ವಿಜಯಪುರದಲ್ಲಿ ಹುಟ್ಟಿ ಬೆಳೆದ ಶಿವಾನಂದ ಪಾಟೀಲರು ಯುವಕರಾಗಿದ್ದಾನಿಂದಲೇ ರಾಜಕೀಯ ರಂಗದತ್ತ ಆಕರ್ಷಿತರಾಗಿದ್ದರು. 1992 ರಲ್ಲಿ ಬಿಜಾಪುರ ಡಿಸಿಸಿ (ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್) ಬ್ಯಾಂಕಿನ ಅಧ್ಯಕ್ಷರಾಗಿ ಚುನಾಯಿತರಾದಾಗ ಇವರು ಸ್ಥಳೀಯ ರಾಜಕಾರಣದಲ್ಲಿ ಮೂಚೂಣಿಗೆ ಬಂದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದ ತಿಕೋಟಾ ಶಾಸಕ ಬಿ.ಎಂ. ಪಾಟೀಲ ಅವರ ನಿಧನದಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಜೆಡಿಎಸ್ ಅಭ್ಯರ್ಥಿಯಾಗಿ ತಿಕೋಟಾ ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ ಶಿವಾನಂದ ಪಾಟೀಲರು ಎಂ.ಬಿ. ಪಾಟೀಲ (ಬಿ.ಎಂ. ಪಾಟೀಲರ ಮಗ) ಅವರ ವಿರುದ್ಧ ಸೋಲನುಭವಿಸಿದರು. ಆದರೆ ತದನಂತರ 1994 ಹಾಗೂ 1999 ಎರಡೂ ಚುನಾವಣೆಗಳಲ್ಲಿ ಎಂ.ಬಿ. ಪಾಟೀಲರನ್ನು ಸೋಲಿಸಿ ಸೇಡು ತೀರಿಸಿಕೊಂಡರು. 1999 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶಿವಾನಂದ ಪಾಟೀಲ 2004 ರ ಚುನಾವಣೆಗೂ ಮುನ್ನ ಆಗಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಕರೆಗೆ ಓಗೊಟ್ಟು ಕಾಂಗ್ರೆಸ್ ಸೇರಿ ಬಸವನ ಬಾಗೇವಾಡಿ ಕ್ಷೇತ್ರದಿಂದ ಕಣಕ್ಕಿಳಿದರು. ಪ್ರಸ್ತುತ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಇವರು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವರಾಗಿದ್ದಾರೆ. ಇವರ ಸಹೋದರ ವಿಜುಗೌಡ ಪಾಟೀಲರು ಸಹ ರಾಜಕೀಯದಲ್ಲಿದ್ದು ಅವರು ಬಿಜೆಪಿಯ ಸದಸ್ಯರಾಗಿದ್ದಾರೆ.
Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.