ಎಲ್ಲ ದೇಶಗಳಿಗೂ ಚಂದ್ರನ ಮೇಲೇಕೆ ಕಣ್ಣು?
ಚಂದ್ರನ ಅಂಗಳಕ್ಕೆ ಉಪಗ್ರಹವನ್ನು ಕಳುಹಿಸುವ ಭಾರತದ ಮಹತ್ವಾಕಾಂಕ್ಷಿ ಯೋಜನೆ ಎಂದೇ ಬಿಂಬಿಸಲಾದ ಚಂದ್ರಯಾನ-1 ನನ್ನ ಪ್ರಕಾರ ಒಂದು ನಿಷ್ಪ್ರಯೋಜಕ, ಲಾಭರಹಿತ ಯೋಜನೆ. ಸುಖಾಸುಮ್ಮನೆ ಸಾರ್ವಜನಿಕ ಸಂಪತ್ತಾದ 400 ಕೋಟಿ ರು.ಗಳನ್ನು ಈ ಯೋಜನೆಗಾಗಿ ಖರ್ಚು ಮಾಡಿ ಚಂದ್ರನನ್ನು ಸುತ್ತಲು ಉಪಗ್ರಹ ಉಡಾಯಿಸಲಾಯಿತು. ಮತ್ತೊಂದು ಮುಖ್ಯ ವಿಚಾರವೆಂದರೆ ಈ ಉಪಗ್ರಹಕ್ಕೆ ವಿಮೆ ಮಾಡಿಸಿರಲಿಲ್ಲ. ಒಂದು ವೇಳೆ ಅನಾಹುತ ಸಂಭವಿಸಿದ್ದರೆ, ಅಷ್ಟೂ ಹಣ ಹೊಳೆಯಲ್ಲಿ ಹುಣಸೆಹಣ್ಣು ತೊಳೆದಂತೆ ಆಗುತ್ತಿತ್ತು.
ಚಂದ್ರನ ಬಗ್ಗೆ ಈ ವಿಜ್ಞಾನಿಗಳಿಗೆ ಅದು ಏನು ಮೋಹವೋ ವ್ಯಾಮೋಹವೋ? ಚಂದ್ರನ ಅನ್ವೇಷಣೆಗಾಗಿ ಇದುವರೆಗೂ ಸಾರ್ವಜನಿಕರ ಅಪಾರ ಹಣ ಬಳಸಿಕೊಂಡಿದ್ದಾರೆ. ಬರೀ ಆಕಾಶದ ಕಡೆಗೆ ದೃಷ್ಟಿ ನೆಡುವ ವಿಜ್ಞಾನಿಗಳು ಭೂಮಿ ಕಡೆಗೂ ಒಂಚೂರು ಕಣ್ಣಾಡಿಸಿದ್ದರೆ ಬಡತನ ರೇಖೆಗಿಂತಲೂ ಕೆಳಗಿರುವ, ಹೊಟ್ಟೆಗೆ ಹಿಟ್ಟಿಲ್ಲದೆ ನರಳುತ್ತಿರುವ ಲಕ್ಷಾಂತರ ಅನಾಥರು ಕಾಣುತ್ತಿದ್ದರು. ಹೊಸ ಹೊಸ ಶೋಧನೆಗಳನ್ನು ನಾನು ವಿರೋಧಿಸುತ್ತಿಲ್ಲ. ವಿಜ್ಞಾನಿಗಳು ಸಮಾಜದೊಂದಿಗೂ ಉತ್ತಮ ಬಾಂಧವ್ಯ ಹೊಂದಿರಬೇಕಾಗುತ್ತದೆ, ಅಂದರೆ ಭೂಮ್ಯ ಮೇಲಿನ ಆಗುಹೋಗುಗಳಿಗೆ ಸ್ಪಂದಿಸಬೇಕಾಗುತ್ತದೆ.
ವಿಜ್ಞಾನಿಗಳು ಹೇಳುವ ಪ್ರಕಾರ ಚಂದ್ರನಲ್ಲಿರು ಗುಟ್ಟುಗಳನ್ನು ಶೋಧಿಸುವ ಸಲುವಾಗಿ ಚಂದ್ರಯಾನವನ್ನು ಕೈಗೊಳ್ಳಲಾಗಿದೆ. ಅಲ್ಲಿನ ಖನಿಜ ಸಂಪತ್ತನ್ನು ಶೋಧಿಸಲು ನೆರವಾಗುತ್ತದೆ ಎನ್ನುತ್ತಿದ್ದಾರೆ. ಅಲ್ಲಿ ಖನಿಜಗಳಿದ್ದರೆ ನಮಗೇನು ಪ್ರಯೋಜನ. ಆ ಖನಿಜ ಸಂಪತ್ತನ್ನು ಇಲ್ಲಿಗೆ ತರಲು ಸಾಧ್ಯವೆ? ಹೊಟ್ಟೆ ತುಂಬಿದ ರಷ್ಯ, ಅಮೆರಿಕಾಗಳೇ ಚಂದ್ರನ ಕುರಿತ ಅನ್ವೇಷಣೆಗಳನ್ನು ಕೈಬಿಟ್ಟು ದಶಕಗಳೇ ಕಳೆದು ಹೋಗಿವೆ. ಭಾರತ ಈಗ ಚಂದ್ರಯಾನ ಕೈಗೊಳ್ಳುವುದರಲ್ಲಿ ಯಾವ ಅರ್ಥವಿದೆ? ಮಾನವನ ಏಳಿಗೆಗೆ ಶ್ರಮಿಸದೆ ವಿಜ್ಞಾನಿಗಳು ಅಸಂಬದ್ಧ ಪ್ರಯೋಗಗಳನ್ನು ಮಾಡುತ್ತಿರುವುದು ಶೋಚನೀಯ.
ಮತ್ತೊಂದು ವಿಚಾರ. ಎಲ್ಲ ದೇಶಗಳೂ ಚಂದ್ರನ ಮೇಲೆಯೇ ಯಾಕೆ ಕಣ್ಣಿಟ್ಟಿದ್ದಾರೆ. ಬೇರೆ ಗ್ರಹಗಳೇ ಇಲ್ಲವಾ !
ರಮೇಶ್ , ಬಾಳೆಹೊನ್ನೂರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications