ಮುಖ್ಯಪುಟ
 » 
ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ

ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪಕ್ಷದ ಹಿರಿಯ ನಾಯಕ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ. 2013 ಮತ್ತು 2018ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಪ್ರಿಯಾಂಕ್ ಖರ್ಗೆ ಜೀವನ ಚರಿತ್ರೆ

ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪಕ್ಷದ ಹಿರಿಯ ನಾಯಕ, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ. 2013 ಮತ್ತು 2018ರ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನ ಯುವ ನಾಯಕರಲ್ಲಿ ಪ್ರಿಯಾಂಕ್ ಎಂ. ಖರ್ಗೆ ಸಹ ಒಬ್ಬರು. ಬಿಎ ಪದವೀಧರರಾದ ಪ್ರಿಯಾಂಕ್ ಖರ್ಗೆ ಡಿಪಿ ಗ್ರಾಫಿಕ್ಸ್‌, ಡಿಎನ್ ಇನ್ ಅನಿಮೇಷನ್ ವ್ಯಾಸಂಗ ಮಾಡಿದ್ದಾರೆ.

2008ರ ತನಕ ಚಿತ್ತಾಪುರ ಕ್ಷೇತ್ರವನ್ನು ಮಲ್ಲಿಕಾರ್ಜುನ ಖರ್ಗೆ ಪ್ರತಿನಿಧಿಸುತ್ತಿದ್ದರು. ಅವರು ರಾಷ್ಟ್ರ ರಾಜಕೀಯಕ್ಕೆ ತೆರಳಿದ ಮೇಲೆ ಪ್ರಿಯಾಂಕ್ ಖರ್ಗೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2013ರ ಚುನಾವಣೆಯಲ್ಲಿ ಮೊದಲ ಬಾರಿಗೆ ಗೆದ್ದ ಪ್ರಿಯಾಂಕ್ ಖರ್ಗೆ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಿದಾಗ ಸಚಿವರಾದರು. ಐಟಿ & ಬಿಟಿ ಖಾತೆಯನ್ನು ನೀಡಲಾಯಿತು. 2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದರು.

ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿಯೇ ಎನ್‌ಎಸ್‌ಯುಐ ಸೇರಿದ್ದ ಪ್ರಿಯಾಂಕ್ ಖರ್ಗೆ ಬಳಿಕ ರಾಜಕೀಯಕ್ಕೆ ಬಂದರು. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಯೂ ನೇಮಕಗೊಂಡರು. ಪ್ರಸ್ತುತ ಕೆಪಿಸಿಸಿ ಸಾಮಾಜಿಕ ಜಾಲತಾಣ ಹಾಗೂ ಸಂವಹನ ವಿಭಾಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಮತ್ತಷ್ಟು ಓದು
By Moumi Majumdar Updated: Thursday, August 25, 2022, 12:00:15 PM [IST]

ಪ್ರಿಯಾಂಕ್ ಖರ್ಗೆ ವಯಕ್ತಿಕ ಜೀವನ

ಪೂರ್ಣ ಹೆಸರು ಪ್ರಿಯಾಂಕ್ ಖರ್ಗೆ
ಜನ್ಮ ದಿನಾಂಕ 22 Nov 1978 (ವಯಸ್ಸು 45)
ಹುಟ್ಟಿದ ಸ್ಥಳ ಗುಲಬರ್ಗಾ, ಕರ್ನಾಟಕ
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ 12th Pass
ಉದ್ಯೋಗ ಉದ್ಯಮಿ
ತಂದೆಯ ಹೆಸರು ಮಲ್ಲಿಕಾರ್ಜುನ ಖರ್ಗೆ
ತಾಯಿಯ ಹೆಸರು ರಾಧಾಬಾಯಿ ಖರ್ಗೆ
ಧರ್ಮ ಹಿಂದು
ಜಾತಿ ದಲಿತ
ಸಾಮಾಜಿಕ ಜಾಲತಾಣದ ವಿಳಾಸ ಸಾಮಾಜಿಕ ಜಾಲತಾಣದ ವಿಳಾಸ:

ಪ್ರಿಯಾಂಕ್ ಖರ್ಗೆ ಒಟ್ಟು ಆಸ್ತಿ

ಒಟ್ಟು ಆಸ್ತಿ: ₹16.54 CRORE
ಆಸ್ತಿ:₹16.83 CRORE
ಸಾಲಸೋಲ: ₹28.75 LAKHS

ಪ್ರಿಯಾಂಕ್ ಖರ್ಗೆ ಕುರಿತು ಆಸಕ್ತಿದಾಯಕ ಸಂಗತಿಗಳು

ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪುತ್ರ

ಮೊದಲ ಬಾರಿಗೆ ಚುನಾವಣೆಯಲ್ಲಿ ಗೆದ್ದ ಅವರಿಗೆ ಸಚಿವರಾಗುವ ಅವಕಾಶ ಸಿಕ್ಕಿತು

2016ರಲ್ಲಿ ಸಚಿವರಾದಾಗ ಸಚಿವ ಸಂಪುಟದಲ್ಲಿದ್ದ ಅತಿ ಕಿರಿಯ ವಯಸ್ಸಿನ ಸಚಿವರಾಗಿದ್ದರು.

ಪ್ರಿಯಾಂಕ್ ಖರ್ಗೆ ರಾಜಕೀಯ ಟೈಮ್‌ಲೈನ್

2022
  • ಜುಲೈನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಾಮಾಜಿಕ ಜಾಲತಾಣ ಹಾಗೂ ಸಂವಹನ ವಿಭಾಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
2018
  • 69,700 ಮತಗಳನ್ನು ಪಡೆದು ಮತ್ತೆ ಶಾಸಕರಾಗಿ ಆಯ್ಕೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಸಚಿವ ಸ್ಥಾನ
2016
  • ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಿದಾಗ ಸಚಿವ ಸಂಪುಟಕ್ಕೆ ಸೇರ್ಪಡೆ. ಐಟಿ & ಬಿಟಿ ಖಾತೆ ಹೊಣೆ
2013
  • ಮೊದಲ ಬಾರಿಗೆ ಚುನಾವಣೆಯಲ್ಲಿ ಗೆಲುವು. 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಕೆಲಸ.

ಹಿಂದಿನ ಇತಿಹಾಸ

2022
  • ಜುಲೈನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಾಮಾಜಿಕ ಜಾಲತಾಣ ಹಾಗೂ ಸಂವಹನ ವಿಭಾಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
2018
  • 69,700 ಮತಗಳನ್ನು ಪಡೆದು ಮತ್ತೆ ಶಾಸಕರಾಗಿ ಆಯ್ಕೆ. ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಸಚಿವ ಸ್ಥಾನ
2016
  • ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನಾರಚನೆ ಮಾಡಿದಾಗ ಸಚಿವ ಸ್ಥಾನ. ಐಟಿ &ಬಿಟಿ ಸಚಿವರಾಗಿ ಕಾರ್ಯ ನಿರ್ವಹಣೆ.

Disclaimer: The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X