Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯ

ಸಿದ್ದರಾಮಯ್ಯ
ಸಿದ್ದರಾಮಯ್ಯ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು. 2013 ರಿಂದ 2018ರ ತನಕ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.
By Rashmi | Friday, August 19, 2022, 04:03:23 PM [IST]

ಸಿದ್ದರಾಮಯ್ಯ ಜೀವನ ಚರಿತ್ರೆ

ಸಿದ್ದರಾಮಯ್ಯ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು. 2013 ರಿಂದ 2018ರ ತನಕ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು.

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಸಿದ್ದರಾಮಯ್ಯ 2019ರಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು. ವಿರೋಧ ಪಕ್ಷದ ನಾಯಕರಾಗಿ ಸದನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದಲ್ಲಿ ಸಿದ್ದರಾಮಯ್ಯ ನಿಸ್ಸೀಮರು.

ಮೂಲತಃ ವೃತ್ತಿಯಿಂದ ವಕೀಲರಾದ ಇವರು ಸಮಾಜವಾದಿ ಯುವಜನ ಸಭಾ ಮೂಲಕ ರಾಜಕೀಯಕ್ಕೆ ಬಂದರು. 1978 ರವರೆಗೂ ಇವರು ಜ್ಯೂನಿಯರ್ ಲಾಯರ್ ಆಗಿ ಕೆಲಸ ಮಾಡಿದರು. ಕರ್ನಾಟಕ ವಿಧಾನಸಭೆಯ ಹಲವಾರು ಸ್ಥಾನಗಳಲ್ಲಿ ಸೇವೆ ಸಲ್ಲಿಸಿರುವ ಸಿದ್ದರಾಮಯ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರು.

ಕಾಂಗ್ರೆಸ್ ಸೇರುವ ಮುನ್ನ ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯ ಪಕ್ಷದ ವತಿಯಿಂದ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಎರಡು ವರ್ಷ ಕೆಲಸ ಮಾಡಿದ್ದಾರೆ. ರಾಜ್ಯದ ಬಲಿಷ್ಠ ಕುರುಬ ಸಮುದಾಯಕ್ಕೆ ಸೇರಿದ ಇವರು ಜೆಡಿಎಸ್ ಮುಖಂಡ ಎಚ್.ಡಿ. ದೇವೆಗೌಡರ ವಿರುದ್ಧ ಬಂಡಾಯ ಸಾರಿದ ನಂತರ 2005-06 ರಲ್ಲಿ ಪಕ್ಷದಿಂದ ಉಚ್ಛಾಟಿಸಲ್ಪಟ್ಟರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.

ಮತ್ತಷ್ಟು ಓದು

ಸಿದ್ದರಾಮಯ್ಯ ವಯಕ್ತಿಕ ಜೀವನ

ಪೂರ್ಣ ಹೆಸರು ಸಿದ್ದರಾಮಯ್ಯ
ಜನ್ಮ ದಿನಾಂಕ 12 Aug 1948 (ವಯಸ್ಸು 77)
ಹುಟ್ಟಿದ ಸ್ಥಳ ಮೈಸೂರು
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ Graduate Professional
ಉದ್ಯೋಗ ರಾಜಕಾರಣಿ
ತಂದೆಯ ಹೆಸರು ಸಿದ್ದರಾಮೇಗೌಡ
ತಾಯಿಯ ಹೆಸರು ಬೋರಮ್ಮ ಗೌಡ
ಅವಲಂಬಿತರ ಹೆಸರು ಪಾರ್ವತಿ ಸಿದ್ದರಾಮಯ್ಯ
ಅವಲಂಬಿತರ ಉದ್ಯೋಗ ಹೌಸ್ ವೈಫ್
ಮಕ್ಕಳು 2 ಪುತ್ರ(ರು)
ಧರ್ಮ Atheist

ಸಿದ್ದರಾಮಯ್ಯ ಒಟ್ಟು ಆಸ್ತಿ

ಒಟ್ಟು ಆಸ್ತಿ
₹28.07 CRORE
ಆಸ್ತಿ
₹51.94 CRORE
ಸಾಲಸೋಲ
₹23.86 CRORE

ಸಿದ್ದರಾಮಯ್ಯ ಕುರಿತು ಆಸಕ್ತಿದಾಯಕ ಸಂಗತಿಗಳು

ಸಿದ್ದರಾಮಯ್ಯನವರ ಪಾಲಕರು ತಮ್ಮ ಮಗ ಡಾಕ್ಟರ್ ಆಗಲಿ ಎಂದು ಬಯಸಿದ್ದರು. ಆದರೆ ಇವರು ಮಾತ್ರ ವಕೀಲಿಕೆ ಆರಿಸಿಕೊಂಡರು. ಹಸಿವು ಮುಕ್ತ ರಾಜ್ಯ ಮಾಡುವುದು ಸಿದ್ದರಾಮಯ್ಯನವರ ಪ್ರಮುಖ ಗುರಿಗಳಲ್ಲೊಂದು.

ಈ ನಿಟ್ಟಿನಲ್ಲಿ ಬಡವರಿಗಾಗಿ ಕಡಿಮೆ ದರದಲ್ಲಿ ತಿಂಡಿ ನೀಡುವ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಿದರು. 2018ರಲ್ಲಿ ಮುಖ್ಯಮಂತ್ರಿಯಾಗಿ ಇವರು ತಮ್ಮ 13ನೇ ಬಜೆಟ್ ಮಂಡಿಸಿದ್ದು ದಾಖಲೆಯಾಗಿದೆ.

ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ವಿರುದ್ಧ ಸಮರ ಸಾರಿದ ಇವರು 2010 ರಲ್ಲಿ ಬೆಂಗಳೂರಿನಿಂದ ಬಳ್ಳಾರಿಯವರೆಗೆ 320 ಕಿ. ಮೀ. ಪಾದಯಾತ್ರೆ ಮಾಡಿದರು. ಇದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮೈಲುಗಲ್ಲಾಗಿದೆ.

ಸಿದ್ದರಾಮಯ್ಯ ರಾಜಕೀಯ ಟೈಮ್‌ಲೈನ್

  • 2022 : ಆಗಸ್ಟ್ 3ರಂದು ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಎಂಬ ಸಮಾವೇಶ ಆಯೋಜನೆ ಮಾಡಲಾಗಿತ್ತು. 5 ಲಕ್ಷಕ್ಕೂ ಅಧಿಕ ಜನರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಹಿಂದಿನ ಇತಿಹಾಸ

  • 2019: ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಸಿದ್ದರಾಮಯ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು.

ಸಿದ್ದರಾಮಯ್ಯ ಸಾಧನೆಗಳು

ಡಿ. ದೇವರಾಜ ಅರಸು ನಂತರ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರ್ಣಗೊಳಿಸಿದ ಏಕೈಕ ಮುಖ್ಯಮಂತ್ರಿ ಇವರಾಗಿದ್ದಾರೆ. ಮುಖ್ಯಮಂತ್ರಿಯಾದ ನಂತರ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದರು.

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+