ದಿನೇಶ್ ಗುಂಡೂರಾವ್ ಕರ್ನಾಟಕ ಕಾಂಗ್ರೆಸ್ನ ನಾಯಕ. ಬೆಂಗಳೂರು ನಗರದ ಗಾಂಧಿನಗರ ಕ್ಷೇತ್ರದ ಶಾಸಕರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪುತ್ರ.
ಇಂಜಿನಿಯರಿಂಗ್ ಪದವೀಧರರಾದ ದಿನೇಶ್ ಗುಂಡೂರಾವ್ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದರು. ಯವ ಕಾಂಗ್ರೆಸ್ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.
1999ರಲ್ಲಿ ಮೊದಲ ಬಾರಿಗೆ ದಿನೇಶ್ ಗುಂಡೂರಾವ್ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರು. 15,634 ಮತಗಳನ್ನು ಪಡೆದು ಜಯಗಳಿಸಿ ವಿಧಾನಸಭೆ ಪ್ರವೇಶಿಸಿದರು.
2004, 2008, 2013 ಮತ್ತು 2018ರ ಚುನಾವಣೆಯಲ್ಲಿಯೂ ದಿನೇಶ್ ಗುಂಡೂರಾವ್ ಗಾಂಧಿನಗರ ಕ್ಷೇತ್ರದಿಂದ ಜಯಗಳಿಸಿದ್ದಾರೆ. 2013ರ ಚುನಾವಣೆಯಲ್ಲಿ ಗೆದ್ದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರಾಗಿದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಯಿತು.
ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಇವರು ಮುಸ್ಲಿಂ ಸಮುದಾಯದ ತಬು ರಾವ್ ವಿವಾಹವಾಗಿದ್ದಾರೆ. ಎಐಸಿಸಿ ಮಟ್ಟದಲ್ಲಿಯೂ ಉತ್ತಮ ಪ್ರಭಾವ ಹೊಂದಿರುವ ದಿನೇಶ್ ಗುಂಡೂರಾವ್ ರಾಹುಲ್ ಗಾಂಧಿ ಆಪ್ತರು. ಗೋವಾ, ಪಾಂಡಿಚೇರಿ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ಸಹ ಆಗಿದ್ದಾರೆ.
Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.