ಅಕ್ಕ ಸಮ್ಮೇಳನಕ್ಕೆ ಆರಂಭಿಕ ದರದ ವಿಶೇಷ ಕೊಡುಗೆ
ಅಮೆರಿಕಾದ ಪಶ್ಚಿಮ ಕರಾವಳಿಯಲ್ಲಿರುವ ಸ್ಯಾನ್ ಫ್ರಾನ್ಸಿಸ್ಕೋ ಬೇ ಏರಿಯಾದಲ್ಲಿ ನಡೆಯಲಿರುವ 8ನೇ 'ಅಕ್ಕ' ವಿಶ್ವ ಕನ್ನಡ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆಗಳು ಸಾಗುತ್ತಿರುವಂತೆ, ನೋಂದಾವಣಿಯೂ ಸಾಕಷ್ಟು ವೇಗದ ಗತಿಯಲ್ಲಿ ಸಾಗುತ್ತಿದೆ. ಉತ್ತರ ಕ್ಯಾಲಿಫೋರ್ನಿಯಾ ಕನ್ನಡ ಕೂಟದ ಆಶ್ರಯದಲ್ಲಿ ಮೂರು ದಿನಗಳ ಜಾಗತಿಕ ಕನ್ನಡ ಸಮ್ಮೇಳನ ಜರುಗಲಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಈ ಸಮ್ಮೇಳನದ ಬ್ರಾಂಡ್ ಅಂಡಾಸಡರ್ ಆಗಿದ್ದು, ಸ್ಯಾನ್ ಹೋಸೆ ನಗರದ ಪ್ರತಿಷ್ಠಿತ ಮೆಕೆನ್ರಿ ಸಭಾಂಗಣದಲ್ಲಿ ಆಗಸ್ಟ್ 29ರಿಂದ 31ರವರೆಗೆ ನಡೆಯಲಿರುವ ಎಂಟನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನಕ್ಕೆ ನೋಂದಣಿ ಪ್ರಕ್ರಿಯೆಯನ್ನು ಸಂಕ್ರಾಂತಿಯ ಶುಭದಿನ ಜನವರಿ 14ರಿಂದ ಆರಂಭಿಸಲಾಯಿತು.
ಪ್ರತಿ ಸಮ್ಮೇಳನದಂತೆ ಮೊದಲು ನೋಂದಾವಣಿ ಮಾಡಿಕೊಂಡವರಿಗೆ ಭರ್ಜರಿ ರಿಯಾಯಿತಿಯನ್ನೂ ನೀಡಲಾಗುತ್ತಿದೆ. ಆರಂಭಿಕ ಆಹ್ವಾನದ ನೋಂದಾವಣಿ ಮಾರ್ಚ್ 1ನೇ ತಾರೀಖಿನಂದು ಕೊನೆಗೊಳ್ಳುತ್ತಿದ್ದು, ಈ ಅವಧಿಯೊಳು ನೋಂದಾಯಿಸಿಕೊಂಡರು ಇದರ ಲಾಭ ಪಡೆಯಬಹುದಾಗಿದೆ. ಕೇವಲ 159 ಡಾಲರ್ ನೀಡಿ ವಯಸ್ಕರು ಮತ್ತು ಕೇವಲ 99 ಡಾಲರ್ ನೀಡಿ ಮಕ್ಕಳು ನೋಂದಾಯಿಸಿಕೊಳ್ಳಬಹುದು.

ಆರಂಭಿಕ ಆಹ್ವಾನವನ್ನು ಪಡೆದವರು ಬಿಸಿನೆಸ್ ಫೋರಂನಂಥ ಕೆಲವೊಂದು ಕಾರ್ಯಕ್ರಮಗಳನ್ನು ಹೊರತುಪಡಿಸಿ, ಮೂರು ದಿನಗಳ ಕಾಲ ಎಲ್ಲ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದು. ಜೊತೆಗೆ ಸುಖ್ರಾಸ ಭೋಜನವನ್ನೂ ಸವಿಯಬಹುದು. ಇದರಲ್ಲಿ ವೈಯಕ್ತಿಕ, ಕೌಟುಂಬಿಕ, ಟಿಕೆಟ್ ಇರುವಂಥ ಕಾರ್ಯಕ್ರಮ ಮತ್ತು ದೇಣಿಗೆ ನೀಡುವವರ ಆಫರುಗಳು ಪ್ರತ್ಯೇಕವಾಗಿವೆ. [ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ]
ಸಂಚಾಲಕ ಸುರೇಶ್ ಬಾಬು ಹೇಳುವಂತೆ, "ಸಮ್ಮೇಳನಕ್ಕೆ ನೋಂದಾಯಿಸಿಕೊಳ್ಳಲು ಬಯಸುವ ಕನ್ನಡಿಗರೆಲ್ಲರಿಗೂ ನಮ್ಮ ಸಮಿತಿಯು ಅತ್ಯಂತ ಆಕರ್ಷಕ ಪ್ಯಾಕೇಜ್ ಗಳನ್ನು ತಯಾರಿಸುವಲ್ಲಿ ಬಹಳ ಮುತುವರ್ಜಿ ವಹಿಸಿ ಕೆಲಸ ಮಾಡಿ, ವಿಶೇಷ ಪಾರಿವಾರಿಕ ಹಾಗೂ ವೈಯಕ್ತಿಕ ದರಗಳನ್ನು ನಿಗದಿಪಡಿಸಿದ್ದಾರೆ. ಇವು ಅಮೇರಿಕದಲ್ಲಿರುವ ಹಾಗೂ ಹೊರನಾಡಿನ ಕನ್ನಡಿಗರೆಲ್ಲರನ್ನೂ ಆಕರ್ಷಿಸುವುದು ಖಂಡಿತ. ಅದರಲ್ಲೂ ನಮ್ಮ 'ಆರಂಭಿಕ ವಿಶೇಷ ದರ'ಗಳಂತೂ ಸಮ್ಮೇಳನ ಹಾಗೂ ವಸತಿ ಇವೆರಡರ ನೋಂದಣಿಗೂ ಬಹಳ ಆಕರ್ಷಕವಾಗಿವೆ.
ಇವುಗಳ ಜೊತೆಗೆ, ಇಲ್ಲಿನ ಪ್ರೇಕ್ಷಣೀಯ ಸ್ಥಳಗಳನ್ನು ನೋಡಲು ಇಚ್ಛಿಸುವವರಿಗೋಸ್ಕರ ನಾವು ಹಲವಾರು ಅನುಕೂಲಕರ 'ಟ್ರಾವೆಲ್ ಪ್ಯಾಕೇಜ್'ಗಳನ್ನೂ ಸಹ ತಯಾರಿಸಿದ್ದೇವೆ. ಇದೇ ಮೊದಲ ಬಾರಿಗೆ ನಮ್ಮ ಸ್ಯಾನ್ ಫ್ರಾನ್ಸಿಸ್ಕೋ ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಈ ಅಕ್ಕ ವಿಶ್ವ ಕನ್ನಡ ಸಮ್ಮೇಳನವನ್ನು ಮರೆಯಲಾಗದ ಮಧುರ ಅನುಭವವಾಗಿ ಕಟ್ಟಿಕೊಡಲು ಉತ್ಸುಕರಾಗಿದ್ದೇವೆ ಎಂದು ಸುರೇಶ್ ಬಾಬು ಅವರು ಒನ್ಇಂಡಿಯಾ ಕನ್ನಡಕ್ಕೆ ಹೇಳಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications