ಸಿಡಿ ಪ್ರಕರಣ: ಎಸ್ಐಟಿ ಮುಖ್ಯಸ್ಥ ಹುದ್ದೆಯಿಂದ ಸೌಮೇಂದು ಮುಖರ್ಜಿ ನಿರ್ಗಮನ ಯಾಕೆ?
ಬೆಂಗಳೂರು, ಆ. 13: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಪ್ರಕರಣದ ತನಿಖೆ ನಡೆಸಲು ಸರ್ಕಾರ ರಚಿಸಿದ್ದ ತನಿಖಾ ತಂಡದ ಮುಖ್ಯಸ್ಥ ಸೌಮೇಂದು ಮುಖರ್ಜಿ ತಮ್ಮ ಮುಖ್ಯಸ್ಥ ಸ್ಥಾನದಿಂದ ನಿರ್ಗಮಿಸಿದ್ದಾರೆ. ಮುಖ್ಯಸ್ಥರ ಜವಾಬ್ದಾರಿಯನ್ನು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ಹಸ್ತಾಂತರಿಸಿದ್ದಾರೆ.
ಈ ಮೂಲಕ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣದಲ್ಲಿ ದಾಖಲಾಗಿರುವ ಎರಡು ಪ್ರಕರಣ ಅಂತಿಮ ತನಿಖಾ ವರದಿ ಸಲ್ಲಿಸಲು ಎದುರಾಗಿದ್ದ ತೊಡಕು ನಿವಾರಣೆಯಾದಂತಿದೆ. ಈ ಎರಡೂ ಪ್ರಕರಣದಲ್ಲಿ ತನಿಖಾ ತಂಡದ ಮುಖ್ಯಸ್ಥರ ಸಹಿ ಇಲ್ಲದೇ ಸಲ್ಲಿಸಿದ್ದ ಅಂತಿಮ ವರದಿ ಸ್ವೀಕರಿಸಲು ಹೈಕೋರ್ಟ್ ಗರಂ ಆಗಿತ್ತು. ತನಿಖಾ ತಂಡದ ಮುಖ್ಯಸ್ಥರ ಸಹಿಯೇ ಇಲ್ಲದ ವರದಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸೂಚಿಸಿತ್ತು. ವೈಯಕ್ತಿಕ ರಜೆ ಮೇಲೆ ಹೋಗಿದ್ದ ತನಿಖಾ ತಂಡದ ಮುಖ್ಯಸ್ಥರು ಸಹಿ ಹಾಕಿರಲಿಲ್ಲ.
ಅನಾರೋಗ್ಯ ಕಾರಣದಿಂದ ನಾನು ಏಪ್ರಿಲ್ 28 ರಿಂದ ರಜೆಯಲ್ಲಿದ್ದೇನೆ. ಹಾಗಾಗಿ ವೈಯಕ್ತಿಕ ಕಾರಣದಿಂದ ನಾನು ಪ್ರಕರಣದ ತನಿಖಾ ಮಾಹಿತಿ ಪಡೆಯಲಾಗಿಲ್ಲ. ತನಿಖೆ ಹೇಗೆ ನಡೆದಿದೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಅನುಪಸ್ಥಿತಿಯಲ್ಲಿ ತನಿಖೆ ನಡೆದಿದ್ದು, ಇದರ ತನಿಖಾ ವರದಿಯನ್ನು ಹೈಕೋರ್ಟ್ಗೆ ಸಲ್ಲಿಸಬಹುದು. ತನಿಖಾ ವರದಿಯನ್ನು ಹೈಕೋರ್ಟ್ಗೆ ಸಲ್ಲಿಸಲು ಎಸ್ಐಟಿ ತಂಡದ ಅಧಿಕಾರಿಗೆ ಅಧಿಕಾರ ವಹಿಸಿದ್ದೇನೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ತನಿಖಾ ವರದಿ ಸಲ್ಲಿಸಲು ಅನುಮತಿ ನೀಡಿರುವ ಪತ್ರ ಮಾಧ್ಯಮಗಳಿಗೆ ಲಭ್ಯವಾಗಿದೆ.

ಮುಖರ್ಜಿ ನಿಷ್ಠಾವಂತ ತನಿಖೆಗೆ ಅಡ್ಡಗಾಲು
ಐಪಿಎಸ್ ವಲಯದಲ್ಲಿ ಸೌಮೇಂದು ಮುಖರ್ಜಿ ಅವರಿಗೆ ಉತ್ತಮ ಹೆಸರಿದೆ. ಸರ್ಕಾರಕ್ಕೆ ತಲೆನೋವು ತರುವಂತಹ ಕ್ಲಿಷ್ಟ ಪ್ರಕರಣಗಳನ್ನು ಸಮರ್ಥವಾಗಿ ಪತ್ತೆ ಮಾಡಿ ತನಿಖೆ ನಡೆಸುವ ವಿಚಾರಕ್ಕೆ ಮುಖರ್ಜಿ ಹೆಸರಾಗಿದ್ದರು. ಜಾರಕಿಹೊಳಿ ಸಿಡಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸೌಮೇಂದು ಮುಖರ್ಜಿಯನ್ನು ತನಿಖಾ ತಂಡದ ಮುಖ್ಯಸ್ಥರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ನಂತರ ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ರಮೇಶ್ ಜಾರಕಿಹೊಳಿ ನೀಡಿದ್ದ ಬ್ಲಾಕ್ ಮೇಲ್ ದೂರು ತನಿಖೆ ನಡೆಯುವ ಹಂತದಲ್ಲಿಯೇ ತಲೆ ಮರೆಸಿಕೊಂಡಿದ್ದ ಸಂತ್ರಸ್ತ ಯುವತಿ ಕೆಲಸದ ಅಮಿಷ ಒಡ್ಡಿ ಸಚಿವರು ನನ್ನನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಳು. ಇದಾದ ಕೆಲವೇ ದಿನದಲ್ಲಿ ಪ್ರಕರಣ ನಾನಾ ಆಯಾಂಗಳನ್ನು ಪಡೆದುಕೊಂಡಿತು.

ಮುಖರ್ಜಿ ನಿರ್ಗಮನ
ರಮೇಶ್ ಜಾರಕಿಹೊಳಿ ಅಶ್ಲೀಲ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿತು. ಇದೇ ಅವಧಿಯಲ್ಲಿ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಸೌಮೇಂದು ಮುಖರ್ಜಿ ಅವರು ಅನಾರೋಗ್ಯ ಕಾರಣ ನೀಡಿ ಅನಿರ್ಧಿಷ್ಟಾವಧಿ ರಜೆ ಮೇಲೆ ತೆರಳಿದರು. ಆನಂತರ ಪ್ರಕರಣವನ್ನು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ತನಿಖೆ ನಡೆಯಿತು. ಮುಖರ್ಜಿ ಅವರನ್ನು ಸರ್ಕಾರವೇ ಉದ್ದೇಶ ಪೂರ್ವಕವಾಗಿ ರಜೆ ಮೇಲೆ ಕಳಿಸಿತ್ತು ಎಂಬ ಮಾತುಗಳು ಕೂಡ ಕೇಳಿ ಬಂದವು. ಇತ್ತೀಚೆಗೆ ಅವರು ವಾಪಸು ಕರ್ತವ್ಯಕ್ಕೆ ಮರಳಿದ್ದರು.

ಅಂತಿಮ ವರದಿಯನ್ನು ಸ್ವೀಕರಿಸಿರಲಿಲ್ಲ
ಈ ಮಧ್ಯೆ ಹೈಕೋರ್ಟ್ ತನಿಖಾ ತಂಡದ ಅಂತಿಮ ವರದಿಯನ್ನು ಸ್ವೀಕರಿಸಿರಲಿಲ್ಲ. ಶಂಕಿತ ಇಬ್ಬರು ಆರೋಪಿಗಳೂ ಷರತ್ತ ಬದ್ಧ ಜಾಮೀನು ಪಡೆದುಕೊಂಡಿದ್ದರು. ಎರಡೂ ಪ್ರಕರಣದಲ್ಲಿ ಅಂತಿಮ ವರದಿ ಸಲ್ಲಿಸಲು ಎಸ್ಐಟಿ ಸಿದ್ಧತೆ ಮಾಡಿಕೊಂಡಿದ್ದು ತನಿಖಾ ತಂಡದ ಮುಖ್ಯಸ್ಥರಾಗಿ ಸಹಿ ಹಾಕಲು ಸಂದೀಪ್ ಪಾಟೀಲ್ ಅವರಿಗೆ ಅಧಿಕಾರ ಹಸ್ತಾಂತರಿಸಲಾಗಿದೆ. ಶೀಘ್ರದಲ್ಲಿಯೇ ಎಸ್ಐಟಿ ಅಂತಿಮ ವರದಿಯನ್ನು ಸಲ್ಲಿಸಿ ಹೈಕೋರ್ಟ್ ಗೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ.

ಸಚಿವ ಸ್ಥಾನಕ್ಕೆ ಲಾಬಿ
ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಬಳಿಕ ಸಚಿವ ಸ್ಥಾನ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿಗೆ ಹೊಸ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ನಮ್ಮ ಕುಟುಂಬಕ್ಕೆ ಇದೇ ಮೊದಲ ಬಾರಿಗೆ ಸಚಿವ ಸ್ಥಾನ ನೀಡಿಲ್ಲ ಎಂದು ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೆಹಲಿಗೆ ಹೋಗಿ ಲಾಬಿ ಮಾಡಿದ್ದು, ಪ್ರಕರಣದ ಅಂತಿಮ ವರದಿ ಸಲ್ಲಿಕೆ ತೊಡಕಾಗಿದೆ. ಎಸ್ಐಟಿ ಅಂತಿಮ ವರದಿ ಸಲ್ಲಿಸಿದ ಬಳಿಕ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಅಲಂಕರಿಸಿದರೂ ಅಚ್ಚರಿ ಪಡಬೇಕಿಲ್ಲ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications