ವಿಶ್ವ ಕನ್ನಡ ಸಮ್ಮೇಳನಕ್ಕೊಂದು ಸುಂದರ ಅಪ್ಲಿಕೇಷನ್
ಬೆಂಗಳೂರು, ಮೇ.20: ವಿಶ್ವ ಕನ್ನಡ ಸಮ್ಮೇಳನ 2014 ಸಮಿತಿ ತನ್ನ ಅಧಿಕೃತ ಮೊಬೈಲ್ ಅಪ್ಲಿಕೇಷನ್ ಅನ್ನು ಲೋಕಾರ್ಪಣೆ ಮಾಡಿದೆ. ಈ ಅಪ್ಲಿಕೇಷನ್ ಮೂಲಕ ಸಮ್ಮೇಳನ ಕುರಿತಂತೆ ಎಲ್ಲಾ ಮಾಹಿತಿಗಳನ್ನು ನಿಮ್ಮ ಬೆರಳ ತುದಿಯಲ್ಲಿ ಪಡೆಯಬಹುದಾಗಿದೆ.
ಆಂಡ್ರಾಯ್ಡ್ ಆಧಾರಿತ ಫೋನ್ ಉಳ್ಳವರು ಗೂಗಲ್ ಪ್ಲೇ ನಲ್ಲಿ iAKKA 2014 ಎಂದು ಸರ್ಚ್ ಮಾಡಿ ಅಪ್ಲಿಕೇಷನ್ ಡೌನ್ ಲೋಡ್ ಮಾಡಿಕೊಳ್ಳಬಹುದು. ಈ ಮೊಬೈಲ್ ಅಪ್ಲಿಕೇಷನ್ ಐಫೋನ್, ಟ್ಯಾಬ್ಲೆಟ್ ಗಳಲ್ಲೂ ಕಾರ್ಯ ನಿರ್ವಹಿಸುತ್ತದೆ.
ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರೆಲ್ಲರನ್ನು ಒಂದೆಡೆ ಬೆಸೆಯುವ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬಂದಿರುವ ಅಕ್ಕ ಸಂಸ್ಥೆ ಈಗ ತಂತ್ರಜ್ಞಾನದ ಮೂಲಕ ಎನ್ನಾರೈ ಕನ್ನಡಿಗರಿಗೆ ಇನ್ನಷ್ಟು ಹತ್ತಿರವಾಗುತ್ತಿದೆ. 8ನೆ ಅಕ್ಕ ವಿಶ್ವ ಸಮ್ಮೇಳನ ಸಾಧನೆ, ಸಂಭ್ರಮ, ಸಂಕಲ್ಪದ ಸಮಾಗಮವಾಗಲಿದೆ ಎಂದು ಅಕ್ಕ ಸಂಸ್ಥೆ ಅಧ್ಯಕ್ಷ ಹಳೆಕೋಟೆ ಎನ್. ವಿಶ್ವಾಮಿತ್ರ ಅವರು ಹೇಳಿದ್ದಾರೆ.

ಹೊರನಾಡಿನ ಕನ್ನಡಿಗರ ಅತಿ ದೊಡ್ಡ ಸಂಸ್ಥೆಯಾದ 'ಅಕ್ಕ' ಅಮೆರಿಕನ್ನಡಿಗರ ಆಶೋತ್ತರಗಳನ್ನು, ಕನ್ನಡ ನಾಡಿನ ನಡೆ, ನುಡಿ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸಕಾರಾತ್ಮಕವಾಗಿ ಸ್ಪಂದಿಸುವ ಸಂಸ್ಥೆ. ಉತ್ತರ ಅಮೆರಿಕದಲ್ಲಿನ ಕನ್ನಡಿಗರ ಮತ್ತು ಕರ್ನಾಟಕದ ಪ್ರತಿಭಾನ್ವಿತ ವ್ಯಕ್ತಿಗಳಿಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಯೋಗ್ಯವಾದ ವೇದಿಕೆಗಳನ್ನು ಅಕ್ಕ ಕಳೆದ 15 ವರ್ಷಗಳಿಂದ ಒದಗಿಸುತ್ತಿದೆ ಎಂದು ಅಕ್ಕ ಅಧ್ಯಕ್ಷ ಎಚ್.ಎನ್ ವಿಶ್ವಾಮಿತ್ರ ತಿಳಿಸಿದ್ದಾರೆ.
iAKKA 2014 ಅಪ್ಲಿಕೇಷನ್ ಮೂಲಕ ಅಕ್ಕ ಸಮ್ಮೇಳನಕ್ಕೆ ನೋಂದಾಯಿಸಿಕೊಳ್ಳಬಹುದು, ಸಮ್ಮೇಳನದ ವೇಳಾಪಟ್ಟಿ, ರಿಯಲ್ ಟೈಮ್ ಉದ್ಘೋಷಣೆಗಳು, ಮುಂಬರುವ ಕಾರ್ಯಕ್ರಮಗಳು, ಸಮ್ಮೇಳನ ಕುರಿತಂತೆ ವಿಡಿಯೋಗಳು, ಫೇಸ್ ಬುಕ್ ಮೂಲಕ ನೋಂದಾಯಿಸಿಕೊಳ್ಳುವುದು, ಫೇಸ್ ಬುಕ್ ಗ್ರೂಪ್, ಅಕ್ಕ ವೆಬ್ ತಾಣಕ್ಕೆ ಲಿಂಕ್, ಸಮ್ಮೇಳನ ನಡೆಯುವ ತಾಣದ ಸುತ್ತ ಮುತ್ತಲಿನ ಪ್ರೇಕ್ಷಣೀಯ ಸ್ಥಳಗಳ ಬಗ್ಗೆ ಮಾಹಿತಿ ಮುಂತಾದ ಸೌಲಭ್ಯಗಳನ್ನು ಒದಗಿಸಲಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications