ಪ್ರಹ್ಲಾದ ಜೋಶಿ ಮೂಲತಃ ಓರ್ವ ಕೈಗಾರಿಕೋದ್ಯಮಿ. 1992 ರಿಂದ 94 ರ ಅವಧಿಯಲ್ಲಿ ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ಮೈದಾನ ಅಥವಾ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವ ಚಳವಳಿಯ ಮುಂಚೂಣಿ ವಹಿಸುವ ಮೂಲಕ ರಾಜಕೀಯವಾಗಿ ಮುನ್ನೆಲೆಗೆ ಬಂದರು. ಇದರ ನಂತರ ಧಾರವಾಡ ಬಿಜೆಪಿ ಘಟಕದ ಅಧ್ಯಕ್ಷರಾದರು. 2004 ರ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ಸಿನ ಬಿ.ಎಸ್. ಪಾಟೀಲ ಅವರನ್ನು ಸೋಲಿಸಿ 14ನೇ ಲೋಕಸಭೆಯ ಸಂಸದರಾದರು. ಧಾರವಾಡ ಕ್ಷೇತ್ರದಿಂದ ಸತತ ಮೂರು ಬಾರಿ ಸಂಸದರಾಗಿ ಚುನಾಯಿತರಾಗಿರುವ ಜೋಶಿ, ಪ್ರಸ್ತುತ ಕೂಡ ಸಂಸದರಾಗಿದ್ದಾರೆ. 2009 ರ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಎರಡನೇ ಅತಿ ಹೆಚ್ಚು ಮತಗಳ ಅಂತರದಿಂದ ಚುನಾಯಿತರಾದ ಹೆಗ್ಗಳಿಕೆ ಇವರದಾಗಿದೆ.
Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.