ಕರ್ನಾಟಕ ರಾಜಕೀಯ ರಂಗದ ಅತ್ಯಂತ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿರುವ ಮುನಿಯಪ್ಪ ಸುದೀರ್ಘ ರಾಜಕೀಯ ಜೀವನದ ಅನುಭವ ಹೊಂದಿದ್ದಾರೆ. 1960 ರಲ್ಲಿ ತಮ್ಮ ರಾಜಕೀಯ ಜೀವನಕ್ಕೆ ಮುನ್ನುಡಿ ಬರೆದ ಇವರು ಇಲ್ಲಿಯವರೆಗೂ ಸಕ್ರಿಯ ರಾಜಕಾರಣದಲ್ಲಿ ಮುಂದುವರೆದಿದ್ದು, ಕೋಲಾರ ಕ್ಷೇತ್ರದಿಂದ ಸತತ ಏಳು ಬಾರಿ ಜಯ ಗಳಿಸಿದ ದಾಖಲೆ ಮಾಡಿದ್ದಾರೆ. ಇವರ ಕ್ಷೇತ್ರದಲ್ಲಿ ಯಾವುದೇ ಎದುರಾಳಿಗಳು ರಾಜಕೀಯದಲ್ಲಿ ಇವರನ್ನು ಸೋಲಿಸಲು ಸಾಧ್ಯವಾಗಿಲ್ಲ. 1991 ರಿಂದ ಕೋಲಾರ ಲೋಕಸಭಾ ಕ್ಷೇತ್ರದ ಮೇಲೆ ಪ್ರಬಲ ಹಿಡಿತ ಸಾಧಿಸಿರುವ ಮುನಿಯಪ್ಪ ಅಂದಿನಿಂದ ಇಲ್ಲಿಯವರೆಗೆ ಸತತವಾಗಿ ಏಳು ಬಾರಿ ಸಂಸದರಾಗಿ ಚುನಾಯಿತರಾಗಿದ್ದಾರೆ. ಕೇಂದ್ರದ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ರಾಜ್ಯ ದರ್ಜೆ ಸಚಿವರಾಗಿ ಕೆಲಸ ಮಾಡಿದ್ದಾರೆ. 2009ರ ಮೇ 28 ರಂದು ಆಗಿನ ರಾಷ್ಟ್ರಪತಿ ಪ್ರತಿಭಾ ಪಾಟೀಲರಿಂದ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಸಂಪುಟದ ಸಚಿವರಾಗಿದ್ದರು.
| ಪೂರ್ಣ ಹೆಸರು | ಕೆ.ಎಚ್. ಮುನಿಯಪ್ಪ |
| ಜನ್ಮ ದಿನಾಂಕ | 07 Mar 1948 (ವಯಸ್ಸು 78) |
| ಹುಟ್ಟಿದ ಸ್ಥಳ | ಕಂಬದಹಳ್ಳಿ, ಕೋಲಾರ ಜಿಲ್ಲೆ, ಕರ್ನಾಟಕ |
| ಪಕ್ಷದ ಹೆಸರು | Indian National Congress |
| ವಿದ್ಯಾರ್ಹತೆ | Graduate Professional |
| ಉದ್ಯೋಗ | ವಕೀಲ, ಸಾಮಾಜಿಕ ಕಾರ್ಯಕರ್ತ |
| ತಂದೆಯ ಹೆಸರು | ದಿವಂಗತ ಶ್ರೀ ಹನುಮಪ್ಪ |
| ತಾಯಿಯ ಹೆಸರು | ದಿವಂಗತ ಶ್ರೀಮತಿ ವೆಂಕಟಮ್ಮ |
| ಅವಲಂಬಿತರ ಹೆಸರು | ಶ್ರೀಮತಿ ನಾಗರತ್ನಮ್ಮ |
| ಅವಲಂಬಿತರ ಉದ್ಯೋಗ | ವ್ಯಾಪಾರೋದ್ಯಮಿ |
| ಮಕ್ಕಳು | 1 ಪುತ್ರ(ರು) 4 ಪುತ್ರಿ(ಯರು) |
| ಧರ್ಮ | ಹಿಂದು |
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.