ಮುಖ್ಯಪುಟ
 » 
ದಿನೇಶ ಗುಂಡೂರಾವ್

ದಿನೇಶ ಗುಂಡೂರಾವ್

ದಿನೇಶ ಗುಂಡೂರಾವ್

ದಿನೇಶ್ ಗುಂಡೂರಾವ್ ಕರ್ನಾಟಕ ಕಾಂಗ್ರೆಸ್‌ನ ನಾಯಕ. ಬೆಂಗಳೂರು ನಗರದ ಗಾಂಧಿನಗರ ಕ್ಷೇತ್ರದ ಶಾಸಕರು.

ದಿನೇಶ ಗುಂಡೂರಾವ್ ಜೀವನ ಚರಿತ್ರೆ

ದಿನೇಶ್ ಗುಂಡೂರಾವ್ ಕರ್ನಾಟಕ ಕಾಂಗ್ರೆಸ್‌ನ ನಾಯಕ. ಬೆಂಗಳೂರು ನಗರದ ಗಾಂಧಿನಗರ ಕ್ಷೇತ್ರದ ಶಾಸಕರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪುತ್ರ.

ಇಂಜಿನಿಯರಿಂಗ್ ಪದವೀಧರರಾದ ದಿನೇಶ್ ಗುಂಡೂರಾವ್ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದರು. ಯವ ಕಾಂಗ್ರೆಸ್ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

1999ರಲ್ಲಿ ಮೊದಲ ಬಾರಿಗೆ ದಿನೇಶ್ ಗುಂಡೂರಾವ್ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರು. 15,634 ಮತಗಳನ್ನು ಪಡೆದು ಜಯಗಳಿಸಿ ವಿಧಾನಸಭೆ ಪ್ರವೇಶಿಸಿದರು.

2004, 2008, 2013 ಮತ್ತು 2018ರ ಚುನಾವಣೆಯಲ್ಲಿಯೂ ದಿನೇಶ್ ಗುಂಡೂರಾವ್ ಗಾಂಧಿನಗರ ಕ್ಷೇತ್ರದಿಂದ ಜಯಗಳಿಸಿದ್ದಾರೆ. 2013ರ ಚುನಾವಣೆಯಲ್ಲಿ ಗೆದ್ದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರಾಗಿದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಯಿತು.

ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಇವರು ಮುಸ್ಲಿಂ ಸಮುದಾಯದ ತಬು ರಾವ್ ವಿವಾಹವಾಗಿದ್ದಾರೆ. ಎಐಸಿಸಿ ಮಟ್ಟದಲ್ಲಿಯೂ ಉತ್ತಮ ಪ್ರಭಾವ ಹೊಂದಿರುವ ದಿನೇಶ್ ಗುಂಡೂರಾವ್ ರಾಹುಲ್ ಗಾಂಧಿ ಆಪ್ತರು. ಗೋವಾ, ಪಾಂಡಿಚೇರಿ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ಸಹ ಆಗಿದ್ದಾರೆ.

ಮತ್ತಷ್ಟು ಓದು
By Moumi Majumdar Updated: Thursday, August 25, 2022, 06:06:36 PM [IST]

ದಿನೇಶ ಗುಂಡೂರಾವ್ ವಯಕ್ತಿಕ ಜೀವನ

ಪೂರ್ಣ ಹೆಸರು ದಿನೇಶ ಗುಂಡೂರಾವ್
ಜನ್ಮ ದಿನಾಂಕ 09 Oct 1969 (ವಯಸ್ಸು 54)
ಹುಟ್ಟಿದ ಸ್ಥಳ ಕುಶಾಲನಗರ, ಕೂರ್ಗ್
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ Graduate Professional
ಉದ್ಯೋಗ ಶಾಸಕ
ತಂದೆಯ ಹೆಸರು ಆರ್. ಗುಂಡೂರಾವ್
ತಾಯಿಯ ಹೆಸರು ವರಲಕ್ಷ್ಮಿ ಗುಂಡೂರಾವ್
ಧರ್ಮ ಹಿಂದು
ಜಾತಿ ಬ್ರಾಹ್ಮಣ
ಸಾಮಾಜಿಕ ಜಾಲತಾಣದ ವಿಳಾಸ ಸಾಮಾಜಿಕ ಜಾಲತಾಣದ ವಿಳಾಸ:

ದಿನೇಶ ಗುಂಡೂರಾವ್ ಒಟ್ಟು ಆಸ್ತಿ

ಒಟ್ಟು ಆಸ್ತಿ: ₹41.75 CRORE
ಆಸ್ತಿ:₹48.07 CRORE
ಸಾಲಸೋಲ: ₹6.32 CRORE

ದಿನೇಶ ಗುಂಡೂರಾವ್ ಕುರಿತು ಆಸಕ್ತಿದಾಯಕ ಸಂಗತಿಗಳು

ಮಾಜಿ ಮುಖ್ಯಮಂತ್ರಿ ದಿನೇಶ್ ಗುಂಡೂರಾವ್ ಪುತ್ರ

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ

ವಿವಿಧ ರಾಜ್ಯಗಳ ಚುನಾವಣಾ ಉಸ್ತುವಾರಿಯಾಗಿರುವ ಕರ್ನಾಟಕದ ಕಾಂಗ್ರೆಸ್ ನಾಯಕ

ಇವರು ಸಚಿವರಾಗಿದ್ದಾಗಲೇ ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು.

ದಿನೇಶ ಗುಂಡೂರಾವ್ ರಾಜಕೀಯ ಟೈಮ್‌ಲೈನ್

2018
  • ಚುನಾವಣೆಯಲ್ಲಿ ಗೆದ್ದು 5ನೇ ಬಾರಿಗೆ ಶಾಸಕರಾದರು. ಜುಲೈ 11ರಂದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾದರು.
2013
  • ವಿಧಾನಸಭೆ ಚುನಾವಣೆಯಲ್ಲಿ ಗೆಲುವು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರಾದರು.
2008
  • ವಿಧಾನಸಭೆ ಚುನಾವಣೆಯಲ್ಲಿ 41,188 ಮತಗಳನ್ನು ಪಡೆದು ಮತ್ತೆ ಗೆಲುವು.
2004
  • ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಮತ್ತೊಮ್ಮೆ ಗೆಲುವು
1999
  • ಮೊದಲ ಬಾರಿಗೆ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ, ಗೆಲುವು
1998
  • ಕರ್ನಾಟಕ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾದರು.

Disclaimer: The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X