233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg478630letter to the editorಮತದಾನ ನಿರಾಶೆ! ಮತದಾರರ ಹತಾಶೆ!/response/2009/0424-letter-to-the-editor-lok-sabha-election-2009.htmlನನ್ನ ಭಯ ನಿಜವಾಗಿದೆ. ಕರ್ನಾಟಕದಲ್ಲಿ ಮೊದಲ ಸುತ್ತಿನ ಮತದಾನದ ಪ್ರಮಾಣ ಅತ್ಯಂತ ಕಳಪೆಯಾಗಿದೆ. ರಾಜ್ಯದಲ್ಲಿ ಮೊದಲ ಸುತ್ತಿನಲ್ಲಿ ಶೇಕಡಾ 51ರಷ್ಟು ಮಾತ್ರ ಮತದಾನವಾಗಿದೆ. ವಿದ್ಯಾವಂತರು ಬಹುಸಂಖ್ಯೆಯಲ್ಲಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 50ರಷ್ಟು ಮಾತ್ರ ಮತದಾನವಾದರೆ ಬೆಂಗಳೂರು ಸೆಂಟ್ರಲ್ ಮತ್ತು ಉತ್ತರ ಕ್ಷೇತ್ರಗಳಲ್ಲಿ ಶೇಕಡಾ 45ರಷ್ಟು ಕಳಪೆ ಪ್ರಮಾಣದ ಮತದಾನವಾಗಿದೆ!ಹೀಗೇಕೆ ಎಂದು ಆಲೋಚಿಸಿದಾಗ ನನಗೆ ಅನ್ನಿಸುವ ಕಾರಣಗಳು 36193http://kannada.oneindia.com/img/2009/04/24-anandram-shastri2.jpg478630letter to the editorನಮ್ಮನ್ಯಾಕೆ ಹಿಂಗೆ ದೂರ ಮಾಡ್ತೀರ?/response/2009/0627-letter-to-the-editor-by-vallisha-shastry.htmlಮೃತ್ಯುಂಜಯ ಕಲ್ಮಠರ 'ಅನಿವಾಸಿಗಳಿಗ್ಯಾಕೆ ಮಣೆ ಮುಖ್ಯಮಂತ್ರಿಗಳೇ?' ಅನ್ನುವ ಲೇಖನ ಓದಿ ಬಹಳಷ್ಟು ಅನಿವಾಸಿ ಕನ್ನಡಿಗರ ಮನಸ್ಸಿಗೆ ಖೇದವಾಗಿದೆ. ಅನಿವಾಸಿಗಳ ಬಗ್ಗೆ ಮೂಲ ಅರಿವೆಯೇ ಇಲ್ಲದ ಕಲ್ಮಠರಿಗೆ ಅರಿವು ಮೂಡಲಿ ಎಂದು ಈ ಲೇಖನ.ಯಾಕರಪ್ಪಾ ನಮಗೆಲ್ಲಾ ಹಿಂಗೆ ಗೋಳ್ಹುಯ್ಕೋತೀರಾ? ಮೊದಲೇ ಹೊಟ್ಟೆಪಾಡಿಗೆ ಊರ ಬಿಟ್ಟು, ಮನೆ ಬಿಟ್ಟು ಬಂದಿದೀವಿ. ನಮ್ಮ ಅಪ್ಪ ಅಮ್ಮ ಹಣವಂತರಾಗಿದ್ದಿದ್ರೆ ನಾವ್ಯಾಕೆ ಇಲ್ಲಿಗೆ ಬರ್ತಾ 37623http://kannada.oneindia.com/img/2009/06/27-mavasu2.jpg478630letter to the editorಸರಬ್ಜಿತ್ ಗೆ ಕ್ಷಮಾದಾನ ಕೇಳಬೇಕೆ ಬೇಡವೆ?/response/2009/0629-letter-to-the-editor-bharat-sastry.html'ಪಾಕ್ ಎಂಬ ಕಾದ ಕಬ್ಬಿಣ ಬಡಿಯಲು ಇದು ಸಕಾಲ' ಕುರಿತ ಆನಂದರಾಮ ಶಾಸ್ತ್ರಿ ಲೇಖನ ಓದಿದೆ. ನನ್ನ ಕೆಲವು ಅನಿಸಿಕೆಗಳನ್ನು ವಾಚಕರ ಜತೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ಶಾಸ್ತ್ರೀ ಅವರ ಲೇಖನದ ಆಶಯವನ್ನು ನಾನು ಅಲ್ಲಗಳೆಯಲು ಪ್ರಯತ್ನಿಸುತ್ತಿಲ್ಲ. ಆದರೆ ಲೇಖನ ಯಾವುದೇ ನಿಖರ ಸಂದೇಶ ನೀಡುತ್ತಿಲ್ಲವಲ್ಲ ಎಂಬ ವಿಷಾದವಿದೆ.* ಭರತ್ ಶಾಸ್ತ್ರಿಸರಬ್ಜಿತ್ ಮತ್ತು ಅಫ್ಜಲ್ ಗುರು ಇಬ್ಬರ ಪ್ರಕರಣಗಳ 37641http://kannada.oneindia.com/img/2009/06/29-bharat-sastry1.jpg478630letter to the editorಮುಂಬಯಿ ಸಮುದ್ರ ಸೇತು ರಾಜೀವ್ ನೇಮ್ ಪ್ಲೇಟು!/response/2009/0701-mumbai-sea-bridge-too-named-after-rajiv.htmlಅಂತೂ ಇಂತೂ ಸುಮಾರು 10 ವರ್ಷದಿಂದ ಕುಂಟುತ್ತ ಸಾಗಿದ್ದ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸೇತುವೆ ಜೂನ್ 30ಕ್ಕೆ ದೇಶಕ್ಕೆ ಸಮರ್ಪಣೆಗೊಂಡಿದ್ದು ತುಂಬ ಸಂತೋಷ. ನೂರಾರು ಅಡೆತಡೆ, ಸ್ಟೇ ಇತ್ಯಾದಿಗಳನ್ನು ಬದಿಗೊತ್ತಿ ಒಂದು ಸುಂದರ ಸುಸಜ್ಜಿತ ಸೇತುವೆ ನಿರ್ಮಾಣವಾಗಿದೆ. 'ಮುಂಬೈ-ಕರ್' ಗಳಿಗೆ 40 ನಿಮಿಷದ ದಾರಿಯನ್ನು 7-8 ನಿಮಿಷದಲ್ಲಿ ಪೂರೈಸುವ ಭಾಗ್ಯ ಒದಗಿ ಬಂದಿದೆ.ಆದರೆ ಯಥಾಪ್ರಕಾರ ಸೋನಿಯಾ ಗಾಂಧಿಯವರು 37707http://kannada.oneindia.com/img/2009/07/01-ajit-hegde1.jpg478630letter to the editorಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಮತದಾನ ನಿರಾಶೆ! ಮತದಾರರ ಹತಾಶೆ! | Lok sabha election 2009 | Poor voting | Bengaluru | Letter to the editor - ಸಂಪಾದಕರಿಗೆ ಪತ್ರ : ನಿರಾಶೆ ತಂದ ಮತದಾನ - Kannada Oneindia

ಮತದಾನ ನಿರಾಶೆ! ಮತದಾರರ ಹತಾಶೆ!

H Anandarama Shastri, Bengaluru
ನನ್ನ ಭಯ ನಿಜವಾಗಿದೆ. ಕರ್ನಾಟಕದಲ್ಲಿ ಮೊದಲ ಸುತ್ತಿನ ಮತದಾನದ ಪ್ರಮಾಣ ಅತ್ಯಂತ ಕಳಪೆಯಾಗಿದೆ. ರಾಜ್ಯದಲ್ಲಿ ಮೊದಲ ಸುತ್ತಿನಲ್ಲಿ ಶೇಕಡಾ 51ರಷ್ಟು ಮಾತ್ರ ಮತದಾನವಾಗಿದೆ. ವಿದ್ಯಾವಂತರು ಬಹುಸಂಖ್ಯೆಯಲ್ಲಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 50ರಷ್ಟು ಮಾತ್ರ ಮತದಾನವಾದರೆ ಬೆಂಗಳೂರು ಸೆಂಟ್ರಲ್ ಮತ್ತು ಉತ್ತರ ಕ್ಷೇತ್ರಗಳಲ್ಲಿ ಶೇಕಡಾ 45ರಷ್ಟು ಕಳಪೆ ಪ್ರಮಾಣದ ಮತದಾನವಾಗಿದೆ!

ಹೀಗೇಕೆ ಎಂದು ಆಲೋಚಿಸಿದಾಗ ನನಗೆ ಅನ್ನಿಸುವ ಕಾರಣಗಳು ಎರಡು.

ಮೊದಲನೆಯ ಕಾರಣ, ಯಡಿಯೂರಪ್ಪನವರ ಸರ್ಕಾರದಮೇಲೆ ಜನರು, ಅದರಲ್ಲೂ ಮುಖ್ಯವಾಗಿ ಯುವಜನತೆ ಇಟ್ಟುಕೊಂಡಿದ್ದ ನಿರೀಕ್ಷೆಗಳು ಹುಸಿಯಾದುದರಿಂದ ಜನರಲ್ಲಿ ಉಂಟಾದ ಹತಾಶೆ. ಈ ಹತಾಶೆಗೆ ಯಡಿಯೂರಪ್ಪನವರೇ ನೇರ ಹೊಣೆ. ಬಳ್ಳಾರಿ ಗಣಿದಣಿಗಳನ್ನು ತಲೆಮೇಲೆ ಹೊತ್ತುಕೊಂಡದ್ದು, ಯಾವ ಸಿದ್ಧಾಂತವೂ ಇಲ್ಲದ ಸ್ವಾರ್ಥಿ ಪಕ್ಷಾಂತರಿಗಳಿಗೆ ಮಣೆಹಾಕಿ ನಿಷ್ಠಾವಂತರನ್ನು ಕಡೆಗಣಿಸಿದ್ದು, ಚರ್ಚ್ ದಾಳಿ, ಪಬ್ ದಾಳಿಗಳ ಸಂದರ್ಭಗಳಲ್ಲಿ ಅವಕಾಶವಾದಿ ಮನೋಭಾವ ತೋರಿದ್ದು, ರೈತರೊಡನೆ ಕಣ್ಣುಮುಚ್ಚಾಲೆಯಾಡಿದ್ದು, ಕೆಲಸಕ್ಕಿಂತ ಹೆಚ್ಚಾಗಿ ಆವೇಶಭರಿತ ಭಾಷಣ ಹಾಗೂ ಹೇಳಿಕೆಗಳಿಗೇ ಸಮಯವನ್ನು ಮೀಸಲಿಟ್ಟದ್ದು ಮತ್ತು ಆದ್ಯಂತ ಸರ್ವಾಧಿಕಾರಿ ಮನೋಭಾವ ಪ್ರದರ್ಶಿಸುತ್ತಿರುವುದು, ಯಡಿಯೂರಪ್ಪನವರ ಈ ನಡೆಗಳು ಮತದಾರರನ್ನು ಹತಾಶೆಯ ಮಡಿಲಿಗೆ ತಳ್ಳಿವೆ. ಕಾಂಗ್ರೆಸ್ ಅಥವಾ ಜೆಡಿಎಸ್ ಸರ್ಕಾರಕ್ಕಿಂತ ಯಡಿಯೂರಪ್ಪನವರ ಸರ್ಕಾರ ಭಿನ್ನವೇನಲ್ಲ ಎಂಬ ಭಾವನೆ ಹಲವರಲ್ಲಿ ಮೂಡಲು ಇದು ಕಾರಣವಾಗಿದೆ. ಜೊತೆಗೆ, ಎಲ್ಲ ರಾಜಕೀಯ ಪಕ್ಷಗಳೂ ಈ ಸಲ ಪರಸ್ಪರ ಕೆಸರೆರಚಾಟವನ್ನೇ ಪ್ರಮುಖ ಪ್ರಚಾರಾಸ್ತ್ರ ಮಾಡಿಕೊಂಡಿದ್ದರಿಂದಾಗಿ, ಆರ್ಥಿಕ ಹಿಂಜರಿತ ಮತ್ತು ಬೆಲೆಯೇರಿಕೆಯ ಇಂದಿನ ವಿಷಮ ಸನ್ನಿವೇಶದಲ್ಲಿ ಮುಂಚೂಣಿಯಲ್ಲಿ ಪ್ರಸ್ತಾಪವಾಗಬೇಕಿದ್ದ ಅಭಿವೃದ್ಧಿಯ ವಿಷಯಗಳು ಚುನಾವಣಾ ಪ್ರಚಾರದಲ್ಲಿ ಹಿನ್ನೆಲೆಗೆ ಸರಿದಿವೆ. ಇದರಿಂದಾಗಿಯೂ ಜನ ಬೇಸರಪಟ್ಟುಕೊಂಡಿದ್ದಾರೆ. ಪರಿಣಾಮ ನಿನ್ನೆಯ ಕಳಪೆ ಪ್ರಮಾಣದ ಮತದಾನ.

ಮತದಾನ ಕಳಪೆಯಾಗಲು ಎರಡನೆಯ ಕಾರಣ ಮತದಾರರ ಎಂದಿನ ಜಡತೆ ಮತ್ತು ಬೇಜವಾಬ್ದಾರಿ. ತಮ್ಮ ನಿರೀಕ್ಷೆಗಳು ಸುಳ್ಳಾದ ನಿರಾಶೆಯು ಸಹಜವಾಗಿಯೇ ಮತದಾರರ ಈ ಜಡತೆ ಮತ್ತು ಬೇಜವಾಬ್ದಾರಿಗಳನ್ನು ಹೆಚ್ಚಿಸಿವೆ. ಮೇಲಿಂದಮೇಲೆ ಚುನಾವಣೆಗಳು ಬಂದೆರಗುತ್ತಿರುವುದೂ ಮತದಾನದ ಪ್ರಮಾಣ ಕಡಿಮೆಯಾಗಲು ಕಾರಣಗಳಲ್ಲೊಂದು ಎನ್ನಬಹುದು.

ಎರಡನೇ ಹಂತದ ಮತದಾನವು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇನ್ನಾದರೂ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ವೈಖರಿಯನ್ನು ಬದಲಿಸುವುದೊಳ್ಳೆಯದು. ಕೆಸರೆರಚಾಟ ಬಿಟ್ಟು ಅಭಿವೃದ್ಧಿ ಯೋಜನೆಗಳ ಉಲ್ಲೇಖಕ್ಕೆ ಹೆಚ್ಚು ಒತ್ತು ಕೊಡುವುದೊಳ್ಳೆಯದು.

ಎರಡನೇ ಹಂತದಲ್ಲೂ ಇದೇ ರೀತಿ ಕಳಪೆ ಪ್ರಮಾಣದ ಮತದಾನವಾದರೆ ತೀರಾ ಅಯೋಗ್ಯರೇ ಆರಿಸಿಬರುವ ಸಾಧ್ಯತೆ ಉಲ್ಬಣಿಸುವುದರಿಂದ ಮತದಾರರೂ ಈಗ ಎಚ್ಚತ್ತುಕೊಳ್ಳಬೇಕು. ತಪ್ಪದೇ ಮತದಾನ ಮಾಡಬೇಕಾದುದು ಇಂದಿನ ಸಂದರ್ಭದಲ್ಲಿ ರಾಜ್ಯದ ಮತ್ತು ರಾಷ್ಟ್ರದ ಹಿತದೃಷ್ಟಿಯಿಂದ ಅತ್ಯಂತ ಅಪೇಕ್ಷಣೀಯ ಎಂಬುದನ್ನರಿತು ಮತದಾರರು ಎರಡನೇ ಹಂತದ ಮತದಾನದ ದಿನ ತಪ್ಪದೇ ಮತಗಟ್ಟೆಗೆ ಹೋಗಿ ಇದ್ದುದರಲ್ಲಿಯೇ ಯೋಗ್ಯ ಅಭ್ಯರ್ಥಿಗೆ ಮತ ನೀಡಬೇಕಾದ್ದು ಅತ್ಯಂತ ಅಪೇಕ್ಷಣೀಯ.

ಅವಶ್ಯ ಕಾರ್ಯಕ್ಕಾಗಿ ದೂರದೂರಿಗೆ ಹೋಗಿದ್ದ ನಾನು ಮತದಾನ ಮಾಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಮೊಟಕುಗೊಳಿಸಿ ಬೆಂಗಳೂರಿಗೆ ಹಿಂತಿರುಗಿ ಮತದಾನ ಮಾಡಿದ್ದೇನೆ. ಸಹಜವಾಗಿಯೇ ನಾನು ಸಕಲ ಮತದಾರ ಬಾಂಧವರಿಂದಲೂ ಇಂಥದೇ ಕರ್ತವ್ಯಪರತೆಯನ್ನು ನಿರೀಕ್ಷಿಸುತ್ತೇನೆ.

ಪೂರಕ ಓದಿಗೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+