದಕುಳಿ ರಾಮಚಂದ್ರ ಹೆಗಡೆ ಅವರು ಮುಖ್ಯಸ್ಥರಾಗಿರುವ ಈ ಯಕ್ಷಗಾನ ಮಂಡಳಿ ದೇಶದಲ್ಲಿ ಮಾತ್ರವಲ್ಲಿ ವಿದೇಶದಲ್ಲಿ ಕೂಡ ಹಲವಾರು ಯಶಸ್ವಿ ಪ್ರದರ್ಶನಗಳನ್ನು ನೀಡಿದೆ. ನಾವಿಕ ನಡೆಸುತ್ತಿರುವ 2ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಪೂರ್ಣಚಂದ್ರ ಯಕ್ಷಗಾನ ಪ್ರತಿಷ್ಠಾನ ಮೊದಲ ಬಾರಿಗೆ ಅಮೆರಿಕಾದಲ್ಲಿ ಯಕ್ಷಗಾನ ಪ್ರದರ್ಶನವನ್ನು ನೀಡುತ್ತಿದೆ.
ನೋಂದಾಯಿಸಿಕೊಳ್ಳಿ : ಜನಪ್ರಿಯ ಆಗ್ರಹದ ಮೇರೆಗೆ ಈ ಬಾರಿ ಕೇವಲ ಒಂದು ದಿನದ ವಿಶೇಷ ನೋಂದಣಿಯ ಅವಕಾಶವನ್ನು ಕನ್ನಡ ಉತ್ಸಾಹಿಗಳಿಗೆ ನೀಡಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕನ್ನಡ ಸಮ್ಮೇಳನಕ್ಕೆ ನೋಂದಾಯಿಸಿಕೊಳ್ಳಬೇಕೆಂದು ಆಯೋಜಕರು ಆಗ್ರಹಿಸಿದ್ದಾರೆ. ಈ ಬಾರಿ ಇಬ್ಬರು ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿಗಳು ಭಾಗವಹಿಸುತ್ತಿರುವುದು ವಿಶೇಷ. ಗಿರೀಶ್ ಕಾರ್ನಾಡ್ ಮತ್ತು ಡಾ. ಚಂದ್ರಶೇಖರ ಕಂಬಾರ ಅವರು ಮುಖ್ಯ ಅತಿಥಿಗಳಾಗಿ ಸಮ್ಮೇಳದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಜೊತೆಗೆ ಹಲವಾರು ಕನ್ನಡ ಸಿನೆಮಾರಂಗದ ತಾರೆಗಳು ರಂಜಿಸಲು ಅಮೆರಿಕಾಕ್ಕೆ ಹೋಗುತ್ತಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications