ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಬಿಜೆಪಿ ಶಾಸಕರು ಶಂಕರ ಪಾಟೀಲ ಮುನೇನಕೊಪ್ಪ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕೈಮಗ್ಗ ಮತ್ತು ಜವಳಿ ಸಚಿವ ಖಾತೆ ಸಚಿವರು.
ಲಿಂಗಾಯತ (ಪಂಚಮಸಾಲಿ) ಸಮುದಾಯಕ್ಕೆ ಸೇರಿದ ಶಂಕರ ಪಾಟೀಲ ಮುನೇನಕೊಪ್ಪ ಎರಡನೇ ಬಾರಿಗೆ ಶಾಸಕರಾಗಿದ್ದಾರೆ. ಮೊದಲ ಬಾರಿಗೆ ಸಚಿವರಾಗಿದ್ದಾರೆ.
2018ರ ಚುನಾವಣೆಯಲ್ಲಿ 65,178 ಮತಗಳನ್ನು ಪಡೆದು ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2013ರ ಚುನಾವಣೆಯಲ್ಲಿಯೂ ಅವರು ಕಣಕ್ಕಿಳಿದಿದ್ದರು. ಆದರೆ 41,779 ಮತಗಳನ್ನು ಪಡೆದು ಜೆಡಿಎಸ್ನ ಎನ್. ಎಚ್. ಕೋನರಡ್ಡಿ ವಿರುದ್ಧ ಸೋಲು ಕಂಡಿದ್ದರು.
2008ರ ಚುನಾವಣೆಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ಬಿಜೆಪಿ ಅಭ್ಯರ್ಥಿಯಾಗಿ ನವಲಗುಂದ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. 49,436 ಮತಗಳನ್ನು ಪಡೆದು ಮೊದಲ ಬಾರಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಅಧ್ಯಕ್ಷರಾಗಿಯೂ ಶಂಕರ ಪಾಟೀಲ ಮುನೇನಕೊಪ್ಪ ಕೆಲಸ ನಿರ್ವಹಣೆ ಮಾಡಿದ್ದಾರೆ.
Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.