ಸಿದ್ದರಾಮಯ್ಯ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು. 2013 ರಿಂದ 2018ರ ತನಕ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಸಿದ್ದರಾಮಯ್ಯ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು.
ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಸಿದ್ದರಾಮಯ್ಯ 2019ರಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು. ವಿರೋಧ ಪಕ್ಷದ ನಾಯಕರಾಗಿ ಸದನದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವುದಲ್ಲಿ ಸಿದ್ದರಾಮಯ್ಯ ನಿಸ್ಸೀಮರು.
ಮೂಲತಃ ವೃತ್ತಿಯಿಂದ ವಕೀಲರಾದ ಇವರು ಸಮಾಜವಾದಿ ಯುವಜನ ಸಭಾ ಮೂಲಕ ರಾಜಕೀಯಕ್ಕೆ ಬಂದರು. 1978 ರವರೆಗೂ ಇವರು ಜ್ಯೂನಿಯರ್ ಲಾಯರ್ ಆಗಿ ಕೆಲಸ ಮಾಡಿದರು. ಕರ್ನಾಟಕ ವಿಧಾನಸಭೆಯ ಹಲವಾರು ಸ್ಥಾನಗಳಲ್ಲಿ ಸೇವೆ ಸಲ್ಲಿಸಿರುವ ಸಿದ್ದರಾಮಯ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರು.
ಕಾಂಗ್ರೆಸ್ ಸೇರುವ ಮುನ್ನ ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯ ಪಕ್ಷದ ವತಿಯಿಂದ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಎರಡು ವರ್ಷ ಕೆಲಸ ಮಾಡಿದ್ದಾರೆ. ರಾಜ್ಯದ ಬಲಿಷ್ಠ ಕುರುಬ ಸಮುದಾಯಕ್ಕೆ ಸೇರಿದ ಇವರು ಜೆಡಿಎಸ್ ಮುಖಂಡ ಎಚ್.ಡಿ. ದೇವೆಗೌಡರ ವಿರುದ್ಧ ಬಂಡಾಯ ಸಾರಿದ ನಂತರ 2005-06 ರಲ್ಲಿ ಪಕ್ಷದಿಂದ ಉಚ್ಛಾಟಿಸಲ್ಪಟ್ಟರು. ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
| ಪೂರ್ಣ ಹೆಸರು | ಸಿದ್ದರಾಮಯ್ಯ |
| ಜನ್ಮ ದಿನಾಂಕ | 12 Aug 1948 (ವಯಸ್ಸು 77) |
| ಹುಟ್ಟಿದ ಸ್ಥಳ | ಮೈಸೂರು |
| ಪಕ್ಷದ ಹೆಸರು | Indian National Congress |
| ವಿದ್ಯಾರ್ಹತೆ | Graduate Professional |
| ಉದ್ಯೋಗ | ರಾಜಕಾರಣಿ |
| ತಂದೆಯ ಹೆಸರು | ಸಿದ್ದರಾಮೇಗೌಡ |
| ತಾಯಿಯ ಹೆಸರು | ಬೋರಮ್ಮ ಗೌಡ |
| ಅವಲಂಬಿತರ ಹೆಸರು | ಪಾರ್ವತಿ ಸಿದ್ದರಾಮಯ್ಯ |
| ಅವಲಂಬಿತರ ಉದ್ಯೋಗ | ಹೌಸ್ ವೈಫ್ |
| ಮಕ್ಕಳು | 2 ಪುತ್ರ(ರು) |
| ಧರ್ಮ | Atheist |
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.