ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಯಮಕನಮರಡಿ (ಎಸ್ಸಿ) ಕ್ಷೇತ್ರದ ಕಾಂಗ್ರೆಸ್ ಶಾಸಕ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು.
ಸತೀಶ್ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ವಾಲ್ಮೀಕಿ (ಬೇಡರ) ಸಮುದಾಯಕ್ಕೆ ಸೇರಿದ ಇವರು ದ್ವಿತೀಯ ಪಿಯುಸಿ ತನಕ ವ್ಯಾಸಂಗ ಮಾಡಿದ್ದಾರೆ.
ಸತೀಶ್ ಜಾರಕಿಹೊಳಿ 1998 ರಿಂದ 2004ರ ತನಕ ವಿಧಾನ ಪರಿಷತ್ ಸದಸ್ಯರಾಗಿದ್ದರು. 2004 ರಿಂದ 2008ರ ತನಕ ಸಹ ಪರಿಷತ್ ಸದಸ್ಯರಾಗಿದ್ದರು. 2004ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಮುಖ್ಯಮಂತ್ರಿ ಧರಂಸಿಂಗ್ ಸಂಪುಟದಲ್ಲಿ ಸತೀಶ್ ಜಾರಕಿಹೊಳಿ ಜವಳಿ (ಸ್ವತಂತ್ರ ಖಾತೆ) ರಾಜ್ಯ ಸಚಿವ ಸ್ಥಾನ ಸಿಕ್ಕಿತ್ತು.
2008ರ ಚುನಾವಣೆಯಲ್ಲಿ 46,132 ಮತಗಳನ್ನು ಪಡೆದು ಯಮಕನಮರಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಗೊಂಡರು. 2013ರ ಚುನಾವಣೆಯಲ್ಲಿಯೂ 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ 2013ರಿಂದ 2015ರ ತನಕ ಅಬಕಾರಿ ಸಚಿವರಾಗಿ ಕೆಲಸ ಮಾಡಿದರು. 2015 ರಿಂದ 2016ರ ತನಕ ಸಣ್ಣ ಕೈಗಾರಿಕಾ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದರು.
2018ರ ಚುನಾವಣೆಯಲ್ಲಿ 73,512 ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದಾರೆ. 2021ರ ಜನವರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ ನೇಮಕಗೊಂಡಿದ್ದಾರೆ.
ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿ ಶಾಸಕರು, ಮಾಜಿ ಸಚಿವರು. ಮತ್ತೊಬ್ಬ ಸಹೋದರ ಲಖನ್ ಜಾರಕಿಹೊಳಿ ಸಹ ರಾಜಕೀಯಕ್ಕೆ ಬಂದಿದ್ದು, ಪಕ್ಷೇತರ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.
Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.