ನಾವಿಕ 5ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಾಗಿದೆ ಭರದ ಸಿದ್ಧತೆ
ಲಾಸ್ ಏಂಜಲಿಸ್/ಸಿನ್ಸಿನಾಟಿ, ಫೆಬ್ರವರಿ 15 : ಬಹು ನಿರೀಕ್ಷಿತ ನಾವಿಕ 5ನೇ ವಿಶ್ವ ಕನ್ನಡ ಸಮ್ಮೇಳನವನ್ನು ಈ ಬಾರಿ ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ.
ಈ ಸಂಬಂಧ ಭರದ ಸಿದ್ಧತೆಗಳು ಆರಂಭಗೊಂಡಿವೆ. ಸಾಗರದಾಚೆ ಸಾವಿರಾರು ಮೈಲುಗಳ ದೂರದಲ್ಲಿದ್ದರೂ ಕನ್ನಡ ಭಾಷೆ, ಕನ್ನಡ ಸಂಸ್ಕೃತಿ, ಕನ್ನಡತನವನ್ನು ಗಟ್ಟಿಗೊಳಿಸಲು ಟೊಂಕ ಕಟ್ಟಿ ನಿಂತಿರುವ ಇಲ್ಲಿನ ಅನೇಕ ಉತ್ಸಾಹಿ ಕನ್ನಡಿಗರು, ಅಮೆರಿಕ ದೇಶದಲ್ಲಿ ನೆಲೆಸಿರುವ ಕನ್ನಡಿಗರನ್ನು ಒಗ್ಗೂಡಿಸುವ ಸಲುವಾಗಿ 2 ವರ್ಷಗಳಿಗೊಮ್ಮೆ ಸಮ್ಮೇಳನವನ್ನು ಆಯೋಜಿಸುತ್ತಾರೆ.
ನಾವಿಕ 5ನೇ ವಿಶ್ವ ಕನ್ನಡ ಸಮಾವೇಶವು ಆಗಸ್ಟ್ 30, 31 ಹಾಗೂ ಸೆಪ್ಟೆಂಬರ್ 1ರಂದು ಮೂರು ದಿನಗಳ ಕಾಲ ಸಿನ್ಸಿನಾಟಿ ನಗರದ ಡ್ಯೂಕ್ ಎನರ್ಜಿ ಕನ್ವೆನ್ಷನ್ ಸೆಂಟರಿನಲ್ಲಿ ನಡೆಯಲಿದೆ.

ಸಮ್ಮೇಳನಕ್ಕೆ ಬೇಕಾದ ನಾನಾ ಸಮಿತಿಗಳು ಈಗಾಗಲೇ ರಚನೆಗೊಂಡಿದ್ದು ಆಯಾ ಸಮಿತಿಗಳು ತಮ್ಮ ತಮ್ಮ ಕಾರ್ಯಗಳನ್ನು ವ್ಯವಸ್ಥಿತವಾಗಿ ರೂಪಿಸಿಕೊಳ್ಳಲು ಹಲವು ಸುತ್ತಿನ ಸಭೆಗಳನ್ನು ನಡೆಸಿವೆ. ಅಮೆರಿಕದ ನಾನಾ ಭಾಗಗಳಲ್ಲಿರುವ ಸಂಘಟನಾ ನೈಪುಣ್ಯತೆ ಹೊಂದಿರುವ ಅನುಭವಿ ಕನ್ನಡಿಗರು ಈ ಎಲ್ಲ ಸಮಿತಿಗಳಲ್ಲಿ ಪದಾಧಿಕಾರಿಗಳಾಗಿರುವುದು ವಿಶೇಷ.
ಮೂರು ದಿನಗಳ ಕಾರ್ಯಕ್ರಮಗಳಿಗಾಗಿ ಹೋಟೆಲ್ಗಳನ್ನು ಕಾಯ್ದಿರಿಸುವುದು, ಊಟೋಪಚಾರ, ಅಮೆರಿಕ ದೇಶದ ಮೂಲೆಮೂಲೆಗಳಿಗೆ ಸಮ್ಮೇಳನದ ಬಗ್ಗೆ ಮಾಹಿತಿ ರವಾನಿಸಲು ಪ್ರಚಾರ ಕಾರ್ಯ, ಸ್ಥಳೀಯ ಹಾಗೂ ಭಾರತದಿಂದ ಕರೆಸಲಾಗುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಕಲಾವಿದರ ಪಟ್ಟಿ ತಯಾರಿಕೆ, ಸಮ್ಮೇಳನದಲ್ಲಿ ಭಾಗವಹಿಸುವವರಿಗಾಗಿ ವಸತಿ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಅಗತ್ಯ ಮಾಹಿತಿಗಳನ್ನು ನೀಡುವುದಕ್ಕಾಗಿ ಸ್ವಾಗತ ಸಮಿತಿ ರಚನೆ, ಖರ್ಚು ವೆಚ್ಚ ನಿರ್ವಹಣೆಗಾಗಿ ಹಣಕಾಸು ಸಮಿತಿ ರಚನೆ ಹೀಗೆ ಏಕಕಾಲಕ್ಕೆ ಸಕಲ ಕಾರ್ಯಗಳು ಆರಂಭಗೊಂಡಿವೆ.

ಸಿನಿ ತಾರೆ ಗೋಲ್ಡನ್ ಸ್ಟಾರ್ ಗಣೇಶ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಇವರ ಆಗಮನ ಬಹುತೇಕ ಖಚಿತವಾಗಿದೆ ಎಂದು ನಾವಿಕದ ಸಂಚಾಲಕರಾದ ವಲ್ಲೀಶ ಶಾಸ್ತ್ರೀ ತಿಳಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವುದಕ್ಕಾಗಿ ಭಾರತದ ಕೆಲವು ಗಾಯಕ ಗಾಯಕಿಯರನ್ನೂ ಆಹ್ವಾನಿಸಲಾಗಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ ಎಂದು ಅವರು ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದರು.

ಇದೇ ವೇಳೆ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಖ್ಯಾತ ನೃತ್ಯ ಜೋಡಿ ನಿರುಪಮ - ರಾಜೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರು ಸಮ್ಮೇಳನದಲ್ಲಿ ಕಾಯಕ್ರಮ ನೀಡಲು ಒಪ್ಪಿಕೊಂಡಿದ್ದಾರೆ.
ಈಗಾಗಲೇ ನೋಂದಣೆ ಶುರುವಾಗಿದ್ದು ಅರ್ಲಿ ಬರ್ಡ್ (ಮುಂಗಡವಾಗಿ ಕಾಯ್ದಿರಿದುವಿಕೆ) ಟೆಕೆಟ್ ಕೊಳ್ಳುವವರಿಗಾಗಿ ವಿಶೇಷ ರಿಯಾಯಿತಿಯನ್ನೂ ನೀಡಲಾಗಿದೆ. ಇದರ ಸದುಪಯೋಗ ಪಡೆಸಿಕೊಳ್ಳುವಂತೆ ನಾವಿಕ ಅಧ್ಯಕ್ಷರಾದ ಸುರೇಶ್ ರಾಮಚಂದ್ರ ಕೋರಿದ್ದಾರೆ.

ಸಮ್ಮೇಳನಾಧ್ಯಕ್ಷ ಡಾ.ಮನಮೋಹನ್ ಕಟಪಾಡಿ, ಸಮ್ಮೇಳನ ಉಪಾಧ್ಯಕ್ಷ ಡಾ.ಸುರೇಶ್ ಶ್ರಾಫ್, ಸಹ ಸಂಚಾಲಕ ಅರುಣ್ ಕುಮಾರ್, ಪುಷ್ಮಲತಾ ನವೀನ್ ಮತ್ತು ಅರುಡಿ ರಾಜಗೋಪಾಲ್ ಸಮ್ಮೇಳನದ ನೇತೃತ್ವ ವಹಿಸಿಕೊಂಡಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications